ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದ್ದೇಬಿಹಾಳ, ತಾಳಿಕೋಟೆಗೆ ಪ್ರತಿದಿನ ಕುಡಿವ ನೀರು

ಕ್ರಿಯಾ ಯೋಜನೆ ರೂಪಿಸಲು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಸೂಚನೆ
Last Updated 10 ಸೆಪ್ಟೆಂಬರ್ 2020, 15:33 IST
ಅಕ್ಷರ ಗಾತ್ರ

ವಿಜಯಪುರ: ಮುದ್ದೇಬಿಹಾಳ, ತಾಳಿಕೋಟೆ ಹಾಗೂ ನಾಲತವಾಡದಲ್ಲಿ ಪ್ರತಿದಿನ ಕುಡಿಯುವ ನೀರು ಪೂರೈಸಲು ಕ್ರಿಯಾ ಯೋಜನೆ ರೂಪಿಸಿ, ಮನೆ ಮನೆಗೆ ಕುಡಿಯುವ ನೀರು ಪೂರೈಸಲು ತ್ವರಿಗತಿಯ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನಿಲ್‌ಕುಮಾರ್‌ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮುದ್ದೇಬಿಹಾಳ ತಹಶೀಲ್ದಾರ್‌ ಕಚೇರಿ ಸಭಾಭವನದಲ್ಲಿ ಸಭೆ ನಡೆಸಿದ ಅವರು,ಮುದ್ದೇಬಿಹಾಳ, ತಾಳಿಕೋಟೆ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ವ್ಯವಸ್ಥಿತವಾಗಿ ಹಾಗೂ ತ್ವರಿತಗತಿಯಲ್ಲಿ ನಿರ್ವಹಿಸುವಂತೆತಿಳಿಸಿದರು.

ಕುಡಿಯುವ ನೀರು ಪೂರೈಕೆ ಕಾಮಗಾರಿಯಲ್ಲಿ 88 ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಹಾಗೂ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಪುರಸಭೆ ಹಸ್ತಾಂತರವಾಗಿರುವ ಲೇಔಟ್‌ಗಳಲ್ಲಿ ರಸ್ತೆ, ಒಳಚರಂಡಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಮಾಡಿಕೊಂಡಿರಬೇಕು. ಅಂತಹ ಲೇಔಟ್‍ಗಳು ಎನ್.ಎ ಆಗಿರಬೇಕು, ಮೂಲ ಸೌಲಭ್ಯಗಳಿಲ್ಲದ ಲೇಔಟ್‍ಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು ಎಂದರು.

ಪುರಸಭೆಯ ವ್ಯಾಪ್ತಿಯಲ್ಲಿ ಬರುವ 100 ಉದ್ಯಾನಗಳಲ್ಲಿ 40 ಉದ್ಯಾನಗಳು ಸುಸ್ಥಿತಿಯಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಉದ್ಯಾನಗಳು ಅತಿಕ್ರಮಣ ಮಾಡಿಕೊಂಡಿದ್ದು, ಅವುಗಳನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್‌ ಸೋಂಕು ಹೆಚ್ಚದಂತೆ ನಿಯಂತ್ರಿಸಲು ಕ್ವಾರಂಟೈನ್ ವಾಚ್ ಆಪ್ ಹಾಗೂ ಕಾಂಟೆಕ್ಟ್‌ ಟ್ರೇಸಿಂಗ್ ಅನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಶಿಕ್ಷಣ ಇಲಾಖೆಯ ಬಿ.ಇ.ಒ ಹಾಗೂ ಬಿ.ಆರ್.ಸಿ ಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಇದರಿಂದ ಕೋವಿಡ್‌ ನಿಯಂತ್ರಿಸಬಹುದಾಗಿದೆ ಎಂದು ಸೂಚಿಸಿದರು.

ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮುದ್ದೇಬಿಹಾಳ ತಹಶೀಲ್ದಾರ್‌ ಮಾಳಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳುಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT