ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯವಿಲ್ಲದೇ ಪರೀಕ್ಷೆ ಎದುರಿಸಿ: ಜೊಲ್ಲೆ

Last Updated 16 ಜುಲೈ 2021, 15:26 IST
ಅಕ್ಷರ ಗಾತ್ರ

ವಿಜಯಪುರ: ಜುಲೈ 19 ಮತ್ತು 22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಶುಭ ಹಾರೈಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಜರ್, ಮಾಸ್ಕ್‌, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಹಾಗೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಬಗ್ಗೆ ಹೆದರದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪರೀಕ್ಷೆ ಬರೆಯಿರಿ, ಶೈಕ್ಷಣಿಕವಾಗಿ ಎತ್ತರಕ್ಕೆ ಬೆಳೆಯಿರಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ ಮಾಡಿ ಎಂದು ಹೇಳಿರುವುದರಿಂದ ಪರೀಕ್ಷೆಯನ್ನು ಹೆದರದೇ ಎದುರಿಸಬೇಕು ಎಂದು ಹೇಳಿದ್ದಾರೆ.

ಶಹಾಪೂರ ಶುಭ ಹಾರೈಕೆ:

ವಿಧಾನಪರಿಷತ್ ಸದಸ್ಯರು ಅರುಣ ಶಹಾಪೂರ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಜಿಲ್ಲೆಯ ಯಾವುದೇ ವಿದ್ಯಾರ್ಥಿಯು ಪರೀಕ್ಷೆಯಿಂದ ವಂಚಿತರಾಗದೆ ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಿ. ಪರೀಕ್ಷಾ ಕೇಂದ್ರವನ್ನು ಸುರಕ್ಷತಾ ಕೇಂದ್ರ ಎಂದು ಭಾವಿಸಿ, ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆದು ಉತ್ತಮ ಫಲಿತಾಂಶ ಪಡೆಯುವ ಮೂಲಕ ತಮ್ಮ ಶಾಲೆಗೆ ಮತ್ತು ನಮ್ಮ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT