ಮುಕಿಹಾಳ, ಢವಳಗಿ, ಪಡೇಕನೂರ, ಲಿಂಗದಳ್ಳಿ, ಹಂದ್ರಾಳ ವ್ಯಾಪ್ತಿಯಲ್ಲೂ ಭಾರಿ ಮಳೆಯಿಂದ ಜಮೀನುಗಳು ಜಲಾವೃತವಾಗಿದೆ. ಬಿತ್ತನೆ ಮಾಡಲಾಗಿದ್ದ ತೊಗರಿ ನೀರಿನಲ್ಲಿ ಮುಳುಗಿದ್ದು ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ವಿಜಯಪುರ ನಗರ, ಮುದ್ದೇಬಿಹಾಳ, ನಾಲತವಾಡ, ತಾಳಿಕೋಟೆ, ಬಸವ ಬಾಗೇವಾಡಿ ಪಟ್ಟಣದಲ್ಲೂ ಗುಡುಗು, ಸಿಡಿಲಿನೊಂದಿಗೆ ಉತ್ತಮ ಮಳೆಯಾಯಿತು.