ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಕೋವಿಡ್‌ ಗೆದ್ದವರ ಕಥೆಗಳು: ‘ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಮುಖ್ಯ’

Last Updated 29 ಜುಲೈ 2020, 16:50 IST
ಅಕ್ಷರ ಗಾತ್ರ

ಬಸವನ ಬಾಗೇವಾಡಿ: ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುವಾಗ ಕೋವಿಡ್ ಪಾಸಿಟಿವ್ ವರದಿ ಬಂದಾಗ ಭಯಪಡದೇ ಪೌಷ್ಠಿಕಾಂಶವುಳ್ಳ ಆಹಾರ ಸೇವನೆಯೊಂದಿಗೆ ವೈದ್ಯರ ಸಲಹೆಯನ್ನು ಪಾಲಿಸಿದ್ದರಿಂದ ಬೇಗನೆ ಗುಣಮುಖರಾಗಲು ಸಾಧ್ಯವಾಯಿತು ಎಂದು ಇಲ್ಲಿನ ಕಿರಿಯ ಮಹಿಳಾ ಆರೋಗ್ಯಾಧಿಕಾರಿ ಎಂ.ಬಿ.ಬೇವನೂರ ಹೇಳಿದರು.

ಆರಂಭದಲ್ಲಿ ಜ್ವರದ ಲಕ್ಷಣಗಳು ಕಂಡು ಬಂದ ತಕ್ಷಣ ಜುಲೈ 3 ರಂದು ಗಂಟಲು ದ್ರವ ಪರೀಕ್ಷೆಗೆ ಒಳಪಟ್ಟೆ. ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲೇ ಪಾಸಿಟಿವ್ ಬಂದದ್ದು ಒಂದಷ್ಟು ಬೇಸರ ಏನಿಸಿದರೂ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆದು ಬೇಗ ಗುಣಮುಖವಾಗಿ ವಾರಿಯರ್ಸ್ ಆಗಿ ಮತ್ತೆ ಕಾರ್ಯ ನಿರ್ವಹಿಸಲು ಸಜ್ಜಾಗುತ್ತಿದ್ದೇನೆ ಎಂದರು.

‘ಜುಲೈ17 ರಂದು ರ‍್ಯಾಪಿಡ್ ಟೆಸ್ಟ್ ಮಾಡಿಸಿದಾಗ ನೆಗಟಿವ್ ವರದಿ ಬಂದಿದೆ. ಈಗ ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಅಂತರ ಕಾಯ್ದುಕೊಂಡು ಹೋಂಕ್ವಾರಂಟೈನಲ್ಲಿ ಇರುವೆ ಎಂದು ತಿಳಿಸಿದರು.

ಕೋವಿಡ್ಬಂದ ಆರಂಭದ ದಿನಗಳಲ್ಲಿ ಈ ರೋಗದ ಬಗ್ಗೆ ಇದ್ದ ಭಯದ ವಾತಾವರಣ ಈಗಿಲ್ಲ. ಕೋವಿಡ್ ಪಾಸಿಟಿವ್ ಬಂದವರು ಹೆಚ್ಚು ಗುಣಮುಖರಾಗುತ್ತಿರುವ ವರದಿಗಳನ್ನು ನೋಡಿ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚಿತು. ಸ್ಯಾನಿಟೈಸರ್, ಮಾಸ್ಕ್, ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ಸೋಂಕು ಸಮೀಪಕ್ಕೆ ಬಾರದು ಎಂದರು.

‘ನನಗೆ ಕೋವಿಡ್‌ ಪಾಸಿಟಿವ್ಬಂದಿರುವುದು ತಿಳಿದಾಗಗಣಪತಿ ವೃತ್ತದ ಬಡಾವಣೆ ಜನರು ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಆತ್ಮ ವಿಶ್ವಾಸ ತುಂಬಿದರು. ಕೋವಿಡ್‌ಬಂದವರಿಗೆ ಆತ್ಮ ವಿಶ್ವಾಸ ತುಂಬುವ ಮೂಲಕ ಗುಣಮುಖರಾಗಲು ಸಹಕರಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT