<p><strong>ವಿಜಯಪುರ:</strong> ಜಿಲ್ಲೆಯಲ್ಲಿ ಗುರುವಾರ ಮಳೆ ಪ್ರಮಾಣ ತಗ್ಗಿತ್ತು. ಆದರೆ, ಮಹಾರಾಷ್ಟ್ರದ ಜಲಾಶಯಗಳಿಂದ 3 ಲಕ್ಷ ಕ್ಯೂಸೆಕ್ಗೂ ಅಧಿಕ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ಅಬ್ಬರ ಜೋರಾಗಿದೆ.</p>.<p>ಭೀಮಾ ನದಿಪಾತ್ರದ ಜನರಿಗೆ ಪ್ರವಾಹದ ಕುರಿತು ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.ಜೊತೆಗೆಡೋಣಿ ನದಿಯೂ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದೆ.</p>.<p>ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿಯಲ್ಲಿ ಹಳ್ಳ ದಾಟಿ ಹೊಲಕ್ಕೆ ಹೊರಟಿದ್ದ ರೈತ ಶಿವಪುತ್ರ ಹಣಮಂತ ನಾಟೀಕಾರ(38) ನೀರಿನ ಸೆಳವಿಗೆ ಸಿಲುಕು ಬೆಳಿಗ್ಗೆ ಕೊಚ್ಚಿ ಹೋಗಿದ್ದು, ಸುಮಾರು ಅರ್ಧ ಕಿ.ಮೀ.ದೂರದಲ್ಲಿ ಮಧ್ಯಾಹ್ನ ದೇಹ ಪತ್ತೆಯಾಗಿದೆ.</p>.<p>ಮುದ್ದೇಬಿಹಾಳ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಮನೆಯ ಗೋಡೆ ಬಿದ್ದು ಒಬ್ಬರು ಗಾಯಗೊಂಡಿರುತ್ತಾರೆ.</p>.<p>ಜಿಲ್ಲೆಯಲ್ಲಿ ಮಳೆಗೆ 811 ಮನೆಗಳು ಭಾಗಶಃ ಕುಸಿದಿವೆ, ಐದು ಜಾನುವಾರುಗಳು ಸಾವಿಗೀಡಾಗಿವೆ.</p>.<p>ದೂಳಖೇಡ, ಶಿರನಾಳ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿರುವ 15 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.</p>.<p>ತಾಳಿಕೋಟೆ ಬಳಿ ದೋಣಿ ನದಿಯಲ್ಲಿ 7 ಜನ ಕಟ್ಟಿಗೆ ಕಡಿಯಲು ಹೋದವರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸಲಾಗಿದೆ.</p>.<p>ಸಿಂದಗಿ ತಾಲ್ಲೂಕಿನ ತಾರಾಪುರ ಗ್ರಾಮಕ್ಕೆ ನೀರು ಸುತ್ತುವರೆದಿರುತ್ತದೆ. ಇಂಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ50 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.</p>.<p>ದೇವರ ಹಿಪ್ಪರಗಿ ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಹಳ್ಳದ ನೀರು ಗ್ರಾಮದ 10 ಮನೆಗಳಿಗೆ ನುಗ್ಗಿರುವುದರಿಂದ, ಜನರನ್ನು ಶಾಲೆಗೆ ಸ್ಥಳಾಂತರಿಸಲಾಗಿದೆ.</p>.<p>ಸಿಂದಗಿ ತಾಲ್ಲೂಕಿನ ಮೋರಟಗಿಯಲ್ಲಿ ಒಂದು ಕಾಳಜಿ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ಅಲ್ಲಿ ಒಟ್ಟು 28 ಜನರಿಗೆ ಆಶ್ರಯವನ್ನು ಕಲ್ಪಿಸಲಾಗಿದೆ.</p>.<p>ವಿಜಯಪುರ–ಸೊಲ್ಲಾಪುರ ನಡುವಿನ ತಡವಲಗಾ ರೈಲು ಸೇತುವೆ ಭೀಮಾ ನದಿ ಪ್ರವಾಹಕ್ಕೆ ಸಿಲುಕಿದೆ. ನದಿ ನೀರು ಸೇತುವೆ ಮೇಲೆ ಹರಿಯುತ್ತಿದೆ. ಇದರಿಂದ ರೈಲು ಸಂಚಾರಕ್ಕೆ ಅಡಚಣೆಯಾಗಿದೆ.</p>.