<p><strong>ವಿಜಯಪುರ: </strong>ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂ ಕಬಳಿಕೆ ಮಾಡಿದ್ದಾರೆ ಎಂಬಆರ್.ಟಿ.ಐ ಕಾರ್ಯಕರ್ತರಾದ ಸನ್ನಿ ಗವಿಮಠ ಮತ್ತು ಅಬ್ಧುಲ್ ಹಮೀದ್ ಇನಾಮದಾರ ಅವರ ಆರೋಪ ನಿರಾಧಾರವಾಗಿದೆ ಎಂದುಸಿದ್ದೇಶ್ವರ ಸಂಸ್ಥೆಯಚೇರ್ಮನ್ ಬಸಯ್ಯ ಎಸ್. ಹಿರೇಮಠ ತಿಳಿಸಿದ್ದಾರೆ.</p>.<p>ನಗರದ ಅಥಣಿ ರಸ್ತೆಯ ಕೋರ್ಟ್ ಕಾಲೊನಿಯಲ್ಲಿ ಉದ್ಯಾನಕ್ಕೆ ಮೀಸಲಿಡಲಾದ ಸರ್ವೇ ನಂಬರ್ 688/ಬ, ಪ್ಲಾಟ್ ನಂಬರ್-99 ಇದನ್ನು ಶಾಸಕರು ಅತಿಕ್ರಮಣ ಮಾಡಿ, ಅಟಲ್ಬಿಹಾರಿ ವಾಜಪೇಯಿ ಶಾಲೆ ಕಟ್ಟಡ ನಿರ್ಮಿಸಿದ್ದಾರೆ ಎಂಬುದು ಶುದ್ದ ಸುಳ್ಳು ಸಂಗತಿಯಾಗಿದೆ ಎಂದು ಹೇಳಿದ್ದಾರೆ.</p>.<p>ವಿಜಯಪುರನಗರಾಭಿವೃದ್ಧಿ ಪ್ರಾಧಿಕಾರವು ನಗರದ 25 ಆಸ್ತಿಗಳನ್ನು ಸಾರ್ವಜನಿಕ ಉಪಯೋಗಕ್ಕಾಗಿ, ಶಿಕ್ಷಣ ಸಲುವಾಗಿ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡುವುದಾಗಿ 2017ರಲ್ಲಿ ಪ್ರಕಟಣೆ ಹೊರಡಿಸಿತ್ತು. ಈ ಪ್ರಕಟಣೆ ಆಧಾರದ ಮೇಲೆ ಸಿದ್ದೇಶ್ವರ ಸಂಸ್ಥೆಯು ₹7,85,480ಠೇವಣಿಯೊಂದಿಗೆಅರ್ಜಿ ಸಲ್ಲಿಸಿತ್ತು ಎಂದು ಅವರು ತಿಳಿಸಿದ್ದಾರೆ.</p>.<p>2017 ಡಿಸೆಂಬರ್ 12ರಂದು ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಸರ್ವೆ ನಂಬರ್ 688/2 ಕ್ಷೇತ್ರ 3650 ಚ.ಮೀ ಜಾಗವನ್ನು ಸಿದ್ಧೇಶ್ವರ ಸಂಸ್ಥೆಗೆ ಶೈಕ್ಷಣಿಕ ಉದ್ದೇಶ ಸಲುವಾಗಿ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ.</p>.<p>ಸಂಸ್ಥೆಗೆ ಜಾಗ ಮಂಜೂರಾದ ಬಳಿಕ ₹ 39,27,400ಗುತ್ತಿಗೆ ಹಣವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂದಾಯ ಮಾಡಿ, ನೋಂದಾಣಿ ಮಾಡಿಕೊಳ್ಳಲಾಗಿದೆ. ಆ ಜಾಗದಲ್ಲಿ ಅಟಲ್ಬಿಹಾರಿ ವಾಜಪೇಯಿ ಹೆಸರಿನಲ್ಲಿ ಶಾಲೆ ಕಟ್ಟಡ ನಿರ್ಮಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಆರ್ಟಿಐ ಕಾರ್ಯಕರ್ತರು ತಿಳಿಸಿರುವಸರ್ವೆ ನಂಬರ್-688/ಬ, ಪ್ಲಾಟ್ ನಂಬರ್-99 ಜಾಗವು ಸಿದ್ಧೇಶ್ವರ ಸಂಸ್ಥೆಗೆ ಸಂಬಂಧಿಸಿರುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಸುಳ್ಳು ಆಪಾದನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಸಿದ್ಧೇಶ್ವರ ಸಂಸ್ಥೆ ಅಧ್ಯಕ್ಷರಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಮೇಲೆ ಸುಳ್ಳು ಆಪಾದನೆ ಮಾಡಿರುವ ಆರ್ಟಿಐ ಕಾರ್ಯಕರ್ತರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂ ಕಬಳಿಕೆ ಮಾಡಿದ್ದಾರೆ ಎಂಬಆರ್.