ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೆಶ ಸಗರ ಮಾತನಾಡಿ, ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ ನೀಡಿರುವ ಬರ ಪರಿಹಾರದ ಮೊತ್ತದ ಸಮನಾಗಿ ರಾಜ್ಯ ಸರ್ಕಾರ ಕೂಡಾ ನೀಡಬೇಕು ಎಂಬ ನಿಯಮಾಳಿ ಇದೆ. 2 ಹೆಕ್ಟೆರ್ ಭೂಮಿ ಹೊಂದಿರುವ ರೈತರಿಗೆ ₹34,000 ಪರಿಹಾರ ನೀಡಬೇಕು, ಆದರೆ ಕೇಂದ್ರ ಸರ್ಕಾರ ನೀಡಿರುವ ಹಣದಲ್ಲಿ ರಾಜ್ಯ ಸರ್ಕಾರ ನೀಡಿರುವ ₹2,000 ಹಣ ಕಡಿತಗೊಳಿಸಿ ರೈತರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ, ಈ ಕುರಿತು ಸ್ಪಷ್ಟತೆ ನೀಡಬೇಕು ಎಂದು ಒತ್ತಾಯಿಸಿದರು.