<p><strong>ವಿಜಯಪುರ: </strong>ನಗರದ ಐತಿಹಾಸಿಕ ಆನಂದ ಮಹಲ್ ಪಾರಂಪರಿಕ ಕಟ್ಟಡದಲ್ಲಿ ₹ 5 ಕೋಟಿ ಅಂದಾಜು ವೆಚ್ಚದಲ್ಲಿ ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುವುದು ಎಂದುಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಹೇಳಿದರು.</p>.<p>ನಗರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಗೊಳ್ಳಲಾದ ಪ್ರಸ್ತಾವನೆಗಳ ಕುರಿತು ಪ್ರವಾಸೋದ್ಯಮ ಅಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>₹ 1.36 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ನಗರದ ಪ್ರಮುಖ ಐತಿಹಾಸಿಕ ಸ್ಮಾರಕಗಳ ಬಳಿ ನಿರ್ಮಿಸಲಾಗಿರುವ ಉದ್ಯಾನಗಳಿಗೆ ಗಗನ ಮಹಲ್ ಕಂದಕದಿಂದ ನೀರು ಸರಬರಾಜು ಮಾಡುವ ಕಾಮಗಾರಿ ಕುರಿತು ಕ್ರಮಕೈಗೊಳ್ಳುವಂತೆ ಸೂಚಿಸಿದರು.</p>.<p>ಸಭೆಯ ಬಳಿಕ ನಗರದ ಐತಿಹಾಸಿಕ ಸ್ಮಾರಕ ಆನಂದ ಮಹಲ್, ಹೆರಿಟೇಜ್ ಪಾಥ್ವೇ ಕಾಮಗಾರಿ, ಗಗನ ಮಹಲ್ ಕಂದಕದಿಂದ ಇತರೆ ಸ್ಮಾರಕಗಳಿಗೆ ನೀರು ಪೂರೈಕೆ ಮಾಡುವ ಸ್ಥಳಗಳನ್ನು ಪರಿಶೀಲಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿ ಕಾರ್ಯ ನಿರ್ವಹಿಸುತ್ತಿರುವ ನಗರದ ಹರಣಶಿಕಾರಿಯಲ್ಲಿರುವ ವೀಕ್ಷಣಾಲಯ ಹಾಗೂ ಮನಗೂಳಿ ರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ನಗರದ ಐತಿಹಾಸಿಕ ಆನಂದ ಮಹಲ್ ಪಾರಂಪರಿಕ ಕಟ್ಟಡದಲ್ಲಿ ₹ 5 ಕೋಟಿ ಅಂದಾಜು ವೆಚ್ಚದಲ್ಲಿ ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುವುದು ಎಂದುಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಹೇಳಿದರು.</p>.<p>ನಗರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಗೊಳ್ಳಲಾದ ಪ್ರಸ್ತಾವನೆಗಳ ಕುರಿತು ಪ್ರವಾಸೋದ್ಯಮ ಅಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>₹ 1.36 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ನಗರದ ಪ್ರಮುಖ ಐತಿಹಾಸಿಕ ಸ್ಮಾರಕಗಳ ಬಳಿ ನಿರ್ಮಿಸಲಾಗಿರುವ ಉದ್ಯಾನಗಳಿಗೆ ಗಗನ ಮಹಲ್ ಕಂದಕದಿಂದ ನೀರು ಸರಬರಾಜು ಮಾಡುವ ಕಾಮಗಾರಿ ಕುರಿತು ಕ್ರಮಕೈಗೊಳ್ಳುವಂತೆ ಸೂಚಿಸಿದರು.</p>.<p>ಸಭೆಯ ಬಳಿಕ ನಗರದ ಐತಿಹಾಸಿಕ ಸ್ಮಾರಕ ಆನಂದ ಮಹಲ್, ಹೆರಿಟೇಜ್ ಪಾಥ್ವೇ ಕಾಮಗಾರಿ, ಗಗನ ಮಹಲ್ ಕಂದಕದಿಂದ ಇತರೆ ಸ್ಮಾರಕಗಳಿಗೆ ನೀರು ಪೂರೈಕೆ ಮಾಡುವ ಸ್ಥಳಗಳನ್ನು ಪರಿಶೀಲಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿ ಕಾರ್ಯ ನಿರ್ವಹಿಸುತ್ತಿರುವ ನಗರದ ಹರಣಶಿಕಾರಿಯಲ್ಲಿರುವ ವೀಕ್ಷಣಾಲಯ ಹಾಗೂ ಮನಗೂಳಿ ರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>