ಟಿ.ಐ ಕಾರ್ಯಕರ್ತರಾದ ಸನ್ನಿ ಗವಿಮಠ ಮತ್ತು ಅಬ್ಧುಲ್ ಹಮೀದ್ ಇನಾಮದಾರ ಅವರ ಆರೋಪ ನಿರಾಧಾರವಾಗಿದೆ ಎಂದುಸಿದ್ದೇಶ್ವರ ಸಂಸ್ಥೆಯಚೇರ್ಮನ್ ಬಸಯ್ಯ ಎಸ್. ಹಿರೇಮಠ ತಿಳಿಸಿದ್ದಾರೆ.</p>.<p>ನಗರದ ಅಥಣಿ ರಸ್ತೆಯ ಕೋರ್ಟ್ ಕಾಲೊನಿಯಲ್ಲಿ ಉದ್ಯಾನಕ್ಕೆ ಮೀಸಲಿಡಲಾದ ಸರ್ವೇ ನಂಬರ್ 688/ಬ, ಪ್ಲಾಟ್ ನಂಬರ್-99 ಇದನ್ನು ಶಾಸಕರು ಅತಿಕ್ರಮಣ ಮಾಡಿ, ಅಟಲ್ಬಿಹಾರಿ ವಾಜಪೇಯಿ ಶಾಲೆ ಕಟ್ಟಡ ನಿರ್ಮಿಸಿದ್ದಾರೆ ಎಂಬುದು ಶುದ್ದ ಸುಳ್ಳು ಸಂಗತಿಯಾಗಿದೆ ಎಂದು ಹೇಳಿದ್ದಾರೆ.</p>.<p>ವಿಜಯಪುರನಗರಾಭಿವೃದ್ಧಿ ಪ್ರಾಧಿಕಾರವು ನಗರದ 25 ಆಸ್ತಿಗಳನ್ನು ಸಾರ್ವಜನಿಕ ಉಪಯೋಗಕ್ಕಾಗಿ, ಶಿಕ್ಷಣ ಸಲುವಾಗಿ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡುವುದಾಗಿ 2017ರಲ್ಲಿ ಪ್ರಕಟಣೆ ಹೊರಡಿಸಿತ್ತು. ಈ ಪ್ರಕಟಣೆ ಆಧಾರದ ಮೇಲೆ ಸಿದ್ದೇಶ್ವರ ಸಂಸ್ಥೆಯು ₹7,85,480ಠೇವಣಿಯೊಂದಿಗೆಅರ್ಜಿ ಸಲ್ಲಿಸಿತ್ತು ಎಂದು ಅವರು ತಿಳಿಸಿದ್ದಾರೆ.</p>.<p>2017 ಡಿಸೆಂಬರ್ 12ರಂದು ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಸರ್ವೆ ನಂಬರ್ 688/2 ಕ್ಷೇತ್ರ 3650 ಚ.ಮೀ ಜಾಗವನ್ನು ಸಿದ್ಧೇಶ್ವರ ಸಂಸ್ಥೆಗೆ ಶೈಕ್ಷಣಿಕ ಉದ್ದೇಶ ಸಲುವಾಗಿ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ.</p>.<p>ಸಂಸ್ಥೆಗೆ ಜಾಗ ಮಂಜೂರಾದ ಬಳಿಕ ₹ 39,27,400ಗುತ್ತಿಗೆ ಹಣವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂದಾಯ ಮಾಡಿ, ನೋಂದಾಣಿ ಮಾಡಿಕೊಳ್ಳಲಾಗಿದೆ. ಆ ಜಾಗದಲ್ಲಿ ಅಟಲ್ಬಿಹಾರಿ ವಾಜಪೇಯಿ ಹೆಸರಿನಲ್ಲಿ ಶಾಲೆ ಕಟ್ಟಡ ನಿರ್ಮಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಆರ್ಟಿಐ ಕಾರ್ಯಕರ್ತರು ತಿಳಿಸಿರುವಸರ್ವೆ ನಂಬರ್-688/ಬ, ಪ್ಲಾಟ್ ನಂಬರ್-99 ಜಾಗವು ಸಿದ್ಧೇಶ್ವರ ಸಂಸ್ಥೆಗೆ ಸಂಬಂಧಿಸಿರುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಸುಳ್ಳು ಆಪಾದನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಸಿದ್ಧೇಶ್ವರ ಸಂಸ್ಥೆ ಅಧ್ಯಕ್ಷರಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಮೇಲೆ ಸುಳ್ಳು ಆಪಾದನೆ ಮಾಡಿರುವ ಆರ್ಟಿಐ ಕಾರ್ಯಕರ್ತರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>