<p><strong>ವಿಜಯಪುರ:</strong> ಬಬಲೇಶ್ವರ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸಲು ಮತಕ್ಷೇತ್ರದಾದ್ಯಂತ ರಸ್ತೆ, ವಿದ್ಯುತ್, ನೀರಾವರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಬಬಲೇಶ್ವರ ತಾಲ್ಲೂಕಿನ ಮಮದಾಪುರ-ದೂಡಿಹಾಳ ಮೂಲಕ ರಾಷ್ಟ್ರೀಯ ಹೆದ್ದಾರಿ-218ಕ್ಕೆ ಸೇರುವ ಜಿಲ್ಲಾ ಮುಖ್ಯರಸ್ತೆ ಅಭಿವೃದ್ದಿ ಕಾಮಗಾರಿಗೆ ಭಾನುವಾರ ಮಮದಾಪುರ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಶೇಗುಣಸಿಯಿಂದ ಮಮದಾಪುರವರೆಗೆ ಸುಮಾರು 9.5 ಕಿ.ಮೀ. ರಸ್ತೆಯನ್ನು ₹15 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಮುಂದುವರೆದ ಭಾಗವಾಗಿ ಮಮದಾಪುರದಿಂದ 218 ರಾಷ್ಟ್ರೀಯ ಹೆದ್ದಾರಿ ವರೆಗೆ 11.6 ಕಿ.ಮೀ. ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮತಕ್ಷೇತ್ರದಲ್ಲಿಯೇ ಮಮದಾಪುರ ಹೋಬಳಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದರು.</p>.<p>ಬಹುದಶಕಗಳ ಕನಸಾಗಿದ್ದ ಮಮದಾಪುರ ಕೆರೆ ತುಂಬಿದ್ದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿದ್ದು, ಸುತ್ತಲಿನ ರೈತರಿಗೆ ಅನುಕೂಲವಾಗಿದೆ. ಕೆಲ ದಿನಗಳ ಹಿಂದೆ ಹಿಂದುಸ್ತಾನ ಕೋಕಾಕೋಲಾ ಬೆವೆರಜಿಸ್ ಕಂಪನಿಯಿಂದ ಸಿಎಸ್ಆರ್ ಅನುದಾನದಲ್ಲಿ ಐತಿಹಾಸಿಕ ಮಮದಾಪುರ ಕೆರೆಯ ಪುನರುಜ್ಜೀವನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.</p>.<p>ಮಮದಾಪುರದಲ್ಲಿನ 1600 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅಭಿವೃದ್ದಿಪಡಿಸಲಾಗುತ್ತಿದೆ. ರಾಷ್ಟ್ರದಲ್ಲಿಯೇ ಅತ್ಯುತ್ತಮ ಸೌಕರ್ಯಗಳನ್ನೊಳಗೊಂಡ ಅರಣ್ಯ ಪ್ರದೇಶವನ್ನಾಗಿ ಅಭಿವೃದ್ದಿಪಡಿಸಿ, ಸೈನ್ಸ್ ಮ್ಯೂಸಿಯಂ, ಮಕ್ಕಳ ಚಟುವಟಿಕೆಗಾಗಿ ಪ್ರತ್ಯೇಕ ತಾಣ ಸೇರಿದಂತೆ ಸುಂದರ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿಪಡಿಸಲಾಗುವುದು ಎಂದರು.</p>.<p>ದೇವರಗೆನ್ನೂರ ದಿಂದ ಕೊಡಬಾಗಿಕ್ರಾಸ್ ವರೆಗಿನ 6 ಕಿ.ಮೀ ರಸ್ತೆಗೆ ₹9ಕೋಟಿ ವೆಚ್ಚ ಮಾಡಲಾಗಿದೆ. ಕಂಬಾಗಿ–ಮಮದಾಪುರ 6 ಕಿ.ಮೀ. ರಸ್ತೆಗೆ ₹8ಕೋಟಿ, ಕೊಡಬಾಗಿ-ಜೈನಾಪುರ ವಯಾ ಮಂಗಳೂರ 5ಕಿ.ಮೀ, ಹಳೆ ಜೈನಾಪುರದಿಂದ ಜೈನಾಪುರ 3ಕಿ.ಮೀ. ರಸ್ತೆಗೆ ₹4.50 ಕೋಟಿ ವೆಚ್ಚ ಮಾಡಲಾಗಿದೆ. ಶೇಗುಣಸಿ-ಮಮದಾಪುರ 9.5 ಕಿ.ಮೀ. ರಸ್ತೆಗೆ ₹15 ಕೋಟಿ ವೆಚ್ಚ ಮಾಡಿ ಅಭಿವೃದ್ದಿ ಪಡಿಸಲಾಗಿದೆ ಎಂದರು.</p>.<p>ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸಿ.