<p><strong>ವಿಜಯಪುರ:</strong> ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದ ಅನುದಾನರಹಿತ ಶಾಲಾ ಶಿಕ್ಷಕ, ಶಿಕ್ಷಕಿಯರಿಗೆವಿಜಯಪುರದ ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆಯಮಧುಮೇಹ ತಜ್ಞ, ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಬಾಬುರಾಜೇಂದ್ರ ಬಿ.ನಾಯಿಕ ಅವರು ‘ಗುರು ಗೌರವ’ ಆಹಾರ ಕಿಟ್ ವಿತರಿಸಿದರು.</p>.<p>ಲಾಕ್ಡೌನ್ ಪರಿಣಾಮ ಶಾಲೆಗಳು ಬಂದ್ ಆಗಿರುವುದರಿಂದ ಒಂದು ವರ್ಷದಿಂದ ವೇತನವಿಲ್ಲದೇ ಸಂಕಷ್ಟಕ್ಕೆ ಒಳಗಾಗಿರುವ 300ಕ್ಕೂ ಅಧಿಕ ಅನುದಾನರಹಿತ ಶಾಲಾ ಶಿಕ್ಷಕ, ಶಿಕ್ಷಕಿಯರಿಗೆ ‘ಗುರು ಗೌರವ’ ಹೆಸರಿನಲ್ಲಿ ಆಹಾರ್ ಕಿಟ್ ವಿತರಿಸುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸಲಾಗುತ್ತಿದೆ ಎಂದು ಬಾಬುರಾಜೇಂದ್ರ ನಾಯಿಕ ಹೇಳಿದರು.</p>.<p>5 ಕೆ.ಜಿ ಗೋಧಿ ಹಿಟ್ಟಿ, 5 ಕೆ.ಜಿ.ಅಕ್ಕಿ, 1 ಕೆ.ಜಿ ಬೇಳೆ, 1 ಕೆ.ಜೆ.ಅವಲಕ್ಕಿ, 1 ಕೆ.ಜಿ.ರವೆ ಮತ್ತು 1 ಲೀಟರ್ ಅಡುಗೆ ಎಣ್ಣೆ ಒಳಗೊಂಡಿರುವ ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಕೋವಿಡ್ ಪರಿಣಾಮ ಬಹಳಷ್ಟು ಜನ ಕೆಲಸ ಕಳೆದುಕೊಂಡು ತೊಂದರೆಗೆ ಒಳಗಾಗಿದ್ದಾರೆ. ಅದರಲ್ಲೂ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕ ಸಂಕಷ್ಟ ಹೇಳತೀರದಾಗಿದ್ದು, ಕೈಲಾದ ಸಹಾಯ ಮಾಡಲಾಗುತ್ತಿದೆ ಎಂದರು.</p>.<p>ಲಾಕ್ಡೌನ್ ತೆರವಾಗಿರುವುದರಿಂದ ಕೋವಿಡ್ ನಿವಾರಣೆಯಾಗಿದೆ ಎಂಬ ಕಲ್ಪನೆ ಬೇಡ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಪರಸ್ಪರ ಅಂತರ ಕಾಪಾಡಬೇಕು ಎಂದು ಹೇಳಿದರು.</p>.<p>ಕೋವಿಡ್ ಲಕ್ಷಣಗಳು ಕಂಡುಬಂದರೆ ಮರೆಯದೇ ವೈದ್ಯರ ಸಲಹೆ ಪಡೆಯಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಸ್ವಯಂ ಉಪಚಾರಕ್ಕಿಂತ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಸಲಹೆ ನೀಡಿದರು.</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶ್ರಯದಲ್ಲಿ ವಿಜಯಪುರ, ಬಾಗಲಕೋಟೆ, ಮುಧೋಳ ಮತ್ತು ಜಮಖಂಡಿಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ಅವುಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದೇನೆ. ಅಗತ್ಯ ಇರುವವರು ಇಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.</p>.