<p>ಬಗಲೂರ ಮತ್ತು ಘತ್ತರಗಾ ಸೇತುವೆ ಮೇಲೆ ನೀರು ಬಂದಿದ್ದು, ಸಿಂದಗಿ ಮತ್ತು ಅಫಜಲಪುರ ರಸ್ತೆ ಸಂಪರ್ಕ ಕಡಿತಗೊಂಡಿರುತ್ತದೆ.</p>.<p>ತಾಳಿಕೋಟೆ–ಹಡಗಿನಾಳ ನೆಲಟಮಟ್ಟದ ಸೇತುವೆ ಡೋಣಿ ಪ್ರವಾಹದಲ್ಲಿ ಮುಳುಗಿದೆ. ಎರಡು ದಿನಗಳಿಂದ ಮುಳುಗಿದ್ದ ದೇವರಹಿಪ್ಪರಗಿ–ಬಸವನ ಬಾಗೇವಾಡಿ ಸಂಪರ್ಕಿಸುವ ಸಾತಿಹಾಳ ಸೇತುವೆ ಗುರುವಾರ ಸಂಚಾರಕ್ಕೆ ಮುಕ್ತವಾಗಿದೆ.</p>.<p>ಸಣ್ಣನೀರಾವರಿ ಇಲಾಖೆಗೆ ಸೇರಿದ ಗುಂದವಾನ(ಸೈಟ್-2) ಕೆರೆಯ ಕೆನಾಲ್ ಗೇಟ್ ಹಾಗೂ ಕೆನಾಲ್ ಹಾನಿಗೆ ಒಳಗಾಗಿದ್ದು, ಅದನ್ನು ದುರಸ್ತಿ ಪಡಿಸಲಾಗಿದೆ. ಇದರಿಂದ ಬೆಳೆ ಹಾನಿಯಾಗಿದ್ದು, ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 3.6 ಸೆಂ.ಮೀ ಮಳೆಯಾಗಿದೆ. ಅಂದರೆ, ಶೇ1155 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ.ದೇವರ ಹಿಪ್ಪರಗಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚಿನ ಪ್ರಮಾಣದಲ್ಲಿ ಅಂದರೆ, 9.4ಸೆಂ.ಮೀ ಮಳೆಯಾಗಿದೆ.</p>.<p class="Subhead"><strong>ಹಾನಿ:</strong></p>.<p>ಲೋಕೋಪಯೋಗಿ ಇಲಾಖೆಯ ಒಟ್ಟು 63.03 ಕಿ.ಮೀ. ರಸ್ತೆ ಮತ್ತು 2 ಸೇತುವೆಗಳು ಹಾನಿಗೊಳಗಾಗಿವೆ. ಮೂಲ ಸೌಕರ್ಯಗಳ ಹಾನಿ ಹಾಗೂಬೆಳೆ ಹಾನಿಯ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಯಲ್ಲಿ ಗುರುವಾರ ಮಳೆ ಪ್ರಮಾಣ ತಗ್ಗಿತ್ತು. ಆದರೆ, ಮಹಾರಾಷ್ಟ್ರದ ಜಲಾಶಯಗಳಿಂದ 3 ಲಕ್ಷ ಕ್ಯೂಸೆಕ್ಗೂ ಅಧಿಕ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ಅಬ್ಬರ ಜೋರಾಗಿದೆ.</p>.<p>ಭೀಮಾ ನದಿಪಾತ್ರದ ಜನರಿಗೆ ಪ್ರವಾಹದ ಕುರಿತು ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.ಜೊತೆಗೆಡೋಣಿ ನದಿಯೂ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದೆ.</p>.<p>ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿಯಲ್ಲಿ ಹಳ್ಳ ದಾಟಿ ಹೊಲಕ್ಕೆ ಹೊರಟಿದ್ದ ರೈತ ಶಿವಪುತ್ರ ಹಣಮಂತ ನಾಟೀಕಾರ(38) ನೀರಿನ ಸೆಳವಿಗೆ ಸಿಲುಕು ಬೆಳಿಗ್ಗೆ ಕೊಚ್ಚಿ ಹೋಗಿದ್ದು, ಸುಮಾರು ಅರ್ಧ ಕಿ.ಮೀ.ದೂರದಲ್ಲಿ ಮಧ್ಯಾಹ್ನ ದೇಹ ಪತ್ತೆಯಾಗಿದೆ.</p>.<p>ಮುದ್ದೇಬಿಹಾಳ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಮನೆಯ ಗೋಡೆ ಬಿದ್ದು ಒಬ್ಬರು ಗಾಯಗೊಂಡಿರುತ್ತಾರೆ.</p>.<p>ಜಿಲ್ಲೆಯಲ್ಲಿ ಮಳೆಗೆ 811 ಮನೆಗಳು ಭಾಗಶಃ ಕುಸಿದಿವೆ, ಐದು ಜಾನುವಾರುಗಳು ಸಾವಿಗೀಡಾಗಿವೆ.</p>.<p>ದೂಳಖೇಡ, ಶಿರನಾಳ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿರುವ 15 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.