<p><strong>ವಿಜಯಪುರ:</strong> ಮುದ್ದೇಬಿಹಾಳ, ತಾಳಿಕೋಟೆ ಹಾಗೂ ನಾಲತವಾಡದಲ್ಲಿ ಪ್ರತಿದಿನ ಕುಡಿಯುವ ನೀರು ಪೂರೈಸಲು ಕ್ರಿಯಾ ಯೋಜನೆ ರೂಪಿಸಿ, ಮನೆ ಮನೆಗೆ ಕುಡಿಯುವ ನೀರು ಪೂರೈಸಲು ತ್ವರಿಗತಿಯ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನಿಲ್ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮುದ್ದೇಬಿಹಾಳ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ಸಭೆ ನಡೆಸಿದ ಅವರು,ಮುದ್ದೇಬಿಹಾಳ, ತಾಳಿಕೋಟೆ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ವ್ಯವಸ್ಥಿತವಾಗಿ ಹಾಗೂ ತ್ವರಿತಗತಿಯಲ್ಲಿ ನಿರ್ವಹಿಸುವಂತೆತಿಳಿಸಿದರು.</p>.<p>ಕುಡಿಯುವ ನೀರು ಪೂರೈಕೆ ಕಾಮಗಾರಿಯಲ್ಲಿ 88 ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಹಾಗೂ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.</p>.<p>ಪುರಸಭೆ ಹಸ್ತಾಂತರವಾಗಿರುವ ಲೇಔಟ್ಗಳಲ್ಲಿ ರಸ್ತೆ, ಒಳಚರಂಡಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಮಾಡಿಕೊಂಡಿರಬೇಕು. ಅಂತಹ ಲೇಔಟ್ಗಳು ಎನ್.ಎ ಆಗಿರಬೇಕು, ಮೂಲ ಸೌಲಭ್ಯಗಳಿಲ್ಲದ ಲೇಔಟ್ಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು ಎಂದರು.</p>.<p>ಪುರಸಭೆಯ ವ್ಯಾಪ್ತಿಯಲ್ಲಿ ಬರುವ 100 ಉದ್ಯಾನಗಳಲ್ಲಿ 40 ಉದ್ಯಾನಗಳು ಸುಸ್ಥಿತಿಯಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಉದ್ಯಾನಗಳು ಅತಿಕ್ರಮಣ ಮಾಡಿಕೊಂಡಿದ್ದು, ಅವುಗಳನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.</p>.<p>ಕೋವಿಡ್ ಸೋಂಕು ಹೆಚ್ಚದಂತೆ ನಿಯಂತ್ರಿಸಲು ಕ್ವಾರಂಟೈನ್ ವಾಚ್ ಆಪ್ ಹಾಗೂ ಕಾಂಟೆಕ್ಟ್ ಟ್ರೇಸಿಂಗ್ ಅನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಶಿಕ್ಷಣ ಇಲಾಖೆಯ ಬಿ.ಇ.ಒ ಹಾಗೂ ಬಿ.ಆರ್.ಸಿ ಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಇದರಿಂದ ಕೋವಿಡ್ ನಿಯಂತ್ರಿಸಬಹುದಾಗಿದೆ ಎಂದು ಸೂಚಿಸಿದರು.</p>.<p>ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮುದ್ದೇಬಿಹಾಳ ತಹಶೀಲ್ದಾರ್ ಮಾಳಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳುಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಮುದ್ದೇಬಿಹಾಳ, ತಾಳಿಕೋಟೆ ಹಾಗೂ ನಾಲತವಾಡದಲ್ಲಿ ಪ್ರತಿದಿನ ಕುಡಿಯುವ ನೀರು ಪೂರೈಸಲು ಕ್ರಿಯಾ ಯೋಜನೆ ರೂಪಿಸಿ, ಮನೆ ಮನೆಗೆ ಕುಡಿಯುವ ನೀರು ಪೂರೈಸಲು ತ್ವರಿಗತಿಯ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನಿಲ್ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮುದ್ದೇಬಿಹಾಳ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ಸಭೆ ನಡೆಸಿದ ಅವರು,ಮುದ್ದೇಬಿಹಾಳ, ತಾಳಿಕೋಟೆ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ವ್ಯವಸ್ಥಿತವಾಗಿ ಹಾಗೂ ತ್ವರಿತಗತಿಯಲ್ಲಿ ನಿರ್ವಹಿಸುವಂತೆತಿಳಿಸಿದರು.</p>.<p>ಕುಡಿಯುವ ನೀರು ಪೂರೈಕೆ ಕಾಮಗಾರಿಯಲ್ಲಿ 88 ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಹಾಗೂ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.</p>.<p>ಪುರಸಭೆ ಹಸ್ತಾಂತರವಾಗಿರುವ ಲೇಔಟ್ಗಳಲ್ಲಿ ರಸ್ತೆ, ಒಳಚರಂಡಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಮಾಡಿಕೊಂಡಿರಬೇಕು. ಅಂತಹ ಲೇಔಟ್ಗಳು ಎನ್.ಎ ಆಗಿರಬೇಕು, ಮೂಲ ಸೌಲಭ್ಯಗಳಿಲ್ಲದ ಲೇಔಟ್ಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು ಎಂದರು.</p>.<p>ಪುರಸಭೆಯ ವ್ಯಾಪ್ತಿಯಲ್ಲಿ ಬರುವ 100 ಉದ್ಯಾನಗಳಲ್ಲಿ 40 ಉದ್ಯಾನಗಳು ಸುಸ್ಥಿತಿಯಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಉದ್ಯಾನಗಳು ಅತಿಕ್ರಮಣ ಮಾಡಿಕೊಂಡಿದ್ದು, ಅವುಗಳನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.</p>.<p>ಕೋವಿಡ್ ಸೋಂಕು ಹೆಚ್ಚದಂತೆ ನಿಯಂತ್ರಿಸಲು ಕ್ವಾರಂಟೈನ್ ವಾಚ್ ಆಪ್ ಹಾಗೂ ಕಾಂಟೆಕ್ಟ್ ಟ್ರೇಸಿಂಗ್ ಅನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಶಿಕ್ಷಣ ಇಲಾಖೆಯ ಬಿ.ಇ.ಒ ಹಾಗೂ ಬಿ.ಆರ್.ಸಿ ಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಇದರಿಂದ ಕೋವಿಡ್ ನಿಯಂತ್ರಿಸಬಹುದಾಗಿದೆ ಎಂದು ಸೂಚಿಸಿದರು.</p>.<p>ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮುದ್ದೇಬಿಹಾಳ ತಹಶೀಲ್ದಾರ್ ಮಾಳಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳುಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>