ಹಡಗಿನಾಳ, ಮೂಕಿಹಾಳ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕೆಳ ಮಟ್ಟದ ಸೇತುವೆ ಕೂಡ ಡೋಣಿ ನದಿ ಪ್ರವಾಹದಿಂದ ಜಲಾವೃತವಾಗಿದೆ. ಅಲ್ಲದೇ, ಈ ರಸ್ತೆ ಹದಗೆಟ್ಟಿದೆ. ಇದರಿಂದ ವಿಜಯಪುರಕ್ಕೆ ಹೋಗುವ ವಾಹನಗಳು ದೇವರ ಹಿಪ್ಪರಗಿ ಮೂಲಕ ಸಂಚರಿಸಬೇಕಾಗಿದೆ. ಪಕ್ಕದ ಮುದ್ದೇಬಿಹಾಳಕ್ಕೆ ಹೋಗಲು ಕೊಡೆಕಲ್ಲ– ನಾರಾಯಣಪುರ ರಸ್ತೆಯನ್ನು ಅವಲಂಭಿಸಬೇಕಾಗಿದೆ.