<p><strong>ಆಲಮಟ್ಟಿ:</strong> ವಂದಾಲ ಗ್ರಾಮದ ಪ್ರಸಿದ್ಧ ಬನಶಂಕರಿ ದೇವಿ ಜಾತ್ರೆ ಅಂಗವಾಗಿ ಗುರುವಾರ 'ದ್ಯಾಮವ್ವನ ಸೋಗು' ಮೆರವಣಿಗೆ ನಡೆಯಿತು. ಪಾದಕಟ್ಟೆಯಿಂದ ಆರಂಭವಾದ ಮೆರವಣಿಗೆ ಬನಶಂಕರಿ ದೇವಿ ದೇವಸ್ಥಾನದವರೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.<br></p><p>ಯುವಕರ ಡೊಳ್ಳುನಾದ, ಕರಡಿ ಮಜಲು, ಪೂರ್ವಿಕರಿಂದ ನಡೆಸಿಕೊಂಡು ಬಂದ ಹತ್ತಕ್ಕೂ ಅಧಿಕ ವೇಷಧಾರಿಗಳು ಜಾತ್ರೆಯ ಸೊಬಗನ್ನು ಹೆಚ್ಚಿಸಿತು.</p>.<p>ಜನಪದ ಕಲೆಯ ಪ್ರತೀಕವಾಗಿರುವ ನೂರಾರು ವರ್ಷಗಳಿಂದಲೂ ಸಾಗಿ ಬಂದಿರುವ ಈ ಸೋಗಿನ ಪರಂಪರೆ ಆಯಾ ಮನೆತನಗಳ ಇಂದಿನ ಪೀಳಿಗೆಯವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.</p>.<p>`ದ್ಯಾಮವ್ವ' ಎಂಬ ದೇವಿಯ ಪ್ರತಿರೂಪವಾಗಿ ಬಸವರಾಜ ಕುಪ್ಪಸ್ತ ಎಂಬ ಯುವಕ ವೇಷಧಾರಿಯಾಗಿದ್ದ. ದೇವಿಯ ಭಕ್ತರಾಗಿ ಕಾಡಿನಲ್ಲಿ ವಾಸಿಸುವ ಪೋತರಾಜ, ಚೌಡಕಿ ಪದಗಳನ್ನು ಹಾಡುವ ಜೋಗಮ್ಮ, ಡೊಳ್ಳು ಬಾರಿಸುವ ಯುವಕರ ವೇಷಧಾರಿಗಳು ಗಮನಸೆಳೆದರು. ನಿತ್ಯ ಬದುಕಿನಲ್ಲಿ ವಿವಿಧ ಸೋಗು ಹಾಕುವ ಈ ಯುವಕರು ಈ ಪಾತ್ರಗಳನ್ನು ನಿರ್ವಹಿಸದಿದ್ದರೂ, ಜಾತ್ರೆಯ ದಿನ ಮಾತ್ರ ಅವರವರ ಮನೆತನಕ್ಕೆ ಆದಿ ಕಾಲದಿಂದಲೂ ಬಂದ ವಿಶೇಷ ಸೋಗನ್ನು ಈಗಿನ ಯುವಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.</p>.<p><strong>ವಿಶೇಷ ಅಲಂಕಾರ:</strong> ದೇವಸ್ಥಾನಕ್ಕೆ ಈ ಬಾರಿ ಹೂವು ಸೇರಿದಂತೆ ನಾನಾ ಸಾಮಗ್ರಿಗಳನ್ನು ಬಳಸಿ ಗ್ರಾಮದ ಕಲಾವಿದ ವೆಂಕಟೇಶ ತಳಗೇರಿ ಹಾಗೂ ಅವರ ತಂಡದವರು ವಿಶೇಷ ಅಲಂಕಾರ ಮಾಡಿದ್ದು ಜಾತ್ರೆಗೆ ಆಗಮಿಸುವ ಭಕ್ತಾದಿಗಳೆಲ್ಲಾ ಈ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮಟ್ಟಿ:</strong> ವಂದಾಲ ಗ್ರಾಮದ ಪ್ರಸಿದ್ಧ ಬನಶಂಕರಿ ದೇವಿ ಜಾತ್ರೆ ಅಂಗವಾಗಿ ಗುರುವಾರ 'ದ್ಯಾಮವ್ವನ ಸೋಗು' ಮೆರವಣಿಗೆ ನಡೆಯಿತು. ಪಾದಕಟ್ಟೆಯಿಂದ ಆರಂಭವಾದ ಮೆರವಣಿಗೆ ಬನಶಂಕರಿ ದೇವಿ ದೇವಸ್ಥಾನದವರೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.<br></p><p>ಯುವಕರ ಡೊಳ್ಳುನಾದ, ಕರಡಿ ಮಜಲು, ಪೂರ್ವಿಕರಿಂದ ನಡೆಸಿಕೊಂಡು ಬಂದ ಹತ್ತಕ್ಕೂ ಅಧಿಕ ವೇಷಧಾರಿಗಳು ಜಾತ್ರೆಯ ಸೊಬಗನ್ನು ಹೆಚ್ಚಿಸಿತು.</p>.<p>ಜನಪದ ಕಲೆಯ ಪ್ರತೀಕವಾಗಿರುವ ನೂರಾರು ವರ್ಷಗಳಿಂದಲೂ ಸಾಗಿ ಬಂದಿರುವ ಈ ಸೋಗಿನ ಪರಂಪರೆ ಆಯಾ ಮನೆತನಗಳ ಇಂದಿನ ಪೀಳಿಗೆಯವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.</p>.<p>`ದ್ಯಾಮವ್ವ' ಎಂಬ ದೇವಿಯ ಪ್ರತಿರೂಪವಾಗಿ ಬಸವರಾಜ ಕುಪ್ಪಸ್ತ ಎಂಬ ಯುವಕ ವೇಷಧಾರಿಯಾಗಿದ್ದ. ದೇವಿಯ ಭಕ್ತರಾಗಿ ಕಾಡಿನಲ್ಲಿ ವಾಸಿಸುವ ಪೋತರಾಜ, ಚೌಡಕಿ ಪದಗಳನ್ನು ಹಾಡುವ ಜೋಗಮ್ಮ, ಡೊಳ್ಳು ಬಾರಿಸುವ ಯುವಕರ ವೇಷಧಾರಿಗಳು ಗಮನಸೆಳೆದರು. ನಿತ್ಯ ಬದುಕಿನಲ್ಲಿ ವಿವಿಧ ಸೋಗು ಹಾಕುವ ಈ ಯುವಕರು ಈ ಪಾತ್ರಗಳನ್ನು ನಿರ್ವಹಿಸದಿದ್ದರೂ, ಜಾತ್ರೆಯ ದಿನ ಮಾತ್ರ ಅವರವರ ಮನೆತನಕ್ಕೆ ಆದಿ ಕಾಲದಿಂದಲೂ ಬಂದ ವಿಶೇಷ ಸೋಗನ್ನು ಈಗಿನ ಯುವಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.</p>.<p><strong>ವಿಶೇಷ ಅಲಂಕಾರ:</strong> ದೇವಸ್ಥಾನಕ್ಕೆ ಈ ಬಾರಿ ಹೂವು ಸೇರಿದಂತೆ ನಾನಾ ಸಾಮಗ್ರಿಗಳನ್ನು ಬಳಸಿ ಗ್ರಾಮದ ಕಲಾವಿದ ವೆಂಕಟೇಶ ತಳಗೇರಿ ಹಾಗೂ ಅವರ ತಂಡದವರು ವಿಶೇಷ ಅಲಂಕಾರ ಮಾಡಿದ್ದು ಜಾತ್ರೆಗೆ ಆಗಮಿಸುವ ಭಕ್ತಾದಿಗಳೆಲ್ಲಾ ಈ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>