<p><strong>ಸಿಂದಗಿ</strong>: ಸರ್ಕಾರ ಹೈನುಗಾರಿಕೆಗೆ ಪ್ರೋತ್ಸಾಹಿಸಲು ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ರೈತರಿಗೆ ಹಸು ಖರೀದಿಸಲು ₹ 30 ಸಾವಿರ ನೀಡಿದ್ದರೂ, ಹಣ ಪಡೆದವರು ಹಸುಗಳನ್ನೇ ಖರೀದಿಸಿಲ್ಲ ಎಂದು ಶಾಸಕ ಅಶೋಕ ಮನಗೂಳಿ ವಿಷಾದಿಸಿದರು.</p>.<p>ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಇಂಡಿ ಕೃಷಿ ವಿಜ್ಞಾನ ಕೇಂದ್ರ, ಕೃಷಿಕ ಸಮಾಜ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2025-26ನೆಯ ಸಾಲಿನ ಕೃಷಿ ಯಂತ್ರೋಪಕರಣ ವಿತರಣೆ ಮತ್ತು ಮುಂಗಾರು ಹಂಗಾಮಿನ ತಾಂತ್ರಿಕ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮುಂಗಾರು ಹಂಗಾಮಿನ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿದಂತೆ ಮುಂಬರುವ ದಿನಗಳಲ್ಲಿ ಹಿಂಗಾರು ಹಂಗಾಮಿನ ಕುರಿತಾಗಿಯೂ ರೈತರ ಸಮಾವೇಶ ಆಯೋಜನೆ ಮಾಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಶಾಸಕರು ರೈತರಿಗೆ ವಿವಿಧ ಕೃಷಿ ಯಂತ್ರೋಪಕರಣ ವಿತರಿಸಲಾಯಿತು.</p>.<p>ಚೆನ್ನವೀರಸ್ವಾಮೀಜಿ ರೈತ ಉತ್ಪಾದನಾ ಕೇಂದ್ರದ ಅಶೋಕ ಅಲ್ಲಾಪುರ ಮಾತನಾಡಿ, ‘ಕಳೆದ ಸಲ ತೊಗರಿ ಬೆಳೆ ಸಮೀಕ್ಷೆಯಲ್ಲಿ ಅಚಾತುರ್ಯ ಉಂಟಾಗಿತ್ತು. ಹೀಗಾಗಿ ಈ ಸಲ ಹಾಗಾದಂತೆ ರೈತರ ಹೊಲಗಳಿಗೆ ಖುದ್ದಾಗಿ ಭೇಟಿ ನೀಡಿ ಸಮೀಕ್ಷೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ರಾಜ್ಯದಲ್ಲಿರುವ 15 ಸಾವಿರ ರೈತ ಉತ್ಪಾದನಾ ಕೇಂದ್ರಗಳಿಗೆ ಸರ್ಕಾರದ ಸೌಲಭ್ಯ ಒದಗಿಸುವಂತಾಗಬೇಕು. ರೈತರು ಹೆಚ್ಚು, ಹೆಚ್ಚು ಸಾವಯವ ಕೃಷಿಗೆ ಅವಲಂಬಿತರಾಗಬೇಕು ಎಂದು ತಿಳಿಸಿದರು.</p>.<p>ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಇಂಡಿ ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ, ಸಹಾಯಕ ಕೃಷಿ ನಿರ್ದೇಶಕ ಎಚ್.ವೈ.ಸಿಂಗೆಗೋಳ, ಕೃಷಿ ಅಧಿಕಾರಿ ಶಿವಾನಂದ ಹೂವಿನಹಳ್ಳಿ ಮಾತನಾಡಿದರು.</p>.<p>ಇಂಡಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಮೋಮಿನ್, ಕೃಷಿ ವಿಜ್ಞಾನಿಗಳಾದ ಡಾ.ಪ್ರಕಾಶ, ಪ್ರೇಮಚಂದ ಪಾಲ್ಗೊಂಡಿದ್ದರು.</p>.<p>ಸಾವಯವ ಕೃಷಿಕ ಸುನೀಲ ನಾರಾಯಣಕರ ತಾವು ಉತ್ಪಾದಿಸಿದ ಸಾವಯವ ಬೆಲ್ಲ, ಸಾವಯವ ಅರಿಸಿಣವನ್ನು ಶಾಸಕರಿಗೆ ನೀಡಿದರು.</p>.<p>ಕೃಷಿ ಸಮಾಜದ ಶಿವಪ್ಪಗೌಡ ಬಿರಾದಾರ, ಬಸಯ್ಯ ಹಿರೇಮಠ, ರಮೇಶ ಪೂಜಾರ, ಮೋರಟಗಿಯ ನಿಂಗನಗೌಡ ಪಾಟೀಲ ಹಾಗೂ ಪ್ರಗತಿಪರ ರೈತ ಭಾಗಪ್ಪಗೌಡ ಪಾಟೀಲ ಆಹೇರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಶೈಲಜಾ ಸ್ಥಾವರಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ಸರ್ಕಾರ ಹೈನುಗಾರಿಕೆಗೆ ಪ್ರೋತ್ಸಾಹಿಸಲು ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ರೈತರಿಗೆ ಹಸು ಖರೀದಿಸಲು ₹ 30 ಸಾವಿರ ನೀಡಿದ್ದರೂ, ಹಣ ಪಡೆದವರು ಹಸುಗಳನ್ನೇ ಖರೀದಿಸಿಲ್ಲ ಎಂದು ಶಾಸಕ ಅಶೋಕ ಮನಗೂಳಿ ವಿಷಾದಿಸಿದರು.</p>.<p>ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಇಂಡಿ ಕೃಷಿ ವಿಜ್ಞಾನ ಕೇಂದ್ರ, ಕೃಷಿಕ ಸಮಾಜ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2025-26ನೆಯ ಸಾಲಿನ ಕೃಷಿ ಯಂತ್ರೋಪಕರಣ ವಿತರಣೆ ಮತ್ತು ಮುಂಗಾರು ಹಂಗಾಮಿನ ತಾಂತ್ರಿಕ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮುಂಗಾರು ಹಂಗಾಮಿನ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿದಂತೆ ಮುಂಬರುವ ದಿನಗಳಲ್ಲಿ ಹಿಂಗಾರು ಹಂಗಾಮಿನ ಕುರಿತಾಗಿಯೂ ರೈತರ ಸಮಾವೇಶ ಆಯೋಜನೆ ಮಾಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಶಾಸಕರು ರೈತರಿಗೆ ವಿವಿಧ ಕೃಷಿ ಯಂತ್ರೋಪಕರಣ ವಿತರಿಸಲಾಯಿತು.</p>.<p>ಚೆನ್ನವೀರಸ್ವಾಮೀಜಿ ರೈತ ಉತ್ಪಾದನಾ ಕೇಂದ್ರದ ಅಶೋಕ ಅಲ್ಲಾಪುರ ಮಾತನಾಡಿ, ‘ಕಳೆದ ಸಲ ತೊಗರಿ ಬೆಳೆ ಸಮೀಕ್ಷೆಯಲ್ಲಿ ಅಚಾತುರ್ಯ ಉಂಟಾಗಿತ್ತು. ಹೀಗಾಗಿ ಈ ಸಲ ಹಾಗಾದಂತೆ ರೈತರ ಹೊಲಗಳಿಗೆ ಖುದ್ದಾಗಿ ಭೇಟಿ ನೀಡಿ ಸಮೀಕ್ಷೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ರಾಜ್ಯದಲ್ಲಿರುವ 15 ಸಾವಿರ ರೈತ ಉತ್ಪಾದನಾ ಕೇಂದ್ರಗಳಿಗೆ ಸರ್ಕಾರದ ಸೌಲಭ್ಯ ಒದಗಿಸುವಂತಾಗಬೇಕು. ರೈತರು ಹೆಚ್ಚು, ಹೆಚ್ಚು ಸಾವಯವ ಕೃಷಿಗೆ ಅವಲಂಬಿತರಾಗಬೇಕು ಎಂದು ತಿಳಿಸಿದರು.</p>.<p>ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಇಂಡಿ ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ, ಸಹಾಯಕ ಕೃಷಿ ನಿರ್ದೇಶಕ ಎಚ್.ವೈ.ಸಿಂಗೆಗೋಳ, ಕೃಷಿ ಅಧಿಕಾರಿ ಶಿವಾನಂದ ಹೂವಿನಹಳ್ಳಿ ಮಾತನಾಡಿದರು.</p>.<p>ಇಂಡಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಮೋಮಿನ್, ಕೃಷಿ ವಿಜ್ಞಾನಿಗಳಾದ ಡಾ.ಪ್ರಕಾಶ, ಪ್ರೇಮಚಂದ ಪಾಲ್ಗೊಂಡಿದ್ದರು.</p>.<p>ಸಾವಯವ ಕೃಷಿಕ ಸುನೀಲ ನಾರಾಯಣಕರ ತಾವು ಉತ್ಪಾದಿಸಿದ ಸಾವಯವ ಬೆಲ್ಲ, ಸಾವಯವ ಅರಿಸಿಣವನ್ನು ಶಾಸಕರಿಗೆ ನೀಡಿದರು.</p>.<p>ಕೃಷಿ ಸಮಾಜದ ಶಿವಪ್ಪಗೌಡ ಬಿರಾದಾರ, ಬಸಯ್ಯ ಹಿರೇಮಠ, ರಮೇಶ ಪೂಜಾರ, ಮೋರಟಗಿಯ ನಿಂಗನಗೌಡ ಪಾಟೀಲ ಹಾಗೂ ಪ್ರಗತಿಪರ ರೈತ ಭಾಗಪ್ಪಗೌಡ ಪಾಟೀಲ ಆಹೇರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಶೈಲಜಾ ಸ್ಥಾವರಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>