<p><strong>ವಿಜಯಪುರ</strong>: ಜೈಲಿನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಎಲ್ಲ 27 ಜನರ ಮೇಲಿನ ಸುಳ್ಳು ಕೇಸುಗಳನ್ನು ವಾಪಸ್ ಪಡೆಯಬೇಕು ಎಂದು ಎಸ್ಯುಸಿಐ(ಸಿ) ಪಕ್ಷದ ರಾಜ್ಯ ಸೆಕ್ರೆಟರಿಯಟ್ ಸದಸ್ಯ ಟಿ.ಎಸ್. ಸುನಿತ್ಕುಮಾರ್ ಆಗ್ರಹಿಸಿದರು.</p>.<p>ನಗರದಲ್ಲೊ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪರ ಹೋರಾಟವನ್ನು ಹತ್ತಿಕ್ಕುವ ಪಿತೂರಿಯಲ್ಲದೆ ಬೇರೇನೂ ಅಲ್ಲ. ಈ ಕೇಸುಗಳನ್ನು ರದ್ದುಪಡಿಸಿ, ವಿನಾಕಾರಣ ಬಂಧಿತರಾದ ಅನಿಲ್ ಹೊಸಮನಿ, ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಸಂಗನಬಸವ ಸ್ವಾಮೀಜಿ, ಭೋಗೇಶ ಸೋಲಾಪುರ ಹಾಗೂ ಸಿದ್ರಾಮ ಹಳ್ಳೂರ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ರಾಜ್ಯದಾದ್ಯಾಂತ ನಮ್ಮ ಸಂಘಟನೆಗಳಿಂದ ಎಲ್ಲರನ್ನು ಬಿಡುಗಡೆ ಮಾದಲು ಆಗ್ರಹಿಸಿ ಹೋರಾಟ ಮಾಡಲಾಗಿದೆ. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಮತ್ತೆ ರಾಜ್ಯದಾದ್ಯಂತ ತೀವ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಪ್ರಜಾಪ್ರಬುತ್ವ ರಾಷ್ಟ್ರದಲ್ಲಿ ನ್ಯಾಯಕ್ಕಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ. ಆ ಹೋರಾಟದ ಧ್ವನಿಯನ್ನು ಹತ್ತಿಕ್ಕುವುದು ಜನವಿರೋಧಿ ನಡೆಯಾಗುತ್ತದೆ. ಹೋರಾಟಗಾರರನ್ನು ಬಿಡುಗಡೆ ಮಾಡಿ ಹಾಗೂ ಈ ಕೂಡಲೇ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ ಮಾಡಿ, ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಪಕ್ಷದ ಮುಖಂಡರಾದ ಸಿದ್ರಾಮಯ್ಯ ಹಿರೇಮಠ, ಶಿವರಂಜನಿ ಎಸ್. ಬಿ. ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಜೈಲಿನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಎಲ್ಲ 27 ಜನರ ಮೇಲಿನ ಸುಳ್ಳು ಕೇಸುಗಳನ್ನು ವಾಪಸ್ ಪಡೆಯಬೇಕು ಎಂದು ಎಸ್ಯುಸಿಐ(ಸಿ) ಪಕ್ಷದ ರಾಜ್ಯ ಸೆಕ್ರೆಟರಿಯಟ್ ಸದಸ್ಯ ಟಿ.ಎಸ್. ಸುನಿತ್ಕುಮಾರ್ ಆಗ್ರಹಿಸಿದರು.</p>.<p>ನಗರದಲ್ಲೊ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪರ ಹೋರಾಟವನ್ನು ಹತ್ತಿಕ್ಕುವ ಪಿತೂರಿಯಲ್ಲದೆ ಬೇರೇನೂ ಅಲ್ಲ. ಈ ಕೇಸುಗಳನ್ನು ರದ್ದುಪಡಿಸಿ, ವಿನಾಕಾರಣ ಬಂಧಿತರಾದ ಅನಿಲ್ ಹೊಸಮನಿ, ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಸಂಗನಬಸವ ಸ್ವಾಮೀಜಿ, ಭೋಗೇಶ ಸೋಲಾಪುರ ಹಾಗೂ ಸಿದ್ರಾಮ ಹಳ್ಳೂರ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ರಾಜ್ಯದಾದ್ಯಾಂತ ನಮ್ಮ ಸಂಘಟನೆಗಳಿಂದ ಎಲ್ಲರನ್ನು ಬಿಡುಗಡೆ ಮಾದಲು ಆಗ್ರಹಿಸಿ ಹೋರಾಟ ಮಾಡಲಾಗಿದೆ. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಮತ್ತೆ ರಾಜ್ಯದಾದ್ಯಂತ ತೀವ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಪ್ರಜಾಪ್ರಬುತ್ವ ರಾಷ್ಟ್ರದಲ್ಲಿ ನ್ಯಾಯಕ್ಕಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ. ಆ ಹೋರಾಟದ ಧ್ವನಿಯನ್ನು ಹತ್ತಿಕ್ಕುವುದು ಜನವಿರೋಧಿ ನಡೆಯಾಗುತ್ತದೆ. ಹೋರಾಟಗಾರರನ್ನು ಬಿಡುಗಡೆ ಮಾಡಿ ಹಾಗೂ ಈ ಕೂಡಲೇ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ ಮಾಡಿ, ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಪಕ್ಷದ ಮುಖಂಡರಾದ ಸಿದ್ರಾಮಯ್ಯ ಹಿರೇಮಠ, ಶಿವರಂಜನಿ ಎಸ್. ಬಿ. ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>