<p><strong>ಸಿಂದಗಿ:</strong> ಶಿಕ್ಷಕರ ಶೈಕ್ಷಣಿಕ ಸಮಸ್ಯೆಗಳು ಸಾಕಷ್ಟಿವೆ. ಅವುಗಳ ಪರಿಹಾರಕ್ಕಾಗಿ ಸಂಘಟಿತರಾಗಿ ಹೋರಾಟ ಮಾಡಿದಾಗಲೇ ಸರ್ಕಾರ ಬಗ್ಗುತ್ತದೆ ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.</p>.<p>ಪಟ್ಟಣದ ಹಳೆಯ ಗುರುಭವನದ ಬಳಿ ಬುಧವಾರ ಶಿಕ್ಷಕರ ಭವನ ಕಾಮಗಾರಿ ಶಿಲಾನ್ಯಾಸ ಮತ್ತು ಎಂಟು ಹೊಸ ಪ್ರೌಢಶಾಲೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕರ ಭವನಕ್ಕಾಗಿ ಶಿಕ್ಷಕರ ಕಲ್ಯಾಣ ನಿಧಿ ₹ 50 ಲಕ್ಷ ಬಿಡುಗಡೆಗೊಳಿಸುವಲ್ಲಿ ತಾಂತ್ರಿಕ ಸಮಸ್ಯೆ ಬಾರದ ರೀತಿಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲ್ಲೂಕುಗಳಿಗೆ ಹೊಸ ಬಿಇಒ ಕಾರ್ಯಾಲಯ ನಿರ್ಮಾಣ ಕುರಿತು ಪ್ರಯತ್ನಿಸಲಾಗುವುದು. ಗ್ಯಾರಂಟಿ ಯೋಜನೆ ಹಾಗೂ ಆರ್ಥಿಕ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಂಡು ಕಾರ್ಯನಿರ್ವಹಿಸಲಾಗುವುದು.</p>.<p>‘ಮುಂಬರುವ ದಿನಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಗಳ ಸ್ಥಾಪನೆಯ ಕುರಿತು ಚಿಂತನೆ ಮಾಡಲಾಗುವುದು ಎಂದರು.</p>.<p>₹ 57 ಲಕ್ಷ ಮಕ್ಕಳಿಗೆ ಮೊಟ್ಟೆ ಕೊಡಬೇಕಾಗಿದೆ. ಈ ವಿಷಯದಲ್ಲಿ ಶಿಕ್ಷಕರಿಗೆ ಸಾಕಷ್ಟು ಒತ್ತಡವಿರುವುದು ನಿಜ. ಮೊಟ್ಟೆ ದರ ಹೆಚ್ಚುವುದು ಮತ್ತು ದೊರೆಯದಿರುವ ಸಮಸ್ಯೆ ಕಂಡು ಬರುತ್ತಿದೆ ಎಂದು ತಿಳಿಸಿದರು.</p>.<p>‘ನಮ್ಮ ಸರ್ಮಾರ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಶಿಕ್ಷಕರು ಎದುರಿಸುವ ಸಮಸ್ಯೆಗಳ ಪರಿಹಾರಕ್ಕಾಗಿ ವೇಗ ಹಂತ, ಹಂತವಾಗಿ ಜಾಸ್ತಿ ಮಾಡಲಾಗುವುದು’ ಎಂದು ಮಾತನಾಡಿದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ ಮನಗೂಳಿ ಮಾತನಾಡಿದರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾತನಾಡಿ, ರಾಜ್ಯದಲ್ಲಿ ಒಂದು ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರು ಬಡ್ತಿಯಿಂದ ವಂಚಿತರಾಗಿದ್ದಾರೆ. 8 ಸಾವಿರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹುದ್ದೆ ಖಾಲಿ ಇವೆ. ಈಗಿರುವ ಸರ್ಕಾರ ದಾನಚಿಂತಾಮಣಿ ಸರ್ಕಾರವಿದೆ. ಹೀಗಾಗಿ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಮಾಡಿಕೊಂಡರು.</p>.<p>ಬಿಇಒ ಮಹಾಂತೇಶ ಯಡ್ರಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಿಂದಗಿ-ಆಲಮೇಲ-ದೇವರಹಿಪ್ಪರಗಿ ತಾಲ್ಲೂಕುಗಳು ಸೇರಿ 106 ಶಾಲೆಗಳು ಶಿಥಿಲಾವಸ್ಥೆಯಲ್ಲಿವೆ ಎಂದು ತಿಳಿಸಿದರು.</p>.<p>ವೇದಿಕೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.<br> ಪ್ರೊ.ರವಿ ಗೋಲಾ ಕಾರ್ಯಕ್ರಮ ನಿರ್ವಹಿಸಿದರು.</p>.<p><strong>‘ಶಿಕ್ಷಕರ ಭವನದ ಇತಿಹಾಸವೇ ಇದೆ’</strong> </p><p>‘ಹಿಂದಿನ ಸರ್ಕಾರದ ಅವಧಿಯಲ್ಲಿ ಶಿಕ್ಷಕರ ಭವನ ಕಾಮಗಾರಿ ಭೂಮಿಪೂಜೆ ಆಗಿದ್ದರೂ ಅದು ಮನೆಯ ಬೆಡ್ ರೂಂ ಅಳತೆಯಲ್ಲಿತ್ತು. ಹೀಗಾಗಿ ದೊಡ್ಡ ಪ್ರಮಾಣದ ಭವನ ನಿರ್ಮಾಣಕ್ಕಾಗಿ ಪ್ರಥಮ ಹಂತದ ₹ 50 ಲಕ್ಷ ಅನುದಾನದೊಂದಿಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿಸಲಾಗುವುದು’ ಎಂದು ಶಾಸಕ ಅಶೋಕ ಮನಗೂಳಿ ಅವರು ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಪರೋಕ್ಷ ಟಾಂಗ್ ಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಶಿಕ್ಷಕರ ಶೈಕ್ಷಣಿಕ ಸಮಸ್ಯೆಗಳು ಸಾಕಷ್ಟಿವೆ. ಅವುಗಳ ಪರಿಹಾರಕ್ಕಾಗಿ ಸಂಘಟಿತರಾಗಿ ಹೋರಾಟ ಮಾಡಿದಾಗಲೇ ಸರ್ಕಾರ ಬಗ್ಗುತ್ತದೆ ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.</p>.<p>ಪಟ್ಟಣದ ಹಳೆಯ ಗುರುಭವನದ ಬಳಿ ಬುಧವಾರ ಶಿಕ್ಷಕರ ಭವನ ಕಾಮಗಾರಿ ಶಿಲಾನ್ಯಾಸ ಮತ್ತು ಎಂಟು ಹೊಸ ಪ್ರೌಢಶಾಲೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕರ ಭವನಕ್ಕಾಗಿ ಶಿಕ್ಷಕರ ಕಲ್ಯಾಣ ನಿಧಿ ₹ 50 ಲಕ್ಷ ಬಿಡುಗಡೆಗೊಳಿಸುವಲ್ಲಿ ತಾಂತ್ರಿಕ ಸಮಸ್ಯೆ ಬಾರದ ರೀತಿಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲ್ಲೂಕುಗಳಿಗೆ ಹೊಸ ಬಿಇಒ ಕಾರ್ಯಾಲಯ ನಿರ್ಮಾಣ ಕುರಿತು ಪ್ರಯತ್ನಿಸಲಾಗುವುದು. ಗ್ಯಾರಂಟಿ ಯೋಜನೆ ಹಾಗೂ ಆರ್ಥಿಕ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಂಡು ಕಾರ್ಯನಿರ್ವಹಿಸಲಾಗುವುದು.</p>.<p>‘ಮುಂಬರುವ ದಿನಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಗಳ ಸ್ಥಾಪನೆಯ ಕುರಿತು ಚಿಂತನೆ ಮಾಡಲಾಗುವುದು ಎಂದರು.