ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಡೋಣಿ ನದಿಯಲ್ಲಿ ಪ್ರವಾಹ, ಕೊಚ್ಚಿಹೋದ ವ್ಯಕ್ತಿ

Last Updated 22 ಸೆಪ್ಟೆಂಬರ್ 2021, 11:56 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ತಾಳಿಕೋಟೆ –ಹಡಗಿನಾಳ ಸಂಪರ್ಕ ಸೇತುವೆ ಮೇಲೆ ಉಕ್ಕಿ ಹರಿಯುತ್ತಿರುವ ಡೋಣಿ ನದಿಯನ್ನು ದಾಟಲು ಹೋದ ವ್ಯಕ್ತಿಯೊಬ್ಬರು ಬುಧವಾರ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ತಾಳಿಕೋಟೆ ನಿವಾಸಿ ಇಬ್ರಾಹಿಂ ಬೇಪಾರಿ(56) ಕೊಚ್ಚಿಹೋದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಗ್ನಿ ಶಾಮಕ ಮತ್ತು ಪೊಲೀಸ್‌ ಸಿಬ್ಬಂದಿ ವ್ಯಕ್ತಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.

ವಿಜಯಪುರ ನಗರ ಸೇರಿದಂತೆ ಸಿಂದಗಿ, ತಾಳಿಕೋಟೆ, ನಾಲತವಾಡ, ಮುದ್ದೇಬಿಹಾಳ, ತಿಕೋಟಾ, ಬಬಲೇಶ್ವರ, ದೇವರ ಹಿಪ್ಪರಗಿ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT