ವಿಜಯಪುರ: ಕೃಷ್ಣೆಯ ಉಗಮಸ್ಥಾನವಾದ ಮಹಾರಾಷ್ಟ್ರದ ಸತಾರ ಜಿಲ್ಲೆಯ ಮಹಾಬಲೇಶ್ವರದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ದಂಪತಿ ಬುಧವಾರ ಗಂಗಾಪೂಜೆ ಸಲ್ಲಿಸಿ, ಬಾಗಿನ ಅರ್ಪಣೆ ಮಾಡಿದರು.
15 ವರ್ಷಗಳಿಂದ ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ರೈತರೊಂದಿಗೆ ತೆರಳಿ ಕೃಷ್ಣೆಗೆ ಬಾಗಿನ ಅರ್ಪಣೆ ಮಾಡುತ್ತಾ ಬಂದಿದ್ದಾರೆ.