</p>.<p>₹ 57 ಲಕ್ಷ ಮಕ್ಕಳಿಗೆ ಮೊಟ್ಟೆ ಕೊಡಬೇಕಾಗಿದೆ. ಈ ವಿಷಯದಲ್ಲಿ ಶಿಕ್ಷಕರಿಗೆ ಸಾಕಷ್ಟು ಒತ್ತಡವಿರುವುದು ನಿಜ. ಮೊಟ್ಟೆ ದರ ಹೆಚ್ಚುವುದು ಮತ್ತು ದೊರೆಯದಿರುವ ಸಮಸ್ಯೆ ಕಂಡು ಬರುತ್ತಿದೆ ಎಂದು ತಿಳಿಸಿದರು.</p>.<p>‘ನಮ್ಮ ಸರ್ಮಾರ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಶಿಕ್ಷಕರು ಎದುರಿಸುವ ಸಮಸ್ಯೆಗಳ ಪರಿಹಾರಕ್ಕಾಗಿ ವೇಗ ಹಂತ, ಹಂತವಾಗಿ ಜಾಸ್ತಿ ಮಾಡಲಾಗುವುದು’ ಎಂದು ಮಾತನಾಡಿದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ ಮನಗೂಳಿ ಮಾತನಾಡಿದರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾತನಾಡಿ, ರಾಜ್ಯದಲ್ಲಿ ಒಂದು ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರು ಬಡ್ತಿಯಿಂದ ವಂಚಿತರಾಗಿದ್ದಾರೆ. 8 ಸಾವಿರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹುದ್ದೆ ಖಾಲಿ ಇವೆ. ಈಗಿರುವ ಸರ್ಕಾರ ದಾನಚಿಂತಾಮಣಿ ಸರ್ಕಾರವಿದೆ. ಹೀಗಾಗಿ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಮಾಡಿಕೊಂಡರು.</p>.<p>ಬಿಇಒ ಮಹಾಂತೇಶ ಯಡ್ರಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಿಂದಗಿ-ಆಲಮೇಲ-ದೇವರಹಿಪ್ಪರಗಿ ತಾಲ್ಲೂಕುಗಳು ಸೇರಿ 106 ಶಾಲೆಗಳು ಶಿಥಿಲಾವಸ್ಥೆಯಲ್ಲಿವೆ ಎಂದು ತಿಳಿಸಿದರು.</p>.<p>ವೇದಿಕೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.<br> ಪ್ರೊ.ರವಿ ಗೋಲಾ ಕಾರ್ಯಕ್ರಮ ನಿರ್ವಹಿಸಿದರು.</p>.<p><strong>‘ಶಿಕ್ಷಕರ ಭವನದ ಇತಿಹಾಸವೇ ಇದೆ’</strong> </p><p>‘ಹಿಂದಿನ ಸರ್ಕಾರದ ಅವಧಿಯಲ್ಲಿ ಶಿಕ್ಷಕರ ಭವನ ಕಾಮಗಾರಿ ಭೂಮಿಪೂಜೆ ಆಗಿದ್ದರೂ ಅದು ಮನೆಯ ಬೆಡ್ ರೂಂ ಅಳತೆಯಲ್ಲಿತ್ತು. ಹೀಗಾಗಿ ದೊಡ್ಡ ಪ್ರಮಾಣದ ಭವನ ನಿರ್ಮಾಣಕ್ಕಾಗಿ ಪ್ರಥಮ ಹಂತದ ₹ 50 ಲಕ್ಷ ಅನುದಾನದೊಂದಿಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿಸಲಾಗುವುದು’ ಎಂದು ಶಾಸಕ ಅಶೋಕ ಮನಗೂಳಿ ಅವರು ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಪರೋಕ್ಷ ಟಾಂಗ್ ಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>