ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಅಂಬುಲೆನ್ಸ್, ಪೊಲೀಸ್‌, ಅಗ್ನಿಶಾಮಕ ತುರ್ತು ಸೇವೆಗೆ ಸಹಾಯವಾಣಿ 112

Last Updated 9 ಸೆಪ್ಟೆಂಬರ್ 2021, 13:00 IST
ಅಕ್ಷರ ಗಾತ್ರ

ವಿಜಯಪುರ: ಅಂಬುಲೆನ್ಸ್‌, ಪೊಲೀಸ್‌ ಮತ್ತು ಅಗ್ನಿಶಾಮಕ ತುರ್ತು ಸೇವೆಗಳನ್ನು ಪಡೆಯಲು ಜಿಲ್ಲೆಯ ಜನರು 112 ಸಹಾಯವಾಣಿ ಸಂಖ್ಯೆಗೆ(ಇಆರ್‌ಎಸ್‌ಎಸ್‌) ಕರೆ ಮಾಡಿದರೆ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಸಹಾಯ ಮಾಡಲಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ತಿಳಿಸಿದರು.

ಇಆರ್‌ಎಸ್‌ಎಸ್‌ ಒಂದು ರೀತಿ ಮೊಬೈಲ್‌ ಪೊಲೀಸ್‌ ಠಾಣೆ ಇದ್ದಂತೆ. ಕರೆ ಮಾಡಿದ 15 ನಿಮಿಷದೊಳಗೆ ನಿಗದಿತ ಸ್ಥಳಕ್ಕೆ ಪೊಲೀಸ್‌ ವಾಹನ ಹಾಜರಾಗಿ, ಅಗತ್ಯ ನೆರವು ಮತ್ತು ತ್ವರಿತ ಪರಿಹಾರ ಒದಗಿಸಲಿದ್ದಾರೆ ಎಂದರು.

ಜಿಲ್ಲೆಯಲ್ಲಿ 12ಇಆರ್‌ಎಸ್‌ಎಸ್‌ ವಾಹನಗಳಿವೆ. ಈ ಸೇವೆ ಆರಂಭವಾಗಿ ಆರೇಳು ತಿಂಗಳಾದರೂ ಜಿಲ್ಲೆಯ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT