<p><strong>ವಿಜಯಪುರ</strong>: ‘ವಿಶೇಷ ಸಚಿವ ಸಂಪುಟ ವಿಶೇಷ ಸಭೆಯನ್ನು ವಿಜಯಪುರದಲ್ಲಿ ಮಾಡಲು ಸಿದ್ಧರಿದ್ದೇವೆ. ಜಿಲ್ಲೆಗೆ ಹಲವು ಯೋಜನೆ ಜಾರಿಗೆ ತರುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.</p><p> ‘ನೀರಾವರಿ ಸಚಿವನಾದ ಮೇಲೆ ಇಂಡಿಗೆ ಕೊಟ್ಟಷ್ಟು ಅನುದಾನವನ್ನು ರಾಜ್ಯದ ಬೇರಾವ ಕ್ಷೇತ್ರಕ್ಕೂ ನೀಡಿಲ್ಲ, ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ₹ 3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ’ ಎಂದರು.</p><p>‘2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಬೇಕು, ಜಿಲ್ಲೆಯ ಎಲ್ಲ ಎಂಟು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಬೇಕು’ ಎಂದರು.</p><p>‘ನಿಮ್ಮ ಶಾಸಕರು ನನಗೆ ಏನೂ ಬೇಡ, ನಮ್ಮ ಭಾಗದ ರೈತರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ಹೀಗಾಗಿ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ, ತಿಡಗುಂದಿ ಶಾಖಾ ಕಾಲುವೆ ಹಾಗೂ ಇಂಡಿ ತಾಲ್ಲೂಕಿನ 90 ಕೆರೆಗಳನ್ನು ಭರ್ತಿಗೊಳಿಸುವ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಮಾಡಲಾಗಿದೆ. ವಿವಿಧ ಇಲಾಖೆಗಳಿಂದ ಒಟ್ಟಾರೆ ₹ 4,555 ಕೋಟಿ ಮೊತ್ತದ ಕಾಮಗಾರಿಗಳಿಗೆ ಭೂಮಿ ಪೂಜೆ ಹಮ್ಮಿಕೊಂಡಿದ್ದೇವೆ’ ಎಂದು ಹೇಳಿದರು.</p><p>‘ನಿಂಬೆಗಿಂತ ಶ್ರೇಷ್ಠ ಹುಳಿ ಮತ್ತೊಂದಿಲ್ಲ, ದುಂಬಿಗಿಂತ ಶ್ರೇಷ್ಠವಾದ ಕಪ್ಪು ಮತ್ತೊಂದಿಲ್ಲ, ಶಂಭುಗಿಂತ ದೊಡ್ಡ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಗುಣ ಬೇರೋಂದಿಲ್ಲ’ ಎಂದು ಸರ್ವಜ್ಞನ ವಚನವನ್ನು ಡಿಸಿಎಂ ಹೇಳಿದರು.</p><p>‘ಅದೇ ರೀತಿ ಇಂದು ಇಂಡಿ ತಾಲ್ಲೂಕಿನ ಮಹಾಜನತೆ ನಮ್ಮ ಮೇಲೆ ನಂಬಿಕೆ ಇಟ್ಟು ಮೂರು ಬಾರಿ ಯಶವಂತ ಪಾಟೀಲ್ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದೀರಿ. ಹೀಗಾಗಿ ನಿಮ್ಮ ನಂಬಿಕೆಗೆ ಪ್ರತಿಯಾಗಿ ನಮ್ಮ ಇಡೀ ಸರ್ಕಾರ ನಿಮ್ಮ ಮುಂದೆ ಬಂದು ಸಾವಿರಾರು ಕೋಟಿ ಮೊತ್ತದ ಯೋಜನೆಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುತ್ತಿದ್ದೇವೆ. ಇದೇ ನಮ್ಮ ಭಾಗ್ಯ’ ಎಂದು ತಿಳಿಸಿದರು.</p><p>‘ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ ಪಾಟೀಲ್ ಅವರು ಈ ಭಾಗದಲ್ಲಿ ಹೆಚ್ಚು ಕೈಗಾರಿಕೆ ತರಬೇಕು ಎಂದು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಈ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ’ ಎಂದು ಹೇಳಿದರು.</p><p>ಬಿಜೆಪಿ ಟೀಕೆಗಳು ಸಾಯುತ್ತವೆ ನಮ್ಮ ಯೋಜನೆಗಳು ಶಾಶ್ವತವಾಗಿ ಉಳಿಯುತ್ತವೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ನಂಬಿಕೆ ಬಹಳ ಮುಖ್ಯವಾದುದು -ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ವಿಶೇಷ ಸಚಿವ ಸಂಪುಟ ವಿಶೇಷ ಸಭೆಯನ್ನು ವಿಜಯಪುರದಲ್ಲಿ ಮಾಡಲು ಸಿದ್ಧರಿದ್ದೇವೆ. ಜಿಲ್ಲೆಗೆ ಹಲವು ಯೋಜನೆ ಜಾರಿಗೆ ತರುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.