<p><strong>ಕೊಲ್ಹಾರ</strong>: ಮಕ್ಕಳು ಉತ್ತಮ ಗುರಿ ಹೊಂದುವ ಜತೆಗೆ ಮೌಲ್ಯವನ್ನು ರೂಢಿಸಿಕೊಳ್ಳಬೇಕು. ಪಾಲಕರು, ಶಿಕ್ಷಕರು ವಿದ್ಯಾರ್ಥಿಗಳ ಕಾಳಜಿವಹಿಸಿ ಶೈಕ್ಷಣಿಕ ಆಶಯ ಈಡೇರಿಸಬೇಕು ಎಂದು ಅಭಿನವ ಸಂಗನಬಸವ ಶಿವಾಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ಕೂಡಗಿ ಗ್ರಾಮದ ಜ್ಞಾನ ಭಾರತಿ ಹಿರಿಯ ಮತ್ತು ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ 17ನೇ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪಾಲಕರು ಮನೆಯಲ್ಲಿ ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆಯೇ, ಶಾಲೆಗೆ ಹಾಜರಾಗಿದ್ದಾರೆಯೇ ಎಂದು ಶಾಲೆಯ ಶಿಕ್ಷಕರನ್ನು ಸಂಪರ್ಕಿಸಿ ಖಚಿತ ಮಾಡಿಕೊಳ್ಳಬೇಕು ಎಂದರು.</p>.<p>ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮನೆಯಲ್ಲಿ ಪೂರಕ ವಾತಾವರಣ ಸೃಷ್ಟಿಸುವುದು ಪೋಷಕರ ಕರ್ತವ್ಯ. ಮಕ್ಕಳ ಸಮಸ್ಯೆ ತಿಳಿದು ಅದನ್ನು ಸರಿಪಡಿಸಲು ಯತ್ನಿಸಬೇಕು ಎಂದು ಜ್ಞಾನ ಭಾರತಿ ಶಾಲೆಯ ಅಧ್ಯಕ್ಷ ಸೋಮು ಸಾಗರ ಹೇಳಿದರು.</p>.<p>ಕೂಡಗಿಯ ಸಮಾಜಶಾಸ್ತ್ರ ಉಪನ್ಯಾಸಕ ಬಸವರಾಜ ಜಾಲವಾದಿ, ಜೀವನದಲ್ಲಿ ದೊಡ್ಡ ಗುರಿಯೊಂದಿಗೆ ಹೆಜ್ಜೆ ಇಡಿ. ಆದರ್ಶ ವ್ಯಕ್ತಿಗಳನ್ನು ಅನುಸರಿಸಿ ಎಂದರು.</p>.<p>ಸಾಹಿತಿ ಗಿರಿಜಾ ಎಸ್. ಪಾಟೀಲ, ಅತಿಥಿ ಉಪನ್ಯಾಸಕರಾದ ಎಂ.ವಿ. ಹಿರೇಮಠ, ನಮ್ಮ ಕರವೇ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಮಹೇಶಕುಮಾರ ಹರಿಜನ ಮಾತನಾಡಿದರು.</p>.<p>ಅಪೂರ್ವ ಕೆ.ಆರ್. ಪ್ರಾಸ್ತವಿಕವಾಗಿ ಮಾತನಾಡಿದರು. </p>.<p>ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಈಶ್ವರ ಜಾಧವ್, ಮಾಜಿ ಉಪಾಧ್ಯಕ್ಷರಾದ ದ್ಯಾಮವ್ವ ತೋಳಮಟ್ಟಿ, ವೈ.ಕೆ. ಪತ್ತಾರ, ಎಸ್.ಡಿ.ಎಂ.