<p><strong>ದೇವರಹಿಪ್ಪರಗಿ:</strong> ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಚಿಕ್ಕರೂಗಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಇ-ಕೆವೈಸಿ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ತಾಲ್ಲೂಕಿನ ಒಟ್ಟು 14 ಗ್ರಾಮ ಪಂಚಾಯಿತಿಗಳ ಪೈಕಿ 16995 ಸಕ್ರಿಯ ಉದ್ಯೋಗ ಕಾರ್ಡ್ಗಳಿದ್ದು., ಅದರಲ್ಲಿ ಈಗಾಗಲೇ 2808 ಇ-ಕೆವೈಸಿ ಮಾಡಲಾಗಿದೆ. ಹೆಚ್ಚಾಗಿ ಮಣೂರು 2387, ಜಾಲವಾದ 1879, ಹುಣಿಶ್ಯಾಳ 1708 ಉದ್ಯೋಗ ಕಾರ್ಡ್ ಗಳಿದ್ದು ಬಾಕಿ ಉಳಿದ ಎಲ್ಲಾ ಉದ್ಯೋಗ ಕಾರ್ಡ್ಗಳನ್ನು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಅವರು ಇದರ ಬಗ್ಗೆ ಹೆಚ್ಚಿನ ಗಮನವಹಿಸಿ ಈ ತಿಂಗಳು ಪೂರ್ಣಗೊಳಿಸಬೇಕು ಎಂದರು.</p>.<p>ಗ್ರಾಮೀಣ ಉದ್ಯೋಗಖಾತ್ರಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೋಂದಾಯಿತ ಕೂಲಿಕಾರರ ಕಾರ್ಡ್ಗಳನ್ನು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ ಎಂದರು.</p>.<p>ಐಇಸಿ ಸಂಯೋಜಕ ಸಿದ್ದು ಕಾಂಬಳೆ ಗ್ರಾಮದ ಸಂತೆಯಲ್ಲಿ 100ಕ್ಕೂ ಹೆಚ್ಚು ಕೂಲಿಕಾರರ ಇ-ಕೆವೈಸಿ ಮಾಡಿದರು.</p>.<p>ಪಿಡಿಓ ಶಿವಾನಂದ ಮೂಲಿಮನಿ, ಸಂದೀಪ ಚವ್ಹಾಣ, ಬಾಬು ಖೋಜಗಾರ, ಶಿವಶಂಕರ ಹಡಪದ ಸಹಿತ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ:</strong> ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಚಿಕ್ಕರೂಗಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಇ-ಕೆವೈಸಿ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ತಾಲ್ಲೂಕಿನ ಒಟ್ಟು 14 ಗ್ರಾಮ ಪಂಚಾಯಿತಿಗಳ ಪೈಕಿ 16995 ಸಕ್ರಿಯ ಉದ್ಯೋಗ ಕಾರ್ಡ್ಗಳಿದ್ದು., ಅದರಲ್ಲಿ ಈಗಾಗಲೇ 2808 ಇ-ಕೆವೈಸಿ ಮಾಡಲಾಗಿದೆ. ಹೆಚ್ಚಾಗಿ ಮಣೂರು 2387, ಜಾಲವಾದ 1879, ಹುಣಿಶ್ಯಾಳ 1708 ಉದ್ಯೋಗ ಕಾರ್ಡ್ ಗಳಿದ್ದು ಬಾಕಿ ಉಳಿದ ಎಲ್ಲಾ ಉದ್ಯೋಗ ಕಾರ್ಡ್ಗಳನ್ನು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಅವರು ಇದರ ಬಗ್ಗೆ ಹೆಚ್ಚಿನ ಗಮನವಹಿಸಿ ಈ ತಿಂಗಳು ಪೂರ್ಣಗೊಳಿಸಬೇಕು ಎಂದರು.</p>.<p>ಗ್ರಾಮೀಣ ಉದ್ಯೋಗಖಾತ್ರಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೋಂದಾಯಿತ ಕೂಲಿಕಾರರ ಕಾರ್ಡ್ಗಳನ್ನು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ ಎಂದರು.</p>.<p>ಐಇಸಿ ಸಂಯೋಜಕ ಸಿದ್ದು ಕಾಂಬಳೆ ಗ್ರಾಮದ ಸಂತೆಯಲ್ಲಿ 100ಕ್ಕೂ ಹೆಚ್ಚು ಕೂಲಿಕಾರರ ಇ-ಕೆವೈಸಿ ಮಾಡಿದರು.</p>.<p>ಪಿಡಿಓ ಶಿವಾನಂದ ಮೂಲಿಮನಿ, ಸಂದೀಪ ಚವ್ಹಾಣ, ಬಾಬು ಖೋಜಗಾರ, ಶಿವಶಂಕರ ಹಡಪದ ಸಹಿತ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>