ವಿಜಯಪುರ: ಜಿಲ್ಲೆಯ ಎಲ್ಲ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ 132 ದಿನಗಳ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಉಪ್ಪು ಮತ್ತು 55 ದಿನಗಳಿಗೆ ಪ್ರತಿ ಮಗುವಿಗೆ 1 ಪ್ಯಾಕೇಟ್ ಎಣ್ಣೆ ( ಸೂರ್ಯಕಾಂತಿ ಎಣ್ಣೆ ) ವಿತರಿಸಲಾಗುವುದು ಎಂದು ಜಿಲ್ಲಾ ಅಕ್ಷರ ದಾಸೋಹ ಯೋಜನೆ ಶಿಕ್ಷಣಾಧಿಕಾರಿ ಎಸ್.ಎಸ್.ಮುಜಾವರ ತಿಳಿಸಿದ್ದಾರೆ.