ಸಿ ಸದ್ಯಸರಾದ ಅನ್ನಪೂರ್ಣ ಮಠಪತಿ , ಗ್ರಾಮ ಪಂಚಾಯಿತಿ ಸದಸ್ಯೆ ಕಾಶಿಬಾಯಿ ಉಳ್ಳಾಗಡ್ಡಿ, ಆರಿಫ್ ತಾಳಿಕೋಟಿ, ಶೀತಲ್ ಎಸ್. ಗೌಡ, ಶೃತಿ ಎಸ್. ಗೌಡ, ಶ್ರೀಶೈಲ್ ಎಚ್., ವರ್ಮಿಳಾ, ಸುಪ್ರಿಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ</strong>: ಮಕ್ಕಳು ಉತ್ತಮ ಗುರಿ ಹೊಂದುವ ಜತೆಗೆ ಮೌಲ್ಯವನ್ನು ರೂಢಿಸಿಕೊಳ್ಳಬೇಕು. ಪಾಲಕರು, ಶಿಕ್ಷಕರು ವಿದ್ಯಾರ್ಥಿಗಳ ಕಾಳಜಿವಹಿಸಿ ಶೈಕ್ಷಣಿಕ ಆಶಯ ಈಡೇರಿಸಬೇಕು ಎಂದು ಅಭಿನವ ಸಂಗನಬಸವ ಶಿವಾಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ಕೂಡಗಿ ಗ್ರಾಮದ ಜ್ಞಾನ ಭಾರತಿ ಹಿರಿಯ ಮತ್ತು ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ 17ನೇ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪಾಲಕರು ಮನೆಯಲ್ಲಿ ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆಯೇ, ಶಾಲೆಗೆ ಹಾಜರಾಗಿದ್ದಾರೆಯೇ ಎಂದು ಶಾಲೆಯ ಶಿಕ್ಷಕರನ್ನು ಸಂಪರ್ಕಿಸಿ ಖಚಿತ ಮಾಡಿಕೊಳ್ಳಬೇಕು ಎಂದರು.</p>.<p>ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮನೆಯಲ್ಲಿ ಪೂರಕ ವಾತಾವರಣ ಸೃಷ್ಟಿಸುವುದು ಪೋಷಕರ ಕರ್ತವ್ಯ. ಮಕ್ಕಳ ಸಮಸ್ಯೆ ತಿಳಿದು ಅದನ್ನು ಸರಿಪಡಿಸಲು ಯತ್ನಿಸಬೇಕು ಎಂದು ಜ್ಞಾನ ಭಾರತಿ ಶಾಲೆಯ ಅಧ್ಯಕ್ಷ ಸೋಮು ಸಾಗರ ಹೇಳಿದರು.</p>.<p>ಕೂಡಗಿಯ ಸಮಾಜಶಾಸ್ತ್ರ ಉಪನ್ಯಾಸಕ ಬಸವರಾಜ ಜಾಲವಾದಿ, ಜೀವನದಲ್ಲಿ ದೊಡ್ಡ ಗುರಿಯೊಂದಿಗೆ ಹೆಜ್ಜೆ ಇಡಿ. ಆದರ್ಶ ವ್ಯಕ್ತಿಗಳನ್ನು ಅನುಸರಿಸಿ ಎಂದರು.</p>.<p>ಸಾಹಿತಿ ಗಿರಿಜಾ ಎಸ್. ಪಾಟೀಲ, ಅತಿಥಿ ಉಪನ್ಯಾಸಕರಾದ ಎಂ.ವಿ. ಹಿರೇಮಠ, ನಮ್ಮ ಕರವೇ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಮಹೇಶಕುಮಾರ ಹರಿಜನ ಮಾತನಾಡಿದರು.</p>.<p>ಅಪೂರ್ವ ಕೆ.ಆರ್. ಪ್ರಾಸ್ತವಿಕವಾಗಿ ಮಾತನಾಡಿದರು. </p>.<p>ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಈಶ್ವರ ಜಾಧವ್, ಮಾಜಿ ಉಪಾಧ್ಯಕ್ಷರಾದ ದ್ಯಾಮವ್ವ ತೋಳಮಟ್ಟಿ, ವೈ.ಕೆ. ಪತ್ತಾರ, ಎಸ್.ಡಿ.ಎಂ.ಸಿ ಸದ್ಯಸರಾದ ಅನ್ನಪೂರ್ಣ ಮಠಪತಿ , ಗ್ರಾಮ ಪಂಚಾಯಿತಿ ಸದಸ್ಯೆ ಕಾಶಿಬಾಯಿ ಉಳ್ಳಾಗಡ್ಡಿ, ಆರಿಫ್ ತಾಳಿಕೋಟಿ, ಶೀತಲ್ ಎಸ್. ಗೌಡ, ಶೃತಿ ಎಸ್. ಗೌಡ, ಶ್ರೀಶೈಲ್ ಎಚ್., ವರ್ಮಿಳಾ, ಸುಪ್ರಿಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>