<p><strong>ಮುದ್ದೇಬಿಹಾಳ</strong>: ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.</p>.<p>ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.</p>.<p>ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.</p>.<p>ಇಳಕಲ್ ಪ್ರವಚನಕಾರ ಲಾಲಹುಸೇನ ಕಂದಗಲ್, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ್ ಮನಿಯಾರ, ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು.</p>.<p>ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಐ.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ</strong>: ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.</p>.<p>ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.</p>.<p>ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.</p>.<p>ಇಳಕಲ್ ಪ್ರವಚನಕಾರ ಲಾಲಹುಸೇನ ಕಂದಗಲ್, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ್ ಮನಿಯಾರ, ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು.</p>.<p>ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಐ.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>