<p>ಬಿಜೆಪಿ ಬೆಳಗಾವಿ ವಿಭಾಗ ಪ್ರಭಾರಿಚಂದ್ರಶೇಖರ ಕವಟಗಿ, ವಿಜಯಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕ ಜಾಧವ್, ಮೆಡ್ಮಂಥನ ಹೆಲ್ತ್ ಕೇರ್ ಕಂಪನಿಯ ನಿರ್ದೇಶಕ ಸುನೀಲ್ ನಾಯಕ್, ಲಯನ್ಸ್ ಕಲ್ಬ್ ಅಧ್ಯಕ್ಷ ಫಯಾಜ್ ಕಲಾದಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದ ಅನುದಾನರಹಿತ ಶಾಲಾ ಶಿಕ್ಷಕ, ಶಿಕ್ಷಕಿಯರಿಗೆವಿಜಯಪುರದ ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆಯಮಧುಮೇಹ ತಜ್ಞ, ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಬಾಬುರಾಜೇಂದ್ರ ಬಿ.ನಾಯಿಕ ಅವರು ‘ಗುರು ಗೌರವ’ ಆಹಾರ ಕಿಟ್ ವಿತರಿಸಿದರು.</p>.<p>ಲಾಕ್ಡೌನ್ ಪರಿಣಾಮ ಶಾಲೆಗಳು ಬಂದ್ ಆಗಿರುವುದರಿಂದ ಒಂದು ವರ್ಷದಿಂದ ವೇತನವಿಲ್ಲದೇ ಸಂಕಷ್ಟಕ್ಕೆ ಒಳಗಾಗಿರುವ 300ಕ್ಕೂ ಅಧಿಕ ಅನುದಾನರಹಿತ ಶಾಲಾ ಶಿಕ್ಷಕ, ಶಿಕ್ಷಕಿಯರಿಗೆ ‘ಗುರು ಗೌರವ’ ಹೆಸರಿನಲ್ಲಿ ಆಹಾರ್ ಕಿಟ್ ವಿತರಿಸುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸಲಾಗುತ್ತಿದೆ ಎಂದು ಬಾಬುರಾಜೇಂದ್ರ ನಾಯಿಕ ಹೇಳಿದರು.</p>.<p>5 ಕೆ.ಜಿ ಗೋಧಿ ಹಿಟ್ಟಿ, 5 ಕೆ.ಜಿ.ಅಕ್ಕಿ, 1 ಕೆ.ಜಿ ಬೇಳೆ, 1 ಕೆ.ಜೆ.ಅವಲಕ್ಕಿ, 1 ಕೆ.ಜಿ.ರವೆ ಮತ್ತು 1 ಲೀಟರ್ ಅಡುಗೆ ಎಣ್ಣೆ ಒಳಗೊಂಡಿರುವ ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಕೋವಿಡ್ ಪರಿಣಾಮ ಬಹಳಷ್ಟು ಜನ ಕೆಲಸ ಕಳೆದುಕೊಂಡು ತೊಂದರೆಗೆ ಒಳಗಾಗಿದ್ದಾರೆ. ಅದರಲ್ಲೂ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕ ಸಂಕಷ್ಟ ಹೇಳತೀರದಾಗಿದ್ದು, ಕೈಲಾದ ಸಹಾಯ ಮಾಡಲಾಗುತ್ತಿದೆ ಎಂದರು.</p>.<p>ಲಾಕ್ಡೌನ್ ತೆರವಾಗಿರುವುದರಿಂದ ಕೋವಿಡ್ ನಿವಾರಣೆಯಾಗಿದೆ ಎಂಬ ಕಲ್ಪನೆ ಬೇಡ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಪರಸ್ಪರ ಅಂತರ ಕಾಪಾಡಬೇಕು ಎಂದು ಹೇಳಿದರು.</p>.<p>ಕೋವಿಡ್ ಲಕ್ಷಣಗಳು ಕಂಡುಬಂದರೆ ಮರೆಯದೇ ವೈದ್ಯರ ಸಲಹೆ ಪಡೆಯಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಸ್ವಯಂ ಉಪಚಾರಕ್ಕಿಂತ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಸಲಹೆ ನೀಡಿದರು.</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶ್ರಯದಲ್ಲಿ ವಿಜಯಪುರ, ಬಾಗಲಕೋಟೆ, ಮುಧೋಳ ಮತ್ತು ಜಮಖಂಡಿಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ಅವುಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದೇನೆ. ಅಗತ್ಯ ಇರುವವರು ಇಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.</p>.<p>ಬಿಜೆಪಿ ಬೆಳಗಾವಿ ವಿಭಾಗ ಪ್ರಭಾರಿಚಂದ್ರಶೇಖರ ಕವಟಗಿ, ವಿಜಯಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕ ಜಾಧವ್, ಮೆಡ್ಮಂಥನ ಹೆಲ್ತ್ ಕೇರ್ ಕಂಪನಿಯ ನಿರ್ದೇಶಕ ಸುನೀಲ್ ನಾಯಕ್, ಲಯನ್ಸ್ ಕಲ್ಬ್ ಅಧ್ಯಕ್ಷ ಫಯಾಜ್ ಕಲಾದಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>