ವಿಜಯಪುರ: ಪ್ರವಾಹ ಪರಿಸ್ಥಿತಿ ಎದುರಿಸುವ ಕುರಿತಂತೆ ತಾವರಖೇಡ ಗ್ರಾಮದಲ್ಲಿ ದೋಣಿ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸುವ ಕುರಿತು ಅಣಕು ಪ್ರದರ್ಶನ ನಡೆಸಲಾಯಿತು.
ಇಂಡಿ ಉಪವಿಭಾಗಾಧಿಕಾರಿ ಡಾ.ರಾಹುಲ್ ಸಿಂಧೆ ಇವರ ನೇತೃತ್ವದಲ್ಲಿ ಸಿಂದಗಿ ತಹಶೀಲ್ದಾರ್, ಅಗ್ನಿಶಾಮಕ ಇಲಾಖೆ, ಆರೋಗ್ಯ ಇಲಾಖೆ, ಹೋಂ ಗಾರ್ಡ್ಸ್ ಗಳು ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಅಣಕು ಕಾರ್ಯಾಚರಣೆ ನಡೆಯಿತು.
ದೇವಣಗಾವ್ ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಯೋಜನಾ ಸಮಿತಿಗೆ ಮುಂಬರುವ ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ವ ರೀತಿಯಲ್ಲಿ ಸನ್ನದ್ಧಗೊಳ್ಳಲು ತಿಳಿಸಲಾಯಿತು.