</p>.<p>ತಾಳಿಕೋಟೆ ಬಳಿ ದೋಣಿ ನದಿಯಲ್ಲಿ 7 ಜನ ಕಟ್ಟಿಗೆ ಕಡಿಯಲು ಹೋದವರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸಲಾಗಿದೆ.</p>.<p>ಸಿಂದಗಿ ತಾಲ್ಲೂಕಿನ ತಾರಾಪುರ ಗ್ರಾಮಕ್ಕೆ ನೀರು ಸುತ್ತುವರೆದಿರುತ್ತದೆ. ಇಂಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ50 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.</p>.<p>ದೇವರ ಹಿಪ್ಪರಗಿ ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಹಳ್ಳದ ನೀರು ಗ್ರಾಮದ 10 ಮನೆಗಳಿಗೆ ನುಗ್ಗಿರುವುದರಿಂದ, ಜನರನ್ನು ಶಾಲೆಗೆ ಸ್ಥಳಾಂತರಿಸಲಾಗಿದೆ.</p>.<p>ಸಿಂದಗಿ ತಾಲ್ಲೂಕಿನ ಮೋರಟಗಿಯಲ್ಲಿ ಒಂದು ಕಾಳಜಿ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ಅಲ್ಲಿ ಒಟ್ಟು 28 ಜನರಿಗೆ ಆಶ್ರಯವನ್ನು ಕಲ್ಪಿಸಲಾಗಿದೆ.</p>.<p>ವಿಜಯಪುರ–ಸೊಲ್ಲಾಪುರ ನಡುವಿನ ತಡವಲಗಾ ರೈಲು ಸೇತುವೆ ಭೀಮಾ ನದಿ ಪ್ರವಾಹಕ್ಕೆ ಸಿಲುಕಿದೆ. ನದಿ ನೀರು ಸೇತುವೆ ಮೇಲೆ ಹರಿಯುತ್ತಿದೆ. ಇದರಿಂದ ರೈಲು ಸಂಚಾರಕ್ಕೆ ಅಡಚಣೆಯಾಗಿದೆ.</p>.<p>ಬಗಲೂರ ಮತ್ತು ಘತ್ತರಗಾ ಸೇತುವೆ ಮೇಲೆ ನೀರು ಬಂದಿದ್ದು, ಸಿಂದಗಿ ಮತ್ತು ಅಫಜಲಪುರ ರಸ್ತೆ ಸಂಪರ್ಕ ಕಡಿತಗೊಂಡಿರುತ್ತದೆ.</p>.<p>ತಾಳಿಕೋಟೆ–ಹಡಗಿನಾಳ ನೆಲಟಮಟ್ಟದ ಸೇತುವೆ ಡೋಣಿ ಪ್ರವಾಹದಲ್ಲಿ ಮುಳುಗಿದೆ. ಎರಡು ದಿನಗಳಿಂದ ಮುಳುಗಿದ್ದ ದೇವರಹಿಪ್ಪರಗಿ–ಬಸವನ ಬಾಗೇವಾಡಿ ಸಂಪರ್ಕಿಸುವ ಸಾತಿಹಾಳ ಸೇತುವೆ ಗುರುವಾರ ಸಂಚಾರಕ್ಕೆ ಮುಕ್ತವಾಗಿದೆ.</p>.<p>ಸಣ್ಣನೀರಾವರಿ ಇಲಾಖೆಗೆ ಸೇರಿದ ಗುಂದವಾನ(ಸೈಟ್-2) ಕೆರೆಯ ಕೆನಾಲ್ ಗೇಟ್ ಹಾಗೂ ಕೆನಾಲ್ ಹಾನಿಗೆ ಒಳಗಾಗಿದ್ದು, ಅದನ್ನು ದುರಸ್ತಿ ಪಡಿಸಲಾಗಿದೆ. ಇದರಿಂದ ಬೆಳೆ ಹಾನಿಯಾಗಿದ್ದು, ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 3.6 ಸೆಂ.ಮೀ ಮಳೆಯಾಗಿದೆ. ಅಂದರೆ, ಶೇ1155 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ.ದೇವರ ಹಿಪ್ಪರಗಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚಿನ ಪ್ರಮಾಣದಲ್ಲಿ ಅಂದರೆ, 9.4ಸೆಂ.ಮೀ ಮಳೆಯಾಗಿದೆ.</p>.<p class="Subhead"><strong>ಹಾನಿ:</strong></p>.<p>ಲೋಕೋಪಯೋಗಿ ಇಲಾಖೆಯ ಒಟ್ಟು 63.03 ಕಿ.ಮೀ. ರಸ್ತೆ ಮತ್ತು 2 ಸೇತುವೆಗಳು ಹಾನಿಗೊಳಗಾಗಿವೆ. ಮೂಲ ಸೌಕರ್ಯಗಳ ಹಾನಿ ಹಾಗೂಬೆಳೆ ಹಾನಿಯ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>