ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ನಡೆದ ಜಾಗೃತಿ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ವಿವಿಧ ರಾಜಕೀಯ ಪಕ್ಷಗಳ ಭ್ರಷ್ಟ ರಾಜಕಾರಣಿಗಳು ಹಾಗೂ ಪುಡಾರಿಗಳು ತಮ್ಮತಮ್ಮ ಕ್ಷೇತ್ರದ ಮತದಾರರಿಗೆ ಆಮಿಷ ಒಡ್ಡುವ ಅಪರಾಧ ಸ್ವರೂಪದ ಕೆಲಸಗಳನ್ನು ಈಗಲೇ ಆರಂಭಿಸಿದ್ದಾರೆ. ಆ ಮೂಲಕ ಅಧಿಕಾರ ಹಿಡಿಯಲು ಯತ್ನಿಸುವವರಿಗೆ ತಕ್ಕ ಪಾಠ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ, ಆಯಾ ಜಿಲ್ಲಾಡಳಿತ ಕಠಿಣ ಕ್ರಮ ಅನುಸರಿಸಬೇಕು’ ಎಂದು ಒತ್ತಾಯಿಸಿದರು.