<p><strong>ವಿಜಯಪುರ</strong>: ತಾಲ್ಲೂಕಿನ ತಿಡಗುಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಡೊಮನಾಳ ಗುಡ್ಡದಲ್ಲಿ ನಡೆದಿರುವ ಹಸಿರಿಕರಣ ಕಾರ್ಯಕ್ಕೆ ಎಲ್ಲ ರೀತಿಯ ನೇರವು ನೀಡುವುದಾಗಿಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ ಭರವಸೆ ನೀಡಿದರು.</p>.<p>ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುಡ್ಡದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.</p>.<p>ಜಿಲ್ಲಾ ಪಂಚಾಯ್ತಿ ನಿವೃತ್ತ ಉಪ ತಹಶೀಲ್ದಾರ್ ಎನ್.ಡಿ.ಪಾಟೀಲ್ ಅವರ ಮತ್ತು ತಂಡದಹಸಿರಿಕರಣ ಕಾರ್ಯವನ್ನು ಶ್ಲಾಘಿಸಿದರು.</p>.<p>ವಿಜಯಪುರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಡಾ.ಬಾಬು ಸಜ್ಜನ ಮಾತನಾಡಿ, ಗುಡ್ಡದಲ್ಲಿ 37 ಪ್ರಭೇದದ ಸಸ್ಯಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಈ ಎಲ್ಲ ಕಾರ್ಯಗಳಿಗೆ ಎನ್.ಡಿ. ಪಾಟೀಲ್ ನೇತೃತ್ವವನ್ನು ವಹಿಸಿದ್ದಾರೆ ಎಂದರು.</p>.<p>ಗುಡ್ಡದ ಮೇಲಿರುವ ದಾವಲ್ ಮಲ್ಲಿಕ್ ದರ್ಗಾದಲ್ಲಿ ಅತಿಥಿಗಳು ಪೂಜೆ ಸಲ್ಲಿಸಿದರು.</p>.<p>ಡಾ.ಮಹಾಂತೇಶ ಬಿರಾದಾರ, ಡಿಸಿಎಫ್ ಸರೀನಾ ಸಿಕ್ಕಲಗಾರ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ಬಿ. ಬಿರಾದಾರ, ಡಾ.ಮುರಗೇಶ ಪಟ್ಟಣಶೆಟ್ಟಿ, ನಿವೃತ್ತ ಎಂಜಿನಿಯರ್ ಎಸ್.ಎ.ಪಾಟೀಲ, ತಿಡಗುಂದಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಮನಗೌಡ ಬಿರಾದಾರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪರುಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ತಾಲ್ಲೂಕಿನ ತಿಡಗುಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಡೊಮನಾಳ ಗುಡ್ಡದಲ್ಲಿ ನಡೆದಿರುವ ಹಸಿರಿಕರಣ ಕಾರ್ಯಕ್ಕೆ ಎಲ್ಲ ರೀತಿಯ ನೇರವು ನೀಡುವುದಾಗಿಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ ಭರವಸೆ ನೀಡಿದರು.</p>.<p>ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುಡ್ಡದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.</p>.<p>ಜಿಲ್ಲಾ ಪಂಚಾಯ್ತಿ ನಿವೃತ್ತ ಉಪ ತಹಶೀಲ್ದಾರ್ ಎನ್.ಡಿ.ಪಾಟೀಲ್ ಅವರ ಮತ್ತು ತಂಡದಹಸಿರಿಕರಣ ಕಾರ್ಯವನ್ನು ಶ್ಲಾಘಿಸಿದರು.</p>.<p>ವಿಜಯಪುರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಡಾ.ಬಾಬು ಸಜ್ಜನ ಮಾತನಾಡಿ, ಗುಡ್ಡದಲ್ಲಿ 37 ಪ್ರಭೇದದ ಸಸ್ಯಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಈ ಎಲ್ಲ ಕಾರ್ಯಗಳಿಗೆ ಎನ್.ಡಿ. ಪಾಟೀಲ್ ನೇತೃತ್ವವನ್ನು ವಹಿಸಿದ್ದಾರೆ ಎಂದರು.</p>.<p>ಗುಡ್ಡದ ಮೇಲಿರುವ ದಾವಲ್ ಮಲ್ಲಿಕ್ ದರ್ಗಾದಲ್ಲಿ ಅತಿಥಿಗಳು ಪೂಜೆ ಸಲ್ಲಿಸಿದರು.</p>.<p>ಡಾ.ಮಹಾಂತೇಶ ಬಿರಾದಾರ, ಡಿಸಿಎಫ್ ಸರೀನಾ ಸಿಕ್ಕಲಗಾರ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ಬಿ. ಬಿರಾದಾರ, ಡಾ.ಮುರಗೇಶ ಪಟ್ಟಣಶೆಟ್ಟಿ, ನಿವೃತ್ತ ಎಂಜಿನಿಯರ್ ಎಸ್.ಎ.ಪಾಟೀಲ, ತಿಡಗುಂದಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಮನಗೌಡ ಬಿರಾದಾರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪರುಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>