ವಿಜಯಪುರ: ಡಾ.ಮಹೇಂದ್ರ ಕಾಪಸೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿದ್ದ ಡಾ. ರಾಜಕುಮಾರ ಯರಗಲ್ ಅವರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾದ ಕಾರಣ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.
ಯರಗಲ್ಲ ಅವರ ಸ್ಥಾನಕ್ಕೆ ಜಿಲ್ಲೆಯವರೇ ಆದ ಮಹೇಂದ್ರ ಕಾಪಸೆ ಅವರನ್ನು ನಿಯೋಜಿಸಲಾಗಿದೆ. ಕೋವಿಡ್ ಪ್ರಥಮ ಅಲೆಯ ಸಂದರ್ಭದಲ್ಲಿ ಡಿಎಚ್ಒ ಆಗಿ ಉತ್ತಮ ಕಾರ್ಯ ನಿರ್ವಹಿಸಿದ್ದ ಕಾಪಸೆ ಅವರು ಮೂರು ತಿಂಗಳ ಹಿಂದಷ್ಟೇ ಕಲಬುರ್ಗಿಗೆ ವರ್ಗಾವಣೆಯಾಗಿದ್ದರು.