<p><strong>ವಿಜಯಪುರ</strong>: ಹಲಾಲ್ ಎಂದರೆ ಬಳಕೆಗೆಯೋಗ್ಯ ವಸ್ತು, ಸಿದ್ಧವಸ್ತು ಎಂದೇ ಹೊರತು ದೇವರಿಗೆ ಅರ್ಪಿಸಿರುವುದು ಎಂದಲ್ಲ. ಹಲಾಲ್ ಬಗ್ಗೆ ಅಪಾರ್ಥ ಬೇಡ ಎಂದು ಎಂದು ಕೆಪಿಸಿಸಿ ವಕ್ತಾರ ಎಂ.ಎಸ್.ಪಾಟೀಲ ಗಣಿಹಾರ ಮನವಿ ಮಾಡಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರಿ, ಕೋಳಿಗಳಲ್ಲಿ ಇರುವ ಕೆಟ್ಟ ರಕ್ತ ಅಥವಾ ಸೇವಿಸಲು ಯೋಗ್ಯವಲ್ಲದ ರಕ್ತ ಹೊರಹೋಗಲಿ ಎಂಬ ಕಾರಣಕ್ಕೆ ಹಲಾಲ್(ಗಂಟಲ ಬಳಿ ಇರುವ ರಕ್ತನಾಳ ಕತ್ತರಿಸುವುದು) ಮಾಡಲಾಗುತ್ತದೆ ಎಂದು ಹೇಳಿದರು.</p>.<p>ಯೋಗ ಗುರು ಬಾಬಾ ರಾಮದೇವ್ ಕೂಡ ತಮ್ಮ ಉತ್ಪನ್ನಗಳಿಗೆ ಹಲಾಲ್ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ ಎಂದರು.</p>.<p>ಹಲಾಲ್, ಹಿಜಾಬ್, ಆಜಾನ್ನಂತಹ ಧಾರ್ಮಿಕ ಮತ್ತು ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡುಸಮಾಜದ ಶಾಂತಿ, ಸೌಹಾರ್ದ ಕೆಡಿಸಲು ಬಿಜೆಪಿ, ಸಂಘ ಪರಿವಾರ ತೊಡಗಿದೆ. ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿದರು.</p>.<p>ಬಿಜೆಪಿ, ಸಂಘ ಪರಿವಾರದವರು ತಾವು ಮಾತ್ರಭಾರತೀಯರು. ಭಾರತ ತಮಗೆ ಸೇರಿದ್ದು ಎಂಬಂತೆ ಬಿಂಬಿಸುತ್ತಿರುವುದು ಖಂಡನೀಯ. ಭಾರತ ಎಲ್ಲ ಧರ್ಮ, ಜಾತಿ, ಪಕ್ಷದವರಿಗೆ ಸೇರಿದ್ದು, ಮುಸ್ಲಿಮರು ಸಹ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ,ಜೀವ ತೆತ್ತಿದ್ದಾರೆ ಎಂದರು.</p>.<p class="Subhead"><strong>ಮಸೀದಿಗಳಿಗೆ ನೋಟಿಸ್:</strong></p>.<p>ಮಸೀದಿಗಳಲ್ಲಿ ಆಜಾನ್ ವೇಳೆ ಧ್ವನಿವರ್ದಕ ಬಳಸುವಾಗ ಕಡಿಮೆ ಡೆಸಿಬಲ್ ಧ್ವನಿ ಹೊಮ್ಮುವಂತೆ ಕ್ರಮಕೈಗೊಳ್ಳಬೇಕು ಎಂದು ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಕಾನೂನು ಎಲ್ಲ ಧರ್ಮೀಯರಿಗೂ ಅನ್ವಯವಾಗಬೇಕು. ಮಸೀದಿ, ಚರ್ಚ್, ದೇವಸ್ಥಾನಗಳಲ್ಲೂ ಧ್ವನಿವರ್ದಕಗಳಿಗೂ ಅನ್ವಯವಾಗಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.</p>.<p>ಮಸೀದಿಗಳಲ್ಲೂ ಧ್ವನಿವರ್ದಕಗಳ ಬಳಸುವಾಗ ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು, ಯಾರಿಗೂ ತೊಂದರೆಯಾಗದಂತೆ ಬಳಸಬೇಕು ಎಂದು ಮನವಿ ಮಾಡಿದರು.</p>.