<p><strong>ತಾಳಿಕೋಟೆ:</strong> ತಾಲ್ಲೂಕಿನ ಗೊಟಗುಣಕಿ ಗ್ರಾಮದ ಸರ್ವೆ ನಂಬರ್ 55/1, 55/2 ಈ ಜಮೀನುಗಳಿಗೆ ಹೋಗಲು ದಾರಿ ಬಂದ್ ಮಾಡಿದ್ದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ದಾರಿ ಮಧ್ಯದಲ್ಲಿ ಮಣ್ಣಿನ ದಿಬ್ಬು ಹಾಕಿದ್ದು, ಕೂಡಲೇ ತೆರವುಗೊಳಿಸಿ ದಾರಿ ಮಾಡಿಕೊಡುವ ತನಕ ಆಮರಣ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಸಾಹೇಬಗೌಡ ಬಿರಾದಾರ ತಿಳಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಮಂಗಳವಾರ ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿ ಮಾತನಾಡಿದರು.</p>.<p>ಕಳೆದ ತಿಂಗಳು ಅಹೋ ರಾತ್ರಿ ಧರಣಿ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ತಹಶೀಲ್ದಾರ್ ಆಗಮಿಸಿ ದಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಆಗ ತಾತ್ಕಾಲಿಕವಾಗಿ ಧರಣಿ ಹಿಂಪಡೆಯಲಾಗಿತ್ತು. ಮತ್ತೆ ಜಮೀನಿಗೆ ತೆರಳಲು ದಾರಿ ಸಮಸ್ಯೆಯಾಗುತ್ತಿದೆ. ಹಾಗಾಗಿ ಮತ್ತೆ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದರು.</p>.<p>ಬಿತ್ತನೆ ಕಾರ್ಯ ಜೋರು ನಡೆದಿದ್ದು, ಬಹುತೇಕ ರೈತರ ಬಿತ್ತನೆ ಮುಗಿಯುವ ಹಂತದಲ್ಲಿದೆ. ಆದರೆ ನನ್ನ ಜಮೀನಿಗೆ ಹೋಗಲು ದಾರಿ ಇಲ್ಲದ ಕಾರಣ ಬಿತ್ತನೆ ಮಾಡಲಾಗಿಲ್ಲ. ಹೀಗಾದರೆ ಒಂದು ವರ್ಷ ಕುಟುಂಬ ಬದಕುವುದಾದರು ಹೇಗೆ ಎಂದು ಅಳಲು ತೋಡಿಕೊಂಡರು.</p>.<p>ಆಮರಣ ಉಪವಾಸ ಕೈಬಿಡುವುದಿಲ್ಲ. ಪ್ರಾಣ ತ್ಯಾಗಕ್ಕೂ ಸಿದ್ದ. ಜೀವಕ್ಕೆ ಏನಾದರೂ ಹಾನಿಯಾದಲ್ಲಿ ಜಮೀನಿಗೆ ದಾರಿ ಕೊಡದ ರೈತರು ಹಾಗೂ ತಾಲ್ಲೂಕು ಆಡಳಿತವೇ ನೇರ ಹೊಣೆಗಾರರು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಅನೀಲಕುಮಾರ ಕಾಜಾಪೂರ, ಶಂಕ್ರೆಮ್ಮ ರಾಜಾಪುರ, ಶೈಲಶ್ರೀ ಬಾರಾದಾರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ:</strong> ತಾಲ್ಲೂಕಿನ ಗೊಟಗುಣಕಿ ಗ್ರಾಮದ ಸರ್ವೆ ನಂಬರ್ 55/1, 55/2 ಈ ಜಮೀನುಗಳಿಗೆ ಹೋಗಲು ದಾರಿ ಬಂದ್ ಮಾಡಿದ್ದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ದಾರಿ ಮಧ್ಯದಲ್ಲಿ ಮಣ್ಣಿನ ದಿಬ್ಬು ಹಾಕಿದ್ದು, ಕೂಡಲೇ ತೆರವುಗೊಳಿಸಿ ದಾರಿ ಮಾಡಿಕೊಡುವ ತನಕ ಆಮರಣ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಸಾಹೇಬಗೌಡ ಬಿರಾದಾರ ತಿಳಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಮಂಗಳವಾರ ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿ ಮಾತನಾಡಿದರು.</p>.<p>ಕಳೆದ ತಿಂಗಳು ಅಹೋ ರಾತ್ರಿ ಧರಣಿ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ತಹಶೀಲ್ದಾರ್ ಆಗಮಿಸಿ ದಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಆಗ ತಾತ್ಕಾಲಿಕವಾಗಿ ಧರಣಿ ಹಿಂಪಡೆಯಲಾಗಿತ್ತು. ಮತ್ತೆ ಜಮೀನಿಗೆ ತೆರಳಲು ದಾರಿ ಸಮಸ್ಯೆಯಾಗುತ್ತಿದೆ. ಹಾಗಾಗಿ ಮತ್ತೆ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದರು.</p>.<p>ಬಿತ್ತನೆ ಕಾರ್ಯ ಜೋರು ನಡೆದಿದ್ದು, ಬಹುತೇಕ ರೈತರ ಬಿತ್ತನೆ ಮುಗಿಯುವ ಹಂತದಲ್ಲಿದೆ. ಆದರೆ ನನ್ನ ಜಮೀನಿಗೆ ಹೋಗಲು ದಾರಿ ಇಲ್ಲದ ಕಾರಣ ಬಿತ್ತನೆ ಮಾಡಲಾಗಿಲ್ಲ. ಹೀಗಾದರೆ ಒಂದು ವರ್ಷ ಕುಟುಂಬ ಬದಕುವುದಾದರು ಹೇಗೆ ಎಂದು ಅಳಲು ತೋಡಿಕೊಂಡರು.</p>.<p>ಆಮರಣ ಉಪವಾಸ ಕೈಬಿಡುವುದಿಲ್ಲ. ಪ್ರಾಣ ತ್ಯಾಗಕ್ಕೂ ಸಿದ್ದ. ಜೀವಕ್ಕೆ ಏನಾದರೂ ಹಾನಿಯಾದಲ್ಲಿ ಜಮೀನಿಗೆ ದಾರಿ ಕೊಡದ ರೈತರು ಹಾಗೂ ತಾಲ್ಲೂಕು ಆಡಳಿತವೇ ನೇರ ಹೊಣೆಗಾರರು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಅನೀಲಕುಮಾರ ಕಾಜಾಪೂರ, ಶಂಕ್ರೆಮ್ಮ ರಾಜಾಪುರ, ಶೈಲಶ್ರೀ ಬಾರಾದಾರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>