<p><strong>ವಿಜಯಪುರ</strong>: ಯಶಸ್ಸಿನ ಗುಟ್ಟು ನಿರಂತರ ಓದಿನಲ್ಲಿ ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.</p>.<p>ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಭಾನುವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಎಎಸ್, ಐಎಎಸ್ನಂತಹ ಪರೀಕ್ಷೆಗಳ ಪಠ್ಯ ಸಂಗ್ರಹಿಸಿಕೊಂಡು ಹಾಗೂ ಸರಿಯಾಗಿ ಗ್ರಹಿಸಿಕೊಂಡು ಅಭ್ಯಸಿಸಬೇಕು ಎಂದರು.</p>.<p>ಯಾವುದೇ ಕಾರಣಕ್ಕೂ ಪರೀಕ್ಷೆಗಳಿಗೆ ಭಯ ಪಡದೆ, ಓದಿರುವ ವಿಷಯವನ್ನು ಅರ್ಥೈಸಿಕೊಂಡು ಟಿಪ್ಪಣಿ ಮಾಡಿಟ್ಟುಕೊಳ್ಳಬೇಕು. ಪುನಃ ಅದೇ ವಿಷಯದ ಅಧ್ಯಯನ ಮಾಡಿದಾಗ ಈ ಹಿಂದೆ ಓದಿದ ವಿಷಯ ಬಗ್ಗೆ ಮನನವಾಗಲಿದೆ. ಓದಿದ ವಿಷಯವನ್ನು ವಿನಿಮಯ ಮಾಡಿಕೊಂಡಾಗ ವಿಷಯದ ಕುರಿತು ಜ್ಞಾನದ ಹರವು ವಿಸ್ತಾರಗೊಳ್ಳಲಿದೆ ಎಂದು ಅವರು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ, ಈ ರೀತಿಯ ಕಾರ್ಯಾಗಾರಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾಗಿ ಸಹಾಯಕವಾಗಿವೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕಾಲೇಜು, ವಿವಿಧ ವಸತಿ ನಿಲಯಗಳಲ್ಲಿನ ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡುವ ಛಲದೊಂದಿಗೆ ಅಧ್ಯನಶೀಲತೆ ರೂಢಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಪ್ರತಿನಿತ್ಯ ಅಧ್ಯಯನಕೈಗೊಳ್ಳಬೇಕು. ಆಯ್ಕೆಯ ವಿಷಯ ಕರಗತಗೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಅತ್ಯಂತ ಸಮರ್ಥವಾಗಿ ಎದುರಿಸಬಹುದಾಗಿದೆ ಎಂದರು.</p>.<p>ಸಾಧಕರನ್ನು ಪ್ರೇರಣೆಯಾಗಿಟ್ಟುಕೊಂಡು ನಿರಂತರ ಅಧ್ಯಯನ ಮಾಡಬೇಕು. ವಿಷಯಗಳ ಸಮಗ್ರವಾಗಿ ಅರಿತುಕೊಂಡು ಪರೀಕ್ಷೆಗಳನ್ನು ಎದುರಿಸಲು ಸನ್ನದ್ಧರಾಗಬೇಕು ಎಂದು ಹೇಳಿದರು.</p>.<p> ಕೆಎಎಸ್, ಐಎಎಸ್ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಎಸ್. ಡಿ. ವಿಜಡ್ಂನ ಸಂಸ್ಥಾಪಕ ಅಧ್ಯಕ್ಷ ಶರಣಯ್ಯ ಭಂಡಾರಿಮಠ ಅವರು ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ಕುರಿತಾಗಿ ತಿಳಿಸಿಕೊಟ್ಟರು. </p>.<p>ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಶ್ರೀನಾಥ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ್ ಪೋತೆದಾರ, ಉಮೇಶ್ ಲಮಾಣಿ, ಮಂಜು ಹಿರೇಮನಿ, ಅರವಿಂದ ಲಂಬು, ಸದಾನಂದ ಬಡಿಗೇರ, ಮಾದೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಯಶಸ್ಸಿನ ಗುಟ್ಟು ನಿರಂತರ ಓದಿನಲ್ಲಿ ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.