ಈ ಸಂಬಂಧ ‘ಪ್ರಜಾವಾಣಿ’ಗೆ ಕರೆ ಮಾಡಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಅವರು, ವಿದ್ಯಾರ್ಥಿ ಅರುಣ ದೇವಶೆಟ್ಟಿ ಅವರ ಕೌಟುಂಬಿಕ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡ ಬಳಿಕ ಅವರಿಗೂ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ವಸತಿ, ಊಟ ಮತ್ತು ಶುಲ್ಕ ಸೇರಿದಂತೆ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದರು.