ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಕಂಪನ: ಬಿರುಕು ಬಿಟ್ಟ ಮನೆ ಗೋಡೆ; ಬತ್ತಿ ಹೋದ ಬಾವಿ!

ಭೂಕಂಪನದಿಂದ ತಿಕೋಟಾ, ಇಂಡಿಯಲ್ಲಿ ಹಾನಿ 
Last Updated 9 ಜುಲೈ 2022, 15:28 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೂ ಕಂಪನದಿಂದಾಗಿ ತಿಕೋಟಾ ಹಾಗೂ ಇಂಡಿ ತಾಲ್ಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದ್ದಾರೆ.

ತಿಕೋಟಾ ತಾಲ್ಲೂಕಿನಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು ಭಾಗಶಃ ಹಾನಿಯಾಗಿದೆ. ಇದೇ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ, ಅರಕೇರಿ ಗ್ರಾಮದ ಸುತ್ತಲಿನ ತಾಂಡಾಗಳಲ್ಲಿ ಮತ್ತು ಮಜರೆ ಗ್ರಾಮದಲ್ಲಿ ಅಂದಾಜು 48 ಮನೆಗಳ ಗೋಡೆಗಳಲ್ಲಿ ಅಲ್ಪ ಪ್ರಮಾಣದ ಬಿರುಕು ಬಿಟ್ಟಿದ್ದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಭೂ ಕಂಪನದಿಂದಲೇ ಈ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಖಚಿತಪಡಿಸಿದ್ದಾರೆ. ಇದನ್ನು ಹೊರತುಪಡಿಸಿ ತಿಕೋಟಾ ತಾಲ್ಲೂಕಿನ ಯಾವುದೇ ಗ್ರಾಮಗಳಲ್ಲಿ ಭೂ ಕಂಪನದಿಂದ ಜೀವ ಹಾಗೂ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿರುವುದಿಲ್ಲ ಎಂದು ತಿಕೋಟಾ ತಹಶೀಲ್ದಾರ್‌ ಅವರು ಪ್ರಾಥಮಿಕ ವರದಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇಂಡಿ ತಾಲ್ಲೂಕಿನ ಬಳ್ಳೊಳ್ಳಿ ಗ್ರಾಮದಲ್ಲಿ 15 ಅಡಿಯ ಬಾವಿಯ ನೀರು ಬತ್ತಿ ಹೋಗಿದೆ ಎಂದು ಇಂಡಿ ತಹಶೀಲ್ದಾರ್‌ ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತುರ್ತು ಪರಿಶೀಲನೆ: ಭೂಕಂಪನದಿಂದ ಹಾನಿಯಾದ ಬಗ್ಗೆ ತುರ್ತಾಗಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ ಮೇರೆಗೆ ತಿಕೋಟಾ ತಹಶೀಲ್ದಾರ್‌ ಎಂ.ಎಸ್.ಅರಕೇರಿ ಮತ್ತು ಇಂಡಿ ತಹಶೀಲ್ದಾರ್‌ ನಾಗಯ್ಯ ಹಿರೇಮಠ ಅವರುಕಾರ್ಯಪ್ರವೃತ್ತರಾಗಿ ಹಾನಿಯ ಬಗ್ಗೆ ಪರಿಶೀಲಿಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ.

ಹಿರಿಯ ಭೂ ವಿಜ್ಞಾನಿ, ತಿಕೋಟಾ ಕಂದಾಯ ನಿರೀಕ್ಷಕರು ಮತ್ತು ಅರಕೇರಿ ಗ್ರಾಮ ಲೆಕ್ಕಾಧಿಕಾರಿ ಅವರು ತಹಶೀಲ್ದಾರ್ ಅವರ ಸಮ್ಮುಖದಲ್ಲಿ ಜಂಟಿಯಾಗಿ ಹಾನಿಯಾದ ಮನೆಗಳ ಸಮೀಕ್ಷೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT