<p><strong>ವಿಜಯಪುರ:</strong> ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ತಾಳಿಕೋಟೆ ತಾಲ್ಲೂಕಿನ ಕೊಡಗಾನೂರ ಬಳಿ ಒಂಬತ್ತು ದಿನಗಳಿಂದ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭಾನುವಾರ ಭೇಟಿ ನೀಡಿ, ಮಾತುಕತೆ ನಡೆಸಿದರು.</p>.<p>ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಧರಣಿ ಹಿಂಪಡೆದರು.</p>.<p>ಕೆ.ಬಿ.ಜೆ.ಎನ್.ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ್ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಈ ಯೋಜನೆಯ ಕುರಿತು ಮಾಹಿತಿ ಪಡೆದರು.</p>.<p>ಬಳಿಕ ಮಾತನಾಡಿದ ಸಚಿವರು, ‘ಬೂದಿಹಾಳ-ಪೀರಾಪುರ ಯೋಜನೆ ನನ್ನ ಕನಸಿನ ಕೂಸು. ಈ ಹಿಂದೆ 2013-18ರ ಅವಧಿಯಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿತ್ತು. ಆದರೆ, ನೀರು ಹಂಚಿಕೆ ಸಮಸ್ಯೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿಗೆ ಹಿನ್ನಡೆಯಾಗಿತ್ತು. ಈಗಲೂ ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದು, ನಮ್ಮ ಕನಸಿನ ಈ ಮಹತ್ವದ ಯೋಜನೆಯನ್ನು ಮರುಜೀವಿತಗೊಳಿಸಲಾಗುವುದು’ ಎಂದು ಹೇಳಿದರು.</p>.<p>‘ಮುಂದಿನ 3 ತಿಂಗಳೊಳಗೆ ಹೊಲಗಾಲುವೆ ನಿರ್ಮಿಸಲಾಗುವ ಜಮೀನುಗಳ ರೈತರ ಸಹಮತಿಯೊಂದಿಗೆ ವಿವರವಾದ ಯೋಜನಾ ವರದಿ (ಡಿಪಿಆರ್) ಪೂರ್ಣಗೊಳಿಸಲಾಗುವುದು. 4ನೇ ತಿಂಗಳಲ್ಲಿ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದರು.</p>.<p>‘9 ತಿಂಗಳಲ್ಲಿ ಹೊಲಗಾಲುವೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ವಿಜಯಪುರದಲ್ಲಿ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಯ ಕಾಮಗಾರಿಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಸಲಾಗುವುದು’ ಎಂದು ಸಚಿವರು ಭರವಸೆ ನೀಡಿದರು.</p>.<p>ಜಿಲ್ಲೆಯಲ್ಲಿ ಈ ಹಿಂದೆ ಜಲಸಂಪನ್ಮೂಲ ಮತ್ತು ಗೃಹ ಸಚಿವರಾಗಿದ್ದ ಎರಡೂ ಅವಧಿಯಲ್ಲಿ ತಾವು ನೀರಾವರಿ ಯೋಜನೆಗಳ ಜಾರಿಗೆ ಕೈಗೊಂಡ ಕ್ರಮಗಳನ್ನು ಅವರು ತಿಳಿಸಿದರು.</p>.<p>ಆಲಮೇಲ ಸ್ವಾಮೀಜಿ ಮಾತನಾಡಿ, ‘ಸಚಿವ ಎಂ.ಬಿ. ಪಾಟೀಲರು ನುಡಿದಂತೆ ನಡೆಯುತ್ತಿರುವ ಬಸವ ನಾಡಿನ ಭಗೀರಥ. ಸಿದ್ಧೇಶ್ವರ ಸ್ವಾಮೀಜಿ ಅವರು ಬೊಗಸೆ ನೀರು ಕೇಳಿದರೆ ಅವರು ಕೊಡ ನೀರು ತಂದು ಕೊಟ್ಟಿದ್ದಾರೆ. ರೈತರು ಡಿಪಿಆರ್ ಮಾಡುವಾಗ ಅಧಿಕಾರಿಗಳೊಂದಿಗೆ ಸಹಕರಿಸಿರಿ’ ಎಂದು ಹೇಳಿದರು.</p>.<p>ಸಚಿವರ ಭರವಸೆಗೆ ಒಪ್ಪಿದ ರೈತರು ಧರಣಿ ಸತ್ಯಾಗ್ರಹ ಹಿಂಪಡೆದರು. ಇದರಿಂದಾಗಿ ಕಳೆದ ದಿನದಿಂದ ನಡೆಯುತ್ತಿರುವ ರೈತರ ಹೋರಾಟ ಸುಖಾಂತ್ಯ ಕಂಡಂತಾಗಿದೆ.</p>.<p>ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ, ರೈತ ಮುಖಂಡರಾದ ಪ್ರಭುಗೌಡ ಲಿಂಗದಳ್ಳಿ, ಬಿ.ಎಸ್. ಪಾಟೀಲ ಯಾಳಗಿ, ಸುಭಾಸ ಛಾಯಾಗೋಳ, ಅರವಿಂದ ಕುಲಕರ್ಣಿ, ಸುರೇಶಬಾಬು ಬಿರಾದಾರ, ಪ್ರಭು ಬಿರಾದಾರ, ಶಿವಪುತ್ರ ಚೌಧರಿ, ಕಾಶಿನಾಥ ತಳವಾರ ಇದ್ದರು.</p>.<div><blockquote>ರೈತರ ಹಿತರಕ್ಷಣೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು ಅವರ ಕನಸುಗಳನ್ನು ಸಾಕಾರಗೊಳಿಸಲು ನಾವು ಸದಾ ಬದ್ಧರಾಗಿದ್ದೇವೆ </blockquote><span class="attribution">ಎಂ.ಬಿ. ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ತಾಳಿಕೋಟೆ ತಾಲ್ಲೂಕಿನ ಕೊಡಗಾನೂರ ಬಳಿ ಒಂಬತ್ತು ದಿನಗಳಿಂದ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭಾನುವಾರ ಭೇಟಿ ನೀಡಿ, ಮಾತುಕತೆ ನಡೆಸಿದರು.</p>.<p>ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಧರಣಿ ಹಿಂಪಡೆದರು.</p>.<p>ಕೆ.ಬಿ.ಜೆ.ಎನ್.ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ್ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಈ ಯೋಜನೆಯ ಕುರಿತು ಮಾಹಿತಿ ಪಡೆದರು.</p>.<p>ಬಳಿಕ ಮಾತನಾಡಿದ ಸಚಿವರು, ‘ಬೂದಿಹಾಳ-ಪೀರಾಪುರ ಯೋಜನೆ ನನ್ನ ಕನಸಿನ ಕೂಸು. ಈ ಹಿಂದೆ 2013-18ರ ಅವಧಿಯಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿತ್ತು. ಆದರೆ, ನೀರು ಹಂಚಿಕೆ ಸಮಸ್ಯೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿಗೆ ಹಿನ್ನಡೆಯಾಗಿತ್ತು. ಈಗಲೂ ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದು, ನಮ್ಮ ಕನಸಿನ ಈ ಮಹತ್ವದ ಯೋಜನೆಯನ್ನು ಮರುಜೀವಿತಗೊಳಿಸಲಾಗುವುದು’ ಎಂದು ಹೇಳಿದರು.</p>.<p>‘ಮುಂದಿನ 3 ತಿಂಗಳೊಳಗೆ ಹೊಲಗಾಲುವೆ ನಿರ್ಮಿಸಲಾಗುವ ಜಮೀನುಗಳ ರೈತರ ಸಹಮತಿಯೊಂದಿಗೆ ವಿವರವಾದ ಯೋಜನಾ ವರದಿ (ಡಿಪಿಆರ್) ಪೂರ್ಣಗೊಳಿಸಲಾಗುವುದು. 4ನೇ ತಿಂಗಳಲ್ಲಿ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದರು.</p>.<p>‘9 ತಿಂಗಳಲ್ಲಿ ಹೊಲಗಾಲುವೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ವಿಜಯಪುರದಲ್ಲಿ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಯ ಕಾಮಗಾರಿಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಸಲಾಗುವುದು’ ಎಂದು ಸಚಿವರು ಭರವಸೆ ನೀಡಿದರು.</p>.<p>ಜಿಲ್ಲೆಯಲ್ಲಿ ಈ ಹಿಂದೆ ಜಲಸಂಪನ್ಮೂಲ ಮತ್ತು ಗೃಹ ಸಚಿವರಾಗಿದ್ದ ಎರಡೂ ಅವಧಿಯಲ್ಲಿ ತಾವು ನೀರಾವರಿ ಯೋಜನೆಗಳ ಜಾರಿಗೆ ಕೈಗೊಂಡ ಕ್ರಮಗಳನ್ನು ಅವರು ತಿಳಿಸಿದರು.</p>.<p>ಆಲಮೇಲ ಸ್ವಾಮೀಜಿ ಮಾತನಾಡಿ, ‘ಸಚಿವ ಎಂ.ಬಿ. ಪಾಟೀಲರು ನುಡಿದಂತೆ ನಡೆಯುತ್ತಿರುವ ಬಸವ ನಾಡಿನ ಭಗೀರಥ. ಸಿದ್ಧೇಶ್ವರ ಸ್ವಾಮೀಜಿ ಅವರು ಬೊಗಸೆ ನೀರು ಕೇಳಿದರೆ ಅವರು ಕೊಡ ನೀರು ತಂದು ಕೊಟ್ಟಿದ್ದಾರೆ. ರೈತರು ಡಿಪಿಆರ್ ಮಾಡುವಾಗ ಅಧಿಕಾರಿಗಳೊಂದಿಗೆ ಸಹಕರಿಸಿರಿ’ ಎಂದು ಹೇಳಿದರು.</p>.<p>ಸಚಿವರ ಭರವಸೆಗೆ ಒಪ್ಪಿದ ರೈತರು ಧರಣಿ ಸತ್ಯಾಗ್ರಹ ಹಿಂಪಡೆದರು. ಇದರಿಂದಾಗಿ ಕಳೆದ ದಿನದಿಂದ ನಡೆಯುತ್ತಿರುವ ರೈತರ ಹೋರಾಟ ಸುಖಾಂತ್ಯ ಕಂಡಂತಾಗಿದೆ.</p>.<p>ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ, ರೈತ ಮುಖಂಡರಾದ ಪ್ರಭುಗೌಡ ಲಿಂಗದಳ್ಳಿ, ಬಿ.ಎಸ್. ಪಾಟೀಲ ಯಾಳಗಿ, ಸುಭಾಸ ಛಾಯಾಗೋಳ, ಅರವಿಂದ ಕುಲಕರ್ಣಿ, ಸುರೇಶಬಾಬು ಬಿರಾದಾರ, ಪ್ರಭು ಬಿರಾದಾರ, ಶಿವಪುತ್ರ ಚೌಧರಿ, ಕಾಶಿನಾಥ ತಳವಾರ ಇದ್ದರು.</p>.<div><blockquote>ರೈತರ ಹಿತರಕ್ಷಣೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು ಅವರ ಕನಸುಗಳನ್ನು ಸಾಕಾರಗೊಳಿಸಲು ನಾವು ಸದಾ ಬದ್ಧರಾಗಿದ್ದೇವೆ </blockquote><span class="attribution">ಎಂ.ಬಿ. ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>