<p><strong>ವಿಜಯಪುರ:</strong> ಈದ್ ಮಿಲಾದ್ ಹಬ್ಬದ ಮುನ್ನಾ ದಿನವಾದ ಗುರುವಾರ ಅಂಜುಮನ್ ಇಸ್ಲಾಂ ಬಿಜಾಪುರ ಮತ್ತು ಮೈನಾರಿಟಿ ಮುಸ್ಲಿಂ ಡೆವಲಪ್ಮೆಂಟ್ ಕಮಿಟಿ ಸಹಯೋಗದಲ್ಲಿ ಬೃಹತ್ ರ್ಯಾಲಿ ನಡೆಯಿತು.</p><p>ಮಹಮ್ಮದ್ ಪೈಗಂಬರ್ ಜನ್ಮ ದಿನ ಪ್ರಯುಕ್ತ ಆಯೋಜಿಸಲಾಗಿದ್ದ ಮೆರವಣಿಗೆಯು ನಗರದ ಹಕೀಂ ಚೌಕದಿಂದ ಆರಂಭಗೊಂಡು ಜುಮ್ಮಾ ಮಸೀದಿ, ಬಡಿಕಮಾನ್, ಅತಾವುಲ್ಲಾ ಸರ್ಕಲ್, ಬಾಗಲಕೋಟೆ ಸರ್ಕಲ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಕನಕದಾಸ ಸರ್ಕಲ್ ಮೂಲಕ ಸಾಗಿ ಆಸರ್ ಮಹಲ್ಗೆ ತೆರಳಿತು.</p><p>ನಾಥ್ ಹಾಗೂ ದರೂದ್ ಪಠಣದೊಂದಿಗೆ ಮೆರವಣಿಗೆ ನಡೆಯಿತು. ಶ್ವೇತ ವಸ್ತ್ರಧಾರಿಗಳಾದ ಯುವ ಜನರು ಧರ್ಮದ ಧ್ವಜಗಳನ್ನು ಹಿಡಿದು ಮಹಮ್ಮದ್ ಪೈಗಂಬರ್ ಪರ ಘೋಷಣೆಗಳನ್ನು ಹಾಕುತ್ತಾ ಸಾಗಿದರು. ಮೆರವಣಿಗೆ ಬಳಿಕ ಆಸರ್ ಮಹಲ್ನಲ್ಲಿ ಇರುವ ಪೈಗಂಬರ್ ಅವರ ಕೇಶ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. </p><p>ಮುಖಂಡರಾದ ಎಲ್.ಎಲ್. ಉಸ್ತಾದ್, ಬಿ.ಎಚ್. ಮಹಾಬರಿ, ಹಮೀದ್ ಮುಶ್ರೀಫ್, ಅಬ್ದುಲ್ ರಜಾಕ್ ಹೊರ್ತಿ, ಜಮೀರ್ ಅಹಮ್ಮದ್ ಬಾಂಗಿ, ಇರ್ಫಾನ್ ಶೇಖ್, ಜಮೀರ್ ಅಹಮ್ಮದ್ ಭಕ್ಷಿ, ರಫೀಕ್ ಅಹಮ್ಮದ್ ಸೌದಾಗರ, ಅಲ್ತಾಪ್ ಖಾದ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಈದ್ ಮಿಲಾದ್ ಹಬ್ಬದ ಮುನ್ನಾ ದಿನವಾದ ಗುರುವಾರ ಅಂಜುಮನ್ ಇಸ್ಲಾಂ ಬಿಜಾಪುರ ಮತ್ತು ಮೈನಾರಿಟಿ ಮುಸ್ಲಿಂ ಡೆವಲಪ್ಮೆಂಟ್ ಕಮಿಟಿ ಸಹಯೋಗದಲ್ಲಿ ಬೃಹತ್ ರ್ಯಾಲಿ ನಡೆಯಿತು.</p><p>ಮಹಮ್ಮದ್ ಪೈಗಂಬರ್ ಜನ್ಮ ದಿನ ಪ್ರಯುಕ್ತ ಆಯೋಜಿಸಲಾಗಿದ್ದ ಮೆರವಣಿಗೆಯು ನಗರದ ಹಕೀಂ ಚೌಕದಿಂದ ಆರಂಭಗೊಂಡು ಜುಮ್ಮಾ ಮಸೀದಿ, ಬಡಿಕಮಾನ್, ಅತಾವುಲ್ಲಾ ಸರ್ಕಲ್, ಬಾಗಲಕೋಟೆ ಸರ್ಕಲ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಕನಕದಾಸ ಸರ್ಕಲ್ ಮೂಲಕ ಸಾಗಿ ಆಸರ್ ಮಹಲ್ಗೆ ತೆರಳಿತು.</p><p>ನಾಥ್ ಹಾಗೂ ದರೂದ್ ಪಠಣದೊಂದಿಗೆ ಮೆರವಣಿಗೆ ನಡೆಯಿತು. ಶ್ವೇತ ವಸ್ತ್ರಧಾರಿಗಳಾದ ಯುವ ಜನರು ಧರ್ಮದ ಧ್ವಜಗಳನ್ನು ಹಿಡಿದು ಮಹಮ್ಮದ್ ಪೈಗಂಬರ್ ಪರ ಘೋಷಣೆಗಳನ್ನು ಹಾಕುತ್ತಾ ಸಾಗಿದರು. ಮೆರವಣಿಗೆ ಬಳಿಕ ಆಸರ್ ಮಹಲ್ನಲ್ಲಿ ಇರುವ ಪೈಗಂಬರ್ ಅವರ ಕೇಶ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. </p><p>ಮುಖಂಡರಾದ ಎಲ್.ಎಲ್. ಉಸ್ತಾದ್, ಬಿ.ಎಚ್. ಮಹಾಬರಿ, ಹಮೀದ್ ಮುಶ್ರೀಫ್, ಅಬ್ದುಲ್ ರಜಾಕ್ ಹೊರ್ತಿ, ಜಮೀರ್ ಅಹಮ್ಮದ್ ಬಾಂಗಿ, ಇರ್ಫಾನ್ ಶೇಖ್, ಜಮೀರ್ ಅಹಮ್ಮದ್ ಭಕ್ಷಿ, ರಫೀಕ್ ಅಹಮ್ಮದ್ ಸೌದಾಗರ, ಅಲ್ತಾಪ್ ಖಾದ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>