<p><strong>ಹೊರ್ತಿ</strong>: ಸಮೀಪದ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಭಾವೈಕ್ಯ ತಾಣ ಶ್ರೀಕ್ಷೇತ್ರ ಇಂಚಗೇರಿ ಮಠಕ್ಕೆ ಶುಕ್ರವಾರ ಹಿರಿಯ ನಟ ದೊಡ್ಡಣ್ಣ ಭೇಟಿ ನೀಡಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಅಹಂಕಾರ ಬಿಟ್ಟಾಗ ಆತ್ಮ ಸಾಕ್ಷಾತ್ಕಾರವಾಗುವುದು. ಮೊಬೈಲ್ ಗೀಳಿನಿಂದ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಓದುವ ರೂಢಿ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಇಲ್ಲಿನ ಸ್ವಾತಂತ್ರ್ಯ ಸೇನಾನಿ ಮುರುಗೋಡ ಮಹಾದೇವರ ಹಾಗೂ ಭಾವೂಸಾಹೇಬರ, ಗಿಮಲ್ಲೇಶ್ವರ ಮಹಾರಾಜರ ದೇವಸ್ಥಾನಗಳ ಕತೃ ಗದ್ದುಗೆಗಳ ದರ್ಶನ ಪಡೆದರು. ಮಠದ ಪೀಠಾಧಿಪತಿ ರೇವಣಸಿದ್ಧೇಶ್ವರ ಮಹಾರಾಜರಿಗೆ ಸನ್ಮಾನಿಸಿದರು. ಕೆಲ ಕಾಲ ಮಠದ ಕುರಿತು, ಸಂತ-ಮಹಂತರ, ಗುರು ಮಹಾರಾಜರ ಹಾಗೂ ಅಧ್ಯಾತ್ಮ ಚಿಂತನ-ಮಂಥನದ ಮಹತ್ವದ ಕುರಿತು ಮತ್ತು ಆತ್ಮಜ್ಞಾನಿ, ಸ್ವಾತಂತ್ರ್ಯ ಸೇನಾನಿ ಮುರಗೋಡ ಮಹಾದೇವರ ಸ್ವಾತಂತ್ರ್ಯ ಚಳವಳಿಯಲ್ಲಿನ ಪ್ರಮುಖ ಪಾತ್ರದ ಕುರಿತು ಚರ್ಚೆ ನಡೆಸಿದರು. ಈ ವೇಳೆ ರೇವಣಸಿದ್ಧೇಶ್ವರ ಶ್ರೀ ದೊಡ್ಡಣ್ಣ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.</p>.<p>ಈ ಸಂದರ್ಭದಲ್ಲಿ ನಿರ್ಮಾಪಕ ಮಾಧವಾನಂದ ಶೇಗುಣಸಿ, ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ, ಮಲ್ಲಿಕಾರ್ಜುನ ಕಾಲತಿಪ್ಪಿ, ಪ್ರಕಾಶ ಕಾಲತಿಪ್ಪಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊರ್ತಿ</strong>: ಸಮೀಪದ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಭಾವೈಕ್ಯ ತಾಣ ಶ್ರೀಕ್ಷೇತ್ರ ಇಂಚಗೇರಿ ಮಠಕ್ಕೆ ಶುಕ್ರವಾರ ಹಿರಿಯ ನಟ ದೊಡ್ಡಣ್ಣ ಭೇಟಿ ನೀಡಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಅಹಂಕಾರ ಬಿಟ್ಟಾಗ ಆತ್ಮ ಸಾಕ್ಷಾತ್ಕಾರವಾಗುವುದು. ಮೊಬೈಲ್ ಗೀಳಿನಿಂದ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಓದುವ ರೂಢಿ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಇಲ್ಲಿನ ಸ್ವಾತಂತ್ರ್ಯ ಸೇನಾನಿ ಮುರುಗೋಡ ಮಹಾದೇವರ ಹಾಗೂ ಭಾವೂಸಾಹೇಬರ, ಗಿಮಲ್ಲೇಶ್ವರ ಮಹಾರಾಜರ ದೇವಸ್ಥಾನಗಳ ಕತೃ ಗದ್ದುಗೆಗಳ ದರ್ಶನ ಪಡೆದರು. ಮಠದ ಪೀಠಾಧಿಪತಿ ರೇವಣಸಿದ್ಧೇಶ್ವರ ಮಹಾರಾಜರಿಗೆ ಸನ್ಮಾನಿಸಿದರು. ಕೆಲ ಕಾಲ ಮಠದ ಕುರಿತು, ಸಂತ-ಮಹಂತರ, ಗುರು ಮಹಾರಾಜರ ಹಾಗೂ ಅಧ್ಯಾತ್ಮ ಚಿಂತನ-ಮಂಥನದ ಮಹತ್ವದ ಕುರಿತು ಮತ್ತು ಆತ್ಮಜ್ಞಾನಿ, ಸ್ವಾತಂತ್ರ್ಯ ಸೇನಾನಿ ಮುರಗೋಡ ಮಹಾದೇವರ ಸ್ವಾತಂತ್ರ್ಯ ಚಳವಳಿಯಲ್ಲಿನ ಪ್ರಮುಖ ಪಾತ್ರದ ಕುರಿತು ಚರ್ಚೆ ನಡೆಸಿದರು. ಈ ವೇಳೆ ರೇವಣಸಿದ್ಧೇಶ್ವರ ಶ್ರೀ ದೊಡ್ಡಣ್ಣ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.</p>.<p>ಈ ಸಂದರ್ಭದಲ್ಲಿ ನಿರ್ಮಾಪಕ ಮಾಧವಾನಂದ ಶೇಗುಣಸಿ, ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ, ಮಲ್ಲಿಕಾರ್ಜುನ ಕಾಲತಿಪ್ಪಿ, ಪ್ರಕಾಶ ಕಾಲತಿಪ್ಪಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>