<p><strong>ವಿಜಯಪುರ:</strong>ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಮಹಾನಗರ ಪಾಲಿಕೆಯ 15ನೇ ಹಣಕಾಸು ಯೋಜನೆಯಲ್ಲಿ ಮಂಜೂರಾದ ₹ 22.50 ಲಕ್ಷ ಮೊತ್ತದಲ್ಲಿ ವಾರ್ಡ್ ನಂ. 22ರ ಸಾಯಿಪಾರ್ಕ್ನಲ್ಲಿ ಬರುವ ಗುರುದೇವ ನಗರ ಸೆಪ್ಟಿಕ್ ಟ್ಯಾಂಕ್ದಿಂದ ಕೆ.ಎಚ್.ಬಿ ಕಾಲೊನಿ ವರೆಗಿನ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ, ಹೊಸ ಜಿಲ್ಲಾ ಕ್ರೀಡಾಂಗಣ , ದ್ರಾಕ್ಷಿ ಅಭಿವೃದ್ಧಿ ಮಂಡಳಿ, ವಿವಿಧೆಡೆ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ, ಸರ್ಕಾರಿ ಶಾಲೆಗಳ ನವೀಕರಣ, ಪಾಲಿಕೆಯಿಂದ ಮಳಿಗೆಗಳ ಸಂಕೀರ್ಣ ನಿರ್ಮಿಸಿ, ಪಾಲಿಕೆಗೆ ಆದಾಯ ಹೆಚ್ಚಿಸುವುದು ಮತ್ತು ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದರು.</p>.<p>ನಗರದ ಅಲ್ಲಲ್ಲಿ ವಾಕಿಂಗ್ ಟ್ರ್ಯಾಕ್, ಓಪನ್ ಜಿಮ್, ಗಾರ್ಡನ್, ಯೋಗಾ ಪ್ಲಾಟ್ಫಾರ್ಮ, ಮಕ್ಕಳ ಉದ್ಯಾನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು.</p>.<p>ನಗರದಲ್ಲಿ ಅಲ್ಲಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದ್ದು, ಇನ್ನು ಅಗತ್ಯವಿರುವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳು ಅಳವಡಿಸಲಾಗುವುದು ಎಂದು ಹೇಳಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದಿಂದ ಹೊಸ ಬಡಾವಣೆಗಳನ್ನು ನಿರ್ಮಿಸಲಾಗುವುದು, ಕಿತ್ತೂರು ರಾಣಿ ಚನ್ನಮ್ಮ ನಾಟಕ ಮಂದಿರದ ಹೊಸ ಕಟ್ಟಡ, ನಗರದ ವಿವಿಧಡೆ ಗಣ್ಯರ, ಹುತಾತ್ಮರ, ಸ್ವಾತಂತ್ರ್ಯ ಯೋಧರ ವೃತ್ತ ನಿರ್ಮಾಣ ಹಾಗೂ ರಸ್ತೆ ನಾಮಕರಣ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಾರ್ಡ್ ನಂ. 35 ರ ಅಥಣಿ ರಸ್ತೆಯ ನಂದಿ ನಗರದಲ್ಲಿ ಮಹಾನಗರ ಪಾಲಿಕೆಯ 15ನೇ ಹಣಕಾಸು ಯೋಜನೆಯಲ್ಲಿ ಮಂಜೂರದ ₹ 37.50 ಲಕ್ಷ ಮೊತ್ತದ ಒಳಚರಂಡಿ ಹಾಗೂ ₹ 35 ಲಕ್ಷ ಮೊತ್ತದ ಆಂತರಿಕ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.</p>.<p>ಮಹಾ ನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯರಾದ ಲಕ್ಷ್ಮಣ ಜಾಧವ್, ವಿಕ್ರಮ್ ಗಾಯಕವಾಡ, ಪಾಲಿಕೆ ಮಾಜಿ ಸದಸ್ಯ ಪ್ರೇಮಾನಂದ ಬಿರಾದಾರ, ಸಂತೋಷ ದೊಡ್ಡಮನಿ, ಚಂದ್ರು ಚೌಧರಿ,ಪಾಂಡುಸಾಹುಕಾರ ದೊಡ್ಡಮನಿ, ಪ್ರಕಾಶ ಚವ್ಹಾಣ, ಜಿ.ಎಸ್.ತೆಲಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಮಹಾನಗರ ಪಾಲಿಕೆಯ 15ನೇ ಹಣಕಾಸು ಯೋಜನೆಯಲ್ಲಿ ಮಂಜೂರಾದ ₹ 22.50 ಲಕ್ಷ ಮೊತ್ತದಲ್ಲಿ ವಾರ್ಡ್ ನಂ. 22ರ ಸಾಯಿಪಾರ್ಕ್ನಲ್ಲಿ ಬರುವ ಗುರುದೇವ ನಗರ ಸೆಪ್ಟಿಕ್ ಟ್ಯಾಂಕ್ದಿಂದ ಕೆ.ಎಚ್.ಬಿ ಕಾಲೊನಿ ವರೆಗಿನ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ, ಹೊಸ ಜಿಲ್ಲಾ ಕ್ರೀಡಾಂಗಣ , ದ್ರಾಕ್ಷಿ ಅಭಿವೃದ್ಧಿ ಮಂಡಳಿ, ವಿವಿಧೆಡೆ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ, ಸರ್ಕಾರಿ ಶಾಲೆಗಳ ನವೀಕರಣ, ಪಾಲಿಕೆಯಿಂದ ಮಳಿಗೆಗಳ ಸಂಕೀರ್ಣ ನಿರ್ಮಿಸಿ, ಪಾಲಿಕೆಗೆ ಆದಾಯ ಹೆಚ್ಚಿಸುವುದು ಮತ್ತು ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದರು.</p>.<p>ನಗರದ ಅಲ್ಲಲ್ಲಿ ವಾಕಿಂಗ್ ಟ್ರ್ಯಾಕ್, ಓಪನ್ ಜಿಮ್, ಗಾರ್ಡನ್, ಯೋಗಾ ಪ್ಲಾಟ್ಫಾರ್ಮ, ಮಕ್ಕಳ ಉದ್ಯಾನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು.</p>.<p>ನಗರದಲ್ಲಿ ಅಲ್ಲಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದ್ದು, ಇನ್ನು ಅಗತ್ಯವಿರುವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳು ಅಳವಡಿಸಲಾಗುವುದು ಎಂದು ಹೇಳಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದಿಂದ ಹೊಸ ಬಡಾವಣೆಗಳನ್ನು ನಿರ್ಮಿಸಲಾಗುವುದು, ಕಿತ್ತೂರು ರಾಣಿ ಚನ್ನಮ್ಮ ನಾಟಕ ಮಂದಿರದ ಹೊಸ ಕಟ್ಟಡ, ನಗರದ ವಿವಿಧಡೆ ಗಣ್ಯರ, ಹುತಾತ್ಮರ, ಸ್ವಾತಂತ್ರ್ಯ ಯೋಧರ ವೃತ್ತ ನಿರ್ಮಾಣ ಹಾಗೂ ರಸ್ತೆ ನಾಮಕರಣ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಾರ್ಡ್ ನಂ. 35 ರ ಅಥಣಿ ರಸ್ತೆಯ ನಂದಿ ನಗರದಲ್ಲಿ ಮಹಾನಗರ ಪಾಲಿಕೆಯ 15ನೇ ಹಣಕಾಸು ಯೋಜನೆಯಲ್ಲಿ ಮಂಜೂರದ ₹ 37.50 ಲಕ್ಷ ಮೊತ್ತದ ಒಳಚರಂಡಿ ಹಾಗೂ ₹ 35 ಲಕ್ಷ ಮೊತ್ತದ ಆಂತರಿಕ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.</p>.<p>ಮಹಾ ನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯರಾದ ಲಕ್ಷ್ಮಣ ಜಾಧವ್, ವಿಕ್ರಮ್ ಗಾಯಕವಾಡ, ಪಾಲಿಕೆ ಮಾಜಿ ಸದಸ್ಯ ಪ್ರೇಮಾನಂದ ಬಿರಾದಾರ, ಸಂತೋಷ ದೊಡ್ಡಮನಿ, ಚಂದ್ರು ಚೌಧರಿ,ಪಾಂಡುಸಾಹುಕಾರ ದೊಡ್ಡಮನಿ, ಪ್ರಕಾಶ ಚವ್ಹಾಣ, ಜಿ.ಎಸ್.ತೆಲಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>