</p><p> ‘ನೀರಾವರಿ ಸಚಿವನಾದ ಮೇಲೆ ಇಂಡಿಗೆ ಕೊಟ್ಟಷ್ಟು ಅನುದಾನವನ್ನು ರಾಜ್ಯದ ಬೇರಾವ ಕ್ಷೇತ್ರಕ್ಕೂ ನೀಡಿಲ್ಲ, ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ₹ 3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ’ ಎಂದರು.</p><p>‘2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಬೇಕು, ಜಿಲ್ಲೆಯ ಎಲ್ಲ ಎಂಟು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಬೇಕು’ ಎಂದರು.</p><p>‘ನಿಮ್ಮ ಶಾಸಕರು ನನಗೆ ಏನೂ ಬೇಡ, ನಮ್ಮ ಭಾಗದ ರೈತರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ಹೀಗಾಗಿ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ, ತಿಡಗುಂದಿ ಶಾಖಾ ಕಾಲುವೆ ಹಾಗೂ ಇಂಡಿ ತಾಲ್ಲೂಕಿನ 90 ಕೆರೆಗಳನ್ನು ಭರ್ತಿಗೊಳಿಸುವ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಮಾಡಲಾಗಿದೆ. ವಿವಿಧ ಇಲಾಖೆಗಳಿಂದ ಒಟ್ಟಾರೆ ₹ 4,555 ಕೋಟಿ ಮೊತ್ತದ ಕಾಮಗಾರಿಗಳಿಗೆ ಭೂಮಿ ಪೂಜೆ ಹಮ್ಮಿಕೊಂಡಿದ್ದೇವೆ’ ಎಂದು ಹೇಳಿದರು.</p><p>‘ನಿಂಬೆಗಿಂತ ಶ್ರೇಷ್ಠ ಹುಳಿ ಮತ್ತೊಂದಿಲ್ಲ, ದುಂಬಿಗಿಂತ ಶ್ರೇಷ್ಠವಾದ ಕಪ್ಪು ಮತ್ತೊಂದಿಲ್ಲ, ಶಂಭುಗಿಂತ ದೊಡ್ಡ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಗುಣ ಬೇರೋಂದಿಲ್ಲ’ ಎಂದು ಸರ್ವಜ್ಞನ ವಚನವನ್ನು ಡಿಸಿಎಂ ಹೇಳಿದರು.</p><p>‘ಅದೇ ರೀತಿ ಇಂದು ಇಂಡಿ ತಾಲ್ಲೂಕಿನ ಮಹಾಜನತೆ ನಮ್ಮ ಮೇಲೆ ನಂಬಿಕೆ ಇಟ್ಟು ಮೂರು ಬಾರಿ ಯಶವಂತ ಪಾಟೀಲ್ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದೀರಿ. ಹೀಗಾಗಿ ನಿಮ್ಮ ನಂಬಿಕೆಗೆ ಪ್ರತಿಯಾಗಿ ನಮ್ಮ ಇಡೀ ಸರ್ಕಾರ ನಿಮ್ಮ ಮುಂದೆ ಬಂದು ಸಾವಿರಾರು ಕೋಟಿ ಮೊತ್ತದ ಯೋಜನೆಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುತ್ತಿದ್ದೇವೆ. ಇದೇ ನಮ್ಮ ಭಾಗ್ಯ’ ಎಂದು ತಿಳಿಸಿದರು.</p><p>‘ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ ಪಾಟೀಲ್ ಅವರು ಈ ಭಾಗದಲ್ಲಿ ಹೆಚ್ಚು ಕೈಗಾರಿಕೆ ತರಬೇಕು ಎಂದು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಈ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ’ ಎಂದು ಹೇಳಿದರು.</p><p>ಬಿಜೆಪಿ ಟೀಕೆಗಳು ಸಾಯುತ್ತವೆ ನಮ್ಮ ಯೋಜನೆಗಳು ಶಾಶ್ವತವಾಗಿ ಉಳಿಯುತ್ತವೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ನಂಬಿಕೆ ಬಹಳ ಮುಖ್ಯವಾದುದು -ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>