<p><strong>ವಿಜಯಪುರ: </strong>ಇಂಡಿಯ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆ ಎಂಬುವವರಿಗೆ ಹಣಕ್ಕಾಗಿ ಜೀವ ಬೆದರಿಕೆ ಒಡ್ಡಿದ್ದ ಭೀಮಾ ತೀರದ ಮಹಾದೇವ ಸಾವುಕಾರ ಭೈರಗೊಂಡ ಎಂಬಾತನನ್ನು ಚಡಚಣ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.</p>.<p>‘ಜುಲೈ 19ರಂದು ಮಹಾದೇವ ಸಾಹುಕಾರ ಎಂಬಾತ ಫೋನ್ ಮಾಡಿ, ಕೆರೂರ ಗ್ರಾಮದ ತೋಟದ ಮನೆಗೆ ಕರೆಯಿಸಿದ್ದಾರೆ. ಈ ಸಂದರ್ಭದಲ್ಲಿ ಸಾವಕಾರ ಹಾಗೂ ಆತನ ಸಹಚರರು ಕೂಡಿಕೊಂಡು ₹ 5 ಕೋಟಿ ಹಣ ಕೊಡಬೇಕು, ಇಲ್ಲವೇ 3 ಕೆ.ಜಿ.ಬಂಗಾರ ಕೊಡಬೇಕು. ಇಲ್ಲವಾದರೆ ನಿನ್ನ ಮನೆ ಹೊಕ್ಕು ಹಣೆಗೆ ಗುಂಡಿಟ್ಟು ಹೊಡೆಯುತ್ತೇವೆ’ ಎಂದು ಬೆದರಿಕೆ ಒಡ್ಡಿದ್ದರು ಎಂದು ಡಾಂಗೆ ದೂರಿನಲ್ಲಿ ತಿಳಿಸಿದ್ದರು.</p>.<p>‘ಈ ವಿಷಯವನ್ನು ಪೊಲೀಸರಿಗೆ ಅಥವಾ ಬೇರೆ ಯಾರಿಗಾದರೂ ತಿಳಿಸಿದರೆ ನಿನ್ನ ಅಂಗಡಿ, ಮನೆ, ಲೂಟಿ ಮಾಡಿಸುತ್ತೇನೆ’ ಎಂದು ಹೆದರಿಸಿದ್ದರು ಎಂದು ಡಾಂಗೆ ಚಡಚಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<p>ಪ್ರಕರಣದ ಬೆನ್ನತ್ತಿದ ಚಡಚಣ ಪೊಲೀಸರು, ಆರೋಪಿ ಮಹಾದೇವ ಸಾವುಕಾರ ಭೈರಗೊಂಡನನ್ನು ಬಂಧಿಸಿ, ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಇನ್ನುಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.</p>.<p><strong>ಕೋವಿಡ್ ದೃಢ:</strong> ಬಂಧಿತ ಆರೋಪಿ ಮಹಾದೇವ ಸಾವುಕಾರ ಭೈರಗೊಂಡಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಜೈಲಿನಲ್ಲಿ ಪ್ರತ್ಯೇಕವಾಗಿ ಇರಲಿಸಲಾಗಿದೆ. ಆರೋಪಿಯ ಬಂಧನ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸರು ಪರೀಕ್ಷೆಗೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಇಂಡಿಯ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆ ಎಂಬುವವರಿಗೆ ಹಣಕ್ಕಾಗಿ ಜೀವ ಬೆದರಿಕೆ ಒಡ್ಡಿದ್ದ ಭೀಮಾ ತೀರದ ಮಹಾದೇವ ಸಾವುಕಾರ ಭೈರಗೊಂಡ ಎಂಬಾತನನ್ನು ಚಡಚಣ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.</p>.<p>‘ಜುಲೈ 19ರಂದು ಮಹಾದೇವ ಸಾಹುಕಾರ ಎಂಬಾತ ಫೋನ್ ಮಾಡಿ, ಕೆರೂರ ಗ್ರಾಮದ ತೋಟದ ಮನೆಗೆ ಕರೆಯಿಸಿದ್ದಾರೆ. ಈ ಸಂದರ್ಭದಲ್ಲಿ ಸಾವಕಾರ ಹಾಗೂ ಆತನ ಸಹಚರರು ಕೂಡಿಕೊಂಡು ₹ 5 ಕೋಟಿ ಹಣ ಕೊಡಬೇಕು, ಇಲ್ಲವೇ 3 ಕೆ.ಜಿ.ಬಂಗಾರ ಕೊಡಬೇಕು. ಇಲ್ಲವಾದರೆ ನಿನ್ನ ಮನೆ ಹೊಕ್ಕು ಹಣೆಗೆ ಗುಂಡಿಟ್ಟು ಹೊಡೆಯುತ್ತೇವೆ’ ಎಂದು ಬೆದರಿಕೆ ಒಡ್ಡಿದ್ದರು ಎಂದು ಡಾಂಗೆ ದೂರಿನಲ್ಲಿ ತಿಳಿಸಿದ್ದರು.</p>.<p>‘ಈ ವಿಷಯವನ್ನು ಪೊಲೀಸರಿಗೆ ಅಥವಾ ಬೇರೆ ಯಾರಿಗಾದರೂ ತಿಳಿಸಿದರೆ ನಿನ್ನ ಅಂಗಡಿ, ಮನೆ, ಲೂಟಿ ಮಾಡಿಸುತ್ತೇನೆ’ ಎಂದು ಹೆದರಿಸಿದ್ದರು ಎಂದು ಡಾಂಗೆ ಚಡಚಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<p>ಪ್ರಕರಣದ ಬೆನ್ನತ್ತಿದ ಚಡಚಣ ಪೊಲೀಸರು, ಆರೋಪಿ ಮಹಾದೇವ ಸಾವುಕಾರ ಭೈರಗೊಂಡನನ್ನು ಬಂಧಿಸಿ, ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಇನ್ನುಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.</p>.<p><strong>ಕೋವಿಡ್ ದೃಢ:</strong> ಬಂಧಿತ ಆರೋಪಿ ಮಹಾದೇವ ಸಾವುಕಾರ ಭೈರಗೊಂಡಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಜೈಲಿನಲ್ಲಿ ಪ್ರತ್ಯೇಕವಾಗಿ ಇರಲಿಸಲಾಗಿದೆ. ಆರೋಪಿಯ ಬಂಧನ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸರು ಪರೀಕ್ಷೆಗೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>