ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಹಳ್ಳದಲ್ಲಿ ಕೊಚ್ಚಿ ಹೋದ ರೈತ

Last Updated 15 ಅಕ್ಟೋಬರ್ 2020, 10:48 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿಯಲ್ಲಿ ಹಳ್ಳ ದಾಟಿ ಹೊಲಕ್ಕೆ ಹೊರಟಿದ್ದ ರೈತ ಶಿವಪುತ್ರ ಹಣಮಂತ ನಾಟೀಕಾರ(38) ನೀರಿನ ಸೆಳವಿಗೆ ಸಿಲುಕು ಕೊಚ್ಚಿಕೊಂಡು ಹೋಗಿದ್ದು, ಸುಮಾರು ಅರ್ಧ ಕಿ.ಮೀ.ದೂರದಲ್ಲಿ ದೇಹ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಮಳೆಗೆ 811 ಮನೆಗಳು ಭಾಗಶಃ ಕುಸಿದಿವೆ, ಐದು ಜಾನುವಾರುಗಳು ಸಾವಿಗೀಡಾಗಿವೆ. ದೂಳಖೇಡ, ಶಿರನಾಳ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿರುವ 15 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ದೇವರ ಹಿಪ್ಪರಗಿ ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಹಳ್ಳದ ನೀರು ಗ್ರಾಮದ 10 ಮನೆಗಳಿಗೆ ನುಗ್ಗಿರುವುದರಿಂದ, ಜನರನ್ನು ಶಾಲೆಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯಲ್ಲಿ ಗುರುವಾರ ಮಳೆ ತಗ್ಗಿದೆ. ಆದರೂ ಸಹ ತಾಳಿಕೋಟೆ–ಹಡಗಿನಾಳ ನೆಲಟಮಟ್ಟದ ಸೇತುವೆ ಡೋಣಿ ಪ್ರವಾಹದಲ್ಲಿ ಮುಳುಗಿದೆ. ಎರಡು ದಿನಗಳಿಂದ ಮುಳುಗಿದ್ದ ದೇವರಹಿಪ್ಪರಗಿ–ಬಸವನ ಬಾಗೇವಾಡಿ ಸಂಪರ್ಕಿಸುವ ಸಾತಿಹಾಳ ಸೇತುವೆ ಇಂದು ಸಂಚಾರಕ್ಕೆ ಮುಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT