<p><strong>ವಿಜಯಪುರ</strong>: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸುವ ಗಜಾನನ ಮಂಡಳಿಗಳಿಗೆ ಅವರವರ ಪೆಂಡಾಲ್ ಗಳಿಗೆ ಹೋಗಿ ₹5 ಸಾವಿರ ದೇಣಿಗೆ ಹಾಗೂ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಭಾವಚಿತ್ರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.</p>.<p>ಗಜಾನನ ಮಂಡಳಿಗಳ ಪದಾಧಿಕಾರಿಗಳು ತಮ್ಮ ಕೆಲಸ, ಕಾರ್ಯಗಳನ್ನು ಬಿಟ್ಟು ಗಣೇಶನ ದೇಣಿಗೆಗಾಗಿ ಶಾಸಕರ ಕಚೇರಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ನಿಮ್ಮ ನಿಮ್ಮ ಪೆಂಡಾಲ್ ಗಳಲ್ಲಿಯೇ ಬಂದು ನಮ್ಮ ಸ್ವಾಮಿ ವಿವೇಕಾನಂದ ಸೇನೆಯ ಪದಾಧಿಕಾರಿಗಳು ದೇಣಿಗೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.</p>.<p><strong>ಸನಾತನ ವೇದಿಕೆ</strong></p>.<p>ವಿಜಯಪುರದಲ್ಲಿ ಈ ಬಾರಿ ಸ್ವಾಮಿ ವಿವೇಕಾನಂದ ಸೇನೆಯಿಂದ ಆಚರಿಸುವ ಗಜಾನನ ಮಹಾಮಂಡಳದ ವೇದಿಕೆಗೆ ಸನಾತನ ಹಿಂದೂ ವೇದಿಕೆ ಎಂದು ನಾಮಕರಣ ಮಾಡಲಾಗುವುದು ಎಂದು ಸೇನೆಯ ಅಧ್ಯಕ್ಷ ರಾಘವ ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸುವ ಗಜಾನನ ಮಂಡಳಿಗಳಿಗೆ ಅವರವರ ಪೆಂಡಾಲ್ ಗಳಿಗೆ ಹೋಗಿ ₹5 ಸಾವಿರ ದೇಣಿಗೆ ಹಾಗೂ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಭಾವಚಿತ್ರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.</p>.<p>ಗಜಾನನ ಮಂಡಳಿಗಳ ಪದಾಧಿಕಾರಿಗಳು ತಮ್ಮ ಕೆಲಸ, ಕಾರ್ಯಗಳನ್ನು ಬಿಟ್ಟು ಗಣೇಶನ ದೇಣಿಗೆಗಾಗಿ ಶಾಸಕರ ಕಚೇರಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ನಿಮ್ಮ ನಿಮ್ಮ ಪೆಂಡಾಲ್ ಗಳಲ್ಲಿಯೇ ಬಂದು ನಮ್ಮ ಸ್ವಾಮಿ ವಿವೇಕಾನಂದ ಸೇನೆಯ ಪದಾಧಿಕಾರಿಗಳು ದೇಣಿಗೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.</p>.<p><strong>ಸನಾತನ ವೇದಿಕೆ</strong></p>.<p>ವಿಜಯಪುರದಲ್ಲಿ ಈ ಬಾರಿ ಸ್ವಾಮಿ ವಿವೇಕಾನಂದ ಸೇನೆಯಿಂದ ಆಚರಿಸುವ ಗಜಾನನ ಮಹಾಮಂಡಳದ ವೇದಿಕೆಗೆ ಸನಾತನ ಹಿಂದೂ ವೇದಿಕೆ ಎಂದು ನಾಮಕರಣ ಮಾಡಲಾಗುವುದು ಎಂದು ಸೇನೆಯ ಅಧ್ಯಕ್ಷ ರಾಘವ ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>