<p><strong>ವಿಜಯಪುರ:</strong> ಕೋವಿಡ್ ಎರಡನೇ ಅಲೆಯು ಈಗಾಗಲೇ ತನ್ನ ತೀವ್ರತೆಯನ್ನು ತೋರಿದ್ದು, ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದು, ಪರಿಸ್ಥಿತಿ ಕೈಮೀರಿ ಹೋಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ಗೌಡ ಪಾಟೀಲ್ ಹೇಳಿದ್ದಾರೆ.</p>.<p>ಕೋವಿಡ್ ಮೊದಲನೇ ಹಂತದಲ್ಲಿ ನಾವು ಕಲಿಯದ ಪಾಠಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ಕಲಿಯಬೇಕಾಗಿತ್ತು. ಆದರೆ, ನಾವು ನಮ್ಮ ನಿರ್ಲಕ್ಷದಿಂದ ಈ ಬಾರಿಯೂ ಮಾಸ್ಕ್ ಧರಿಸದಿರುವುದು, ಸ್ಯಾನಿಟೈಸರ್ ಬಳಸದಿರುವುದು ಮತ್ತು ಪರಸ್ಪರ ಅಂತರ ಕಾಪಾಡದೆ ಸಂತೆ, ಮದುವೆ, ಗುಂಪು ಗೂಡುವಿಕೆ ಇತ್ಯಾದಿಗಳನ್ನು ಮುಂದುವರೆಸಿದ್ದರಿಂದ ಅದರ ಬೆಲೆಯನ್ನು ಈಗ ತೆರಬೇಕಾಗಿದೆ ಎಂದು ತಿಳಿಸಿದ್ದಾರೆ.</p>.<p>ಆಸ್ಪತ್ರೆಗಳಲ್ಲಿ ಹೆಚ್ಚುತ್ತಿರುವ ಕೊರೊನಾ ರೋಗಿಗಳ ಸಂಖ್ಯೆಯಿಂದ ಬೆಡ್ಗಳು ದೊರಕುತ್ತಿಲ್ಲ. ರೋಗಿಗಳಿಗೆ ಆಕ್ಸಿಜನ್ ಪೂರೈಸಲು ಸಾಧ್ಯವಾಗುತ್ತಿಲ್ಲ, ರೆಮಿಡಿಶಿವಿರ್ ಇಂಜೆಕ್ಷನ್ ಲಭ್ಯವಿಲ್ಲ. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲರೂ ಹರಸಾಹಸಪಡುತ್ತಿದ್ದು ಭಗವಂತನೇ ನಮ್ಮನ್ನು ಕಾಪಾಡಬೇಕೇ ಹೊರತು ಸರ್ಕಾರವಲ್ಲ ಎಂದಿದ್ದಾರೆ.</p>.<p>ಮುಂದಿನವಾರ ಪರಿಸ್ಥಿತಿ ಇನ್ನೂ ಹೆಚ್ಚು ಉಲ್ಬಣವಾಗುವ ಲಕ್ಷಣಗಳಿದ್ದು ಕಾರಣ ದಯವಿಟ್ಟು ಜನರು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅನಿವಾರ್ಯವಾದರೆ ಮಾತ್ರ ಮನೆಯಿಂದ ಹೊರಗಡೆ ಬರಬೇಕು ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೋವಿಡ್ ಎರಡನೇ ಅಲೆಯು ಈಗಾಗಲೇ ತನ್ನ ತೀವ್ರತೆಯನ್ನು ತೋರಿದ್ದು, ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದು, ಪರಿಸ್ಥಿತಿ ಕೈಮೀರಿ ಹೋಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ಗೌಡ ಪಾಟೀಲ್ ಹೇಳಿದ್ದಾರೆ.</p>.<p>ಕೋವಿಡ್ ಮೊದಲನೇ ಹಂತದಲ್ಲಿ ನಾವು ಕಲಿಯದ ಪಾಠಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ಕಲಿಯಬೇಕಾಗಿತ್ತು. ಆದರೆ, ನಾವು ನಮ್ಮ ನಿರ್ಲಕ್ಷದಿಂದ ಈ ಬಾರಿಯೂ ಮಾಸ್ಕ್ ಧರಿಸದಿರುವುದು, ಸ್ಯಾನಿಟೈಸರ್ ಬಳಸದಿರುವುದು ಮತ್ತು ಪರಸ್ಪರ ಅಂತರ ಕಾಪಾಡದೆ ಸಂತೆ, ಮದುವೆ, ಗುಂಪು ಗೂಡುವಿಕೆ ಇತ್ಯಾದಿಗಳನ್ನು ಮುಂದುವರೆಸಿದ್ದರಿಂದ ಅದರ ಬೆಲೆಯನ್ನು ಈಗ ತೆರಬೇಕಾಗಿದೆ ಎಂದು ತಿಳಿಸಿದ್ದಾರೆ.</p>.<p>ಆಸ್ಪತ್ರೆಗಳಲ್ಲಿ ಹೆಚ್ಚುತ್ತಿರುವ ಕೊರೊನಾ ರೋಗಿಗಳ ಸಂಖ್ಯೆಯಿಂದ ಬೆಡ್ಗಳು ದೊರಕುತ್ತಿಲ್ಲ. ರೋಗಿಗಳಿಗೆ ಆಕ್ಸಿಜನ್ ಪೂರೈಸಲು ಸಾಧ್ಯವಾಗುತ್ತಿಲ್ಲ, ರೆಮಿಡಿಶಿವಿರ್ ಇಂಜೆಕ್ಷನ್ ಲಭ್ಯವಿಲ್ಲ. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲರೂ ಹರಸಾಹಸಪಡುತ್ತಿದ್ದು ಭಗವಂತನೇ ನಮ್ಮನ್ನು ಕಾಪಾಡಬೇಕೇ ಹೊರತು ಸರ್ಕಾರವಲ್ಲ ಎಂದಿದ್ದಾರೆ.</p>.<p>ಮುಂದಿನವಾರ ಪರಿಸ್ಥಿತಿ ಇನ್ನೂ ಹೆಚ್ಚು ಉಲ್ಬಣವಾಗುವ ಲಕ್ಷಣಗಳಿದ್ದು ಕಾರಣ ದಯವಿಟ್ಟು ಜನರು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅನಿವಾರ್ಯವಾದರೆ ಮಾತ್ರ ಮನೆಯಿಂದ ಹೊರಗಡೆ ಬರಬೇಕು ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>