ಬಿ. ಚಿಕ್ಕಲಕಿ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಬಬಲೇಶ್ವರ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸಲು ಮತಕ್ಷೇತ್ರದಾದ್ಯಂತ ರಸ್ತೆ, ವಿದ್ಯುತ್, ನೀರಾವರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಬಬಲೇಶ್ವರ ತಾಲ್ಲೂಕಿನ ಮಮದಾಪುರ-ದೂಡಿಹಾಳ ಮೂಲಕ ರಾಷ್ಟ್ರೀಯ ಹೆದ್ದಾರಿ-218ಕ್ಕೆ ಸೇರುವ ಜಿಲ್ಲಾ ಮುಖ್ಯರಸ್ತೆ ಅಭಿವೃದ್ದಿ ಕಾಮಗಾರಿಗೆ ಭಾನುವಾರ ಮಮದಾಪುರ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಶೇಗುಣಸಿಯಿಂದ ಮಮದಾಪುರವರೆಗೆ ಸುಮಾರು 9.5 ಕಿ.ಮೀ. ರಸ್ತೆಯನ್ನು ₹15 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಮುಂದುವರೆದ ಭಾಗವಾಗಿ ಮಮದಾಪುರದಿಂದ 218 ರಾಷ್ಟ್ರೀಯ ಹೆದ್ದಾರಿ ವರೆಗೆ 11.6 ಕಿ.ಮೀ. ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮತಕ್ಷೇತ್ರದಲ್ಲಿಯೇ ಮಮದಾಪುರ ಹೋಬಳಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದರು.</p>.<p>ಬಹುದಶಕಗಳ ಕನಸಾಗಿದ್ದ ಮಮದಾಪುರ ಕೆರೆ ತುಂಬಿದ್ದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿದ್ದು, ಸುತ್ತಲಿನ ರೈತರಿಗೆ ಅನುಕೂಲವಾಗಿದೆ. ಕೆಲ ದಿನಗಳ ಹಿಂದೆ ಹಿಂದುಸ್ತಾನ ಕೋಕಾಕೋಲಾ ಬೆವೆರಜಿಸ್ ಕಂಪನಿಯಿಂದ ಸಿಎಸ್ಆರ್ ಅನುದಾನದಲ್ಲಿ ಐತಿಹಾಸಿಕ ಮಮದಾಪುರ ಕೆರೆಯ ಪುನರುಜ್ಜೀವನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.</p>.<p>ಮಮದಾಪುರದಲ್ಲಿನ 1600 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅಭಿವೃದ್ದಿಪಡಿಸಲಾಗುತ್ತಿದೆ. ರಾಷ್ಟ್ರದಲ್ಲಿಯೇ ಅತ್ಯುತ್ತಮ ಸೌಕರ್ಯಗಳನ್ನೊಳಗೊಂಡ ಅರಣ್ಯ ಪ್ರದೇಶವನ್ನಾಗಿ ಅಭಿವೃದ್ದಿಪಡಿಸಿ, ಸೈನ್ಸ್ ಮ್ಯೂಸಿಯಂ, ಮಕ್ಕಳ ಚಟುವಟಿಕೆಗಾಗಿ ಪ್ರತ್ಯೇಕ ತಾಣ ಸೇರಿದಂತೆ ಸುಂದರ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿಪಡಿಸಲಾಗುವುದು ಎಂದರು.</p>.<p>ದೇವರಗೆನ್ನೂರ ದಿಂದ ಕೊಡಬಾಗಿಕ್ರಾಸ್ ವರೆಗಿನ 6 ಕಿ.ಮೀ ರಸ್ತೆಗೆ ₹9ಕೋಟಿ ವೆಚ್ಚ ಮಾಡಲಾಗಿದೆ. ಕಂಬಾಗಿ–ಮಮದಾಪುರ 6 ಕಿ.ಮೀ. ರಸ್ತೆಗೆ ₹8ಕೋಟಿ, ಕೊಡಬಾಗಿ-ಜೈನಾಪುರ ವಯಾ ಮಂಗಳೂರ 5ಕಿ.ಮೀ, ಹಳೆ ಜೈನಾಪುರದಿಂದ ಜೈನಾಪುರ 3ಕಿ.ಮೀ. ರಸ್ತೆಗೆ ₹4.50 ಕೋಟಿ ವೆಚ್ಚ ಮಾಡಲಾಗಿದೆ. ಶೇಗುಣಸಿ-ಮಮದಾಪುರ 9.5 ಕಿ.ಮೀ. ರಸ್ತೆಗೆ ₹15 ಕೋಟಿ ವೆಚ್ಚ ಮಾಡಿ ಅಭಿವೃದ್ದಿ ಪಡಿಸಲಾಗಿದೆ ಎಂದರು.</p>.<p>ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸಿ.ಬಿ. ಚಿಕ್ಕಲಕಿ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>