<p>ಕಟ್ಟಡ ನಿರ್ಮಾಣ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಲ್ಲದೇ,ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಬೆಲೆ ನಿಯಂತ್ರಣಕ್ಕೆಸರ್ಕಾರ ಗಮನಹರಿಸಬೇಕೇ ಹೊರತು, ಜನರ ನಡುವೆ ಭಾವನಾತ್ಮಕ ವಿಷಯಗಳ ಬಗ್ಗೆ ವಿವಾದ ಎಬ್ಬಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ಹಿಜಾಬ್ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗೊಂದಲವಾಗಿಸಿರುವುದು ಸರಿಯಲ್ಲ. ಕಳೆದ ಎರಡು ವರ್ಷಗಳಿಂದ ಕೋವಿಡ್ ಪರಿಣಾಮ ಶೈಕ್ಷಣಿಕ ವ್ಯವಸ್ಥೆ ಹದಗೆಟ್ಟಿದೆ. ಇದನ್ನು ಸರಿಪಡಿಸಲು ಸರ್ಕಾರ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಹಿಜಾಬ್ ವಿವಾದಕ್ಕೂ ಅಲ್ಕೈದಾ ಸಂಘಟನೆಗೂ ಯಾವುದೇ ಸಂಬಂಧವಿಲ್ಲ.ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅಲ್ಕೈದಾ ಮುಖ್ಯಸ್ಥನ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದರು.</p>.<p>ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಬಗ್ಗೆ ಪ್ರಶಂಶೆ ವ್ಯಕ್ತಪಡಿಸಿ ಅಲ್ಕೈದಾ ಮುಖ್ಯಸ್ಥ ಕವನ ಓದಿದ್ದಾನೆ ಎಂಬೆಲ್ಲ ಹೇಳಿಕೆಗಳು ನೈಜವೇ ಎಂಬುದನ್ನು ಪರಿಶೀಲಿಸಬೇಕು. ಅನಗತ್ಯ ಗೊಂದಲಕ್ಕೆ ಎಡೆಮಾಡಿಕೊಡಬಾರದು ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ವಸಂತ ಹೊನಮೋಡೆ, ಅಕ್ರಂ ಮಾಶ್ಯಾಳಕರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಹಲಾಲ್ ಎಂದರೆ ಬಳಕೆಗೆಯೋಗ್ಯ ವಸ್ತು, ಸಿದ್ಧವಸ್ತು ಎಂದೇ ಹೊರತು ದೇವರಿಗೆ ಅರ್ಪಿಸಿರುವುದು ಎಂದಲ್ಲ. ಹಲಾಲ್ ಬಗ್ಗೆ ಅಪಾರ್ಥ ಬೇಡ ಎಂದು ಎಂದು ಕೆಪಿಸಿಸಿ ವಕ್ತಾರ ಎಂ.ಎಸ್.ಪಾಟೀಲ ಗಣಿಹಾರ ಮನವಿ ಮಾಡಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರಿ, ಕೋಳಿಗಳಲ್ಲಿ ಇರುವ ಕೆಟ್ಟ ರಕ್ತ ಅಥವಾ ಸೇವಿಸಲು ಯೋಗ್ಯವಲ್ಲದ ರಕ್ತ ಹೊರಹೋಗಲಿ ಎಂಬ ಕಾರಣಕ್ಕೆ ಹಲಾಲ್(ಗಂಟಲ ಬಳಿ ಇರುವ ರಕ್ತನಾಳ ಕತ್ತರಿಸುವುದು) ಮಾಡಲಾಗುತ್ತದೆ ಎಂದು ಹೇಳಿದರು.</p>.<p>ಯೋಗ ಗುರು ಬಾಬಾ ರಾಮದೇವ್ ಕೂಡ ತಮ್ಮ ಉತ್ಪನ್ನಗಳಿಗೆ ಹಲಾಲ್ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ ಎಂದರು.</p>.<p>ಹಲಾಲ್, ಹಿಜಾಬ್, ಆಜಾನ್ನಂತಹ ಧಾರ್ಮಿಕ ಮತ್ತು ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡುಸಮಾಜದ ಶಾಂತಿ, ಸೌಹಾರ್ದ ಕೆಡಿಸಲು ಬಿಜೆಪಿ, ಸಂಘ ಪರಿವಾರ ತೊಡಗಿದೆ. ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿದರು.</p>.<p>ಬಿಜೆಪಿ, ಸಂಘ ಪರಿವಾರದವರು ತಾವು ಮಾತ್ರಭಾರತೀಯರು. ಭಾರತ ತಮಗೆ ಸೇರಿದ್ದು ಎಂಬಂತೆ ಬಿಂಬಿಸುತ್ತಿರುವುದು ಖಂಡನೀಯ. ಭಾರತ ಎಲ್ಲ ಧರ್ಮ, ಜಾತಿ, ಪಕ್ಷದವರಿಗೆ ಸೇರಿದ್ದು, ಮುಸ್ಲಿಮರು ಸಹ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ,ಜೀವ ತೆತ್ತಿದ್ದಾರೆ ಎಂದರು.</p>.<p class="Subhead"><strong>ಮಸೀದಿಗಳಿಗೆ ನೋಟಿಸ್:</strong></p>.<p>ಮಸೀದಿಗಳಲ್ಲಿ ಆಜಾನ್ ವೇಳೆ ಧ್ವನಿವರ್ದಕ ಬಳಸುವಾಗ ಕಡಿಮೆ ಡೆಸಿಬಲ್ ಧ್ವನಿ ಹೊಮ್ಮುವಂತೆ ಕ್ರಮಕೈಗೊಳ್ಳಬೇಕು ಎಂದು ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಕಾನೂನು ಎಲ್ಲ ಧರ್ಮೀಯರಿಗೂ ಅನ್ವಯವಾಗಬೇಕು. ಮಸೀದಿ, ಚರ್ಚ್, ದೇವಸ್ಥಾನಗಳಲ್ಲೂ ಧ್ವನಿವರ್ದಕಗಳಿಗೂ ಅನ್ವಯವಾಗಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.</p>.<p>ಮಸೀದಿಗಳಲ್ಲೂ ಧ್ವನಿವರ್ದಕಗಳ ಬಳಸುವಾಗ ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು, ಯಾರಿಗೂ ತೊಂದರೆಯಾಗದಂತೆ ಬಳಸಬೇಕು ಎಂದು ಮನವಿ ಮಾಡಿದರು.</p>.<p>ಕಟ್ಟಡ ನಿರ್ಮಾಣ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಲ್ಲದೇ,ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಬೆಲೆ ನಿಯಂತ್ರಣಕ್ಕೆಸರ್ಕಾರ ಗಮನಹರಿಸಬೇಕೇ ಹೊರತು, ಜನರ ನಡುವೆ ಭಾವನಾತ್ಮಕ ವಿಷಯಗಳ ಬಗ್ಗೆ ವಿವಾದ ಎಬ್ಬಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ಹಿಜಾಬ್ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗೊಂದಲವಾಗಿಸಿರುವುದು ಸರಿಯಲ್ಲ. ಕಳೆದ ಎರಡು ವರ್ಷಗಳಿಂದ ಕೋವಿಡ್ ಪರಿಣಾಮ ಶೈಕ್ಷಣಿಕ ವ್ಯವಸ್ಥೆ ಹದಗೆಟ್ಟಿದೆ. ಇದನ್ನು ಸರಿಪಡಿಸಲು ಸರ್ಕಾರ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಹಿಜಾಬ್ ವಿವಾದಕ್ಕೂ ಅಲ್ಕೈದಾ ಸಂಘಟನೆಗೂ ಯಾವುದೇ ಸಂಬಂಧವಿಲ್ಲ.ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅಲ್ಕೈದಾ ಮುಖ್ಯಸ್ಥನ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದರು.</p>.<p>ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಬಗ್ಗೆ ಪ್ರಶಂಶೆ ವ್ಯಕ್ತಪಡಿಸಿ ಅಲ್ಕೈದಾ ಮುಖ್ಯಸ್ಥ ಕವನ ಓದಿದ್ದಾನೆ ಎಂಬೆಲ್ಲ ಹೇಳಿಕೆಗಳು ನೈಜವೇ ಎಂಬುದನ್ನು ಪರಿಶೀಲಿಸಬೇಕು. ಅನಗತ್ಯ ಗೊಂದಲಕ್ಕೆ ಎಡೆಮಾಡಿಕೊಡಬಾರದು ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ವಸಂತ ಹೊನಮೋಡೆ, ಅಕ್ರಂ ಮಾಶ್ಯಾಳಕರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>