</p>.<p>ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಭಾನುವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಎಎಸ್, ಐಎಎಸ್ನಂತಹ ಪರೀಕ್ಷೆಗಳ ಪಠ್ಯ ಸಂಗ್ರಹಿಸಿಕೊಂಡು ಹಾಗೂ ಸರಿಯಾಗಿ ಗ್ರಹಿಸಿಕೊಂಡು ಅಭ್ಯಸಿಸಬೇಕು ಎಂದರು.</p>.<p>ಯಾವುದೇ ಕಾರಣಕ್ಕೂ ಪರೀಕ್ಷೆಗಳಿಗೆ ಭಯ ಪಡದೆ, ಓದಿರುವ ವಿಷಯವನ್ನು ಅರ್ಥೈಸಿಕೊಂಡು ಟಿಪ್ಪಣಿ ಮಾಡಿಟ್ಟುಕೊಳ್ಳಬೇಕು. ಪುನಃ ಅದೇ ವಿಷಯದ ಅಧ್ಯಯನ ಮಾಡಿದಾಗ ಈ ಹಿಂದೆ ಓದಿದ ವಿಷಯ ಬಗ್ಗೆ ಮನನವಾಗಲಿದೆ. ಓದಿದ ವಿಷಯವನ್ನು ವಿನಿಮಯ ಮಾಡಿಕೊಂಡಾಗ ವಿಷಯದ ಕುರಿತು ಜ್ಞಾನದ ಹರವು ವಿಸ್ತಾರಗೊಳ್ಳಲಿದೆ ಎಂದು ಅವರು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ, ಈ ರೀತಿಯ ಕಾರ್ಯಾಗಾರಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾಗಿ ಸಹಾಯಕವಾಗಿವೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕಾಲೇಜು, ವಿವಿಧ ವಸತಿ ನಿಲಯಗಳಲ್ಲಿನ ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡುವ ಛಲದೊಂದಿಗೆ ಅಧ್ಯನಶೀಲತೆ ರೂಢಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಪ್ರತಿನಿತ್ಯ ಅಧ್ಯಯನಕೈಗೊಳ್ಳಬೇಕು. ಆಯ್ಕೆಯ ವಿಷಯ ಕರಗತಗೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಅತ್ಯಂತ ಸಮರ್ಥವಾಗಿ ಎದುರಿಸಬಹುದಾಗಿದೆ ಎಂದರು.</p>.<p>ಸಾಧಕರನ್ನು ಪ್ರೇರಣೆಯಾಗಿಟ್ಟುಕೊಂಡು ನಿರಂತರ ಅಧ್ಯಯನ ಮಾಡಬೇಕು. ವಿಷಯಗಳ ಸಮಗ್ರವಾಗಿ ಅರಿತುಕೊಂಡು ಪರೀಕ್ಷೆಗಳನ್ನು ಎದುರಿಸಲು ಸನ್ನದ್ಧರಾಗಬೇಕು ಎಂದು ಹೇಳಿದರು.</p>.<p> ಕೆಎಎಸ್, ಐಎಎಸ್ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಎಸ್. ಡಿ. ವಿಜಡ್ಂನ ಸಂಸ್ಥಾಪಕ ಅಧ್ಯಕ್ಷ ಶರಣಯ್ಯ ಭಂಡಾರಿಮಠ ಅವರು ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ಕುರಿತಾಗಿ ತಿಳಿಸಿಕೊಟ್ಟರು. </p>.<p>ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಶ್ರೀನಾಥ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ್ ಪೋತೆದಾರ, ಉಮೇಶ್ ಲಮಾಣಿ, ಮಂಜು ಹಿರೇಮನಿ, ಅರವಿಂದ ಲಂಬು, ಸದಾನಂದ ಬಡಿಗೇರ, ಮಾದೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>