<p><strong>ವಿಜಯಪುರ: </strong>ನಗರದ ಗ್ಯಾಂಗ್ ಬಾವಡಿಯ ಮನೆಯೊಂದರಲ್ಲಿ ಹಾಗೂ ಬಸ್ ನಿಲ್ದಾಣದಲ್ಲಿ ಬ್ಯಾಗ್ ಅಪಹರಿಸಿ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ನಾಲ್ಕು ಜನ ಕಳ್ಳರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಶಿಕಾರಖಾನೆಯ ರಫೀಕ್ ಮಹಿಬೂಬಸಾಬ್ ಬೇಪಾರಿ, ಲಂಗರ ಬಜಾರ್ನ ಶಾಹಿದ್ ಇಬ್ರಾಹಿಂ ಕಮತಗಿ, ಇಂಡಿ ಪಟ್ಟಣದ ಕರೀಂ ನಗರದ ಅಶ್ಫಾಕ್ ಅಲಿಯಾಸ್ ಗೊಡ್ಯಾ ಸೈಫನಸಾಬ ಶೇಖ ಹಾಗೂ ಗಾಂಧಿ ನಗರದ ಆರೀಫ ನೂರಸಾಬ ಕಡದೇಕರ ಬಂಧಿತರು.</p>.<p>ಬಂಧಿತರಿಂದ ₹6.92 ಲಕ್ಷ ಮೌಲ್ಯದ 173 ಗ್ರಾಂ ಚಿನ್ನಾಭರಣ ಹಾಗೂ ₹2 ಸಾವಿರ ಮೌಲ್ಯದ 54 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಒಟ್ಟು ₹6.94 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಎಲ್.ಅರಸಿದ್ದಿ, ಡಿವೈಎಸ್ಪಿ ಲಕ್ಷ್ಮೀನಾರಾಯಣ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ಗಳಾದ ಎಸ್.ಆರ್.ಕಾಂಬಳೆ, ರವೀಂದ್ರ ನಾಯ್ಕೋಡಿ, ಸಬ್ ಇನ್ಸ್ಪೆಕ್ಟರ್ ಎಸ್.ಬಿ.ಗೌಡರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ನಗರದ ಗ್ಯಾಂಗ್ ಬಾವಡಿಯ ಮನೆಯೊಂದರಲ್ಲಿ ಹಾಗೂ ಬಸ್ ನಿಲ್ದಾಣದಲ್ಲಿ ಬ್ಯಾಗ್ ಅಪಹರಿಸಿ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ನಾಲ್ಕು ಜನ ಕಳ್ಳರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಶಿಕಾರಖಾನೆಯ ರಫೀಕ್ ಮಹಿಬೂಬಸಾಬ್ ಬೇಪಾರಿ, ಲಂಗರ ಬಜಾರ್ನ ಶಾಹಿದ್ ಇಬ್ರಾಹಿಂ ಕಮತಗಿ, ಇಂಡಿ ಪಟ್ಟಣದ ಕರೀಂ ನಗರದ ಅಶ್ಫಾಕ್ ಅಲಿಯಾಸ್ ಗೊಡ್ಯಾ ಸೈಫನಸಾಬ ಶೇಖ ಹಾಗೂ ಗಾಂಧಿ ನಗರದ ಆರೀಫ ನೂರಸಾಬ ಕಡದೇಕರ ಬಂಧಿತರು.</p>.<p>ಬಂಧಿತರಿಂದ ₹6.92 ಲಕ್ಷ ಮೌಲ್ಯದ 173 ಗ್ರಾಂ ಚಿನ್ನಾಭರಣ ಹಾಗೂ ₹2 ಸಾವಿರ ಮೌಲ್ಯದ 54 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಒಟ್ಟು ₹6.94 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಎಲ್.ಅರಸಿದ್ದಿ, ಡಿವೈಎಸ್ಪಿ ಲಕ್ಷ್ಮೀನಾರಾಯಣ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ಗಳಾದ ಎಸ್.ಆರ್.ಕಾಂಬಳೆ, ರವೀಂದ್ರ ನಾಯ್ಕೋಡಿ, ಸಬ್ ಇನ್ಸ್ಪೆಕ್ಟರ್ ಎಸ್.ಬಿ.ಗೌಡರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>