ವಿಜಯಪುರ: ಕೋಲ್ಹಾರ ತಾಲ್ಲೂಕಿನ ರಾಣಿಹಾಳ ಗ್ರಾಮದಲ್ಲಿ ರಾತ್ರಿ ವೇಳೆ ಹೊಲಕ್ಕೆ ನೀರು ಹಾಯಿಸುವ ವೇಳೆ ದಾಳಿ ನಡೆಸಲು ಯತ್ನಿಸಿದ ಮೊಸಳೆಯನ್ನು ಹಿಡಿದು, ಕೈಕಾಲು ಕಟ್ಟಿ ಟ್ರ್ಯಾಕ್ಟರ್ ಮೂಲಕ ವಿದ್ಯುತ್ ವಿತರಣಾ ಕೇಂದ್ರಕ್ಕೆ ತಂದ ರೈತರು ಹೆಸ್ಕಾಂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಡರಾತ್ರಿ ವಿದ್ಯುತ್ ನೀಡುವುದರಿಂದ ಕತ್ತಲೆಯಲ್ಲಿ ಹೊಲಗಳಿಗೆ ನೀರುಣಿಸುವುದು ಕಷ್ಟವಾಗಿದೆ. ಮೊಸಳೆ, ಹಾವು, ಚೇಳುಗಳು ದಾಳಿ ನಡೆಸುತ್ತವೆ ಎಂದು ರೈತರು ಅಳಲು ತೋಡಿಕೊಂಡರು.