ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

Last Updated 10 ಮಾರ್ಚ್ 2021, 16:21 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ಗ್ರಾಮೀಣ ಠಾಣೆಗಳ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಮನೆಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ನಾಲ್ವರು ಅಂತರರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಜತ್‌ನ ಪಾರದಿ ತಾಂಡಾದ ಕಿಶನ್‌ ಚವ್ಹಾಣ, ರೋಹಿತ ಚವ್ಹಾಣ,ಸಂತೋಷ ಚವ್ಹಾಣ ಮತ್ತು ಕಿರಣ ಕಾಳೆ ಎಂಬುವವರನ್ನು ಬುಧವಾರ ಬಂಧಿಸಿದ್ದಾರೆ.

ಆರೋಪಿಗಳ ಬಳಿ ಇದ್ದ ₹4.60 ಲಕ್ಷ ಮೌಲ್ಯದ 100 ಗ್ರಾಂ ಬಂಗಾರದ ಆಭರಣ, ₹15 ಸಾವಿರ ಮೌಲ್ಯದ200 ಗ್ರಾಂ ಬೆಳ್ಳಿಯ ಆಭರಣ ಮತ್ತು ₹5 ಲಕ್ಷ ಮೊತ್ತದ ಕಾರು ಸೇರಿದಂತೆಒಟ್ಟು ₹9.75 ಲಕ್ಷ ಮೊತ್ತದ ಮಾಲನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ವಿಜಯಪುರ ಗ್ರಾಮೀಣಸಿಪಿಐಎಸ್.ಬಿ.ಪಾಲಭಾವಿ ನೇತೃತ್ವದಲ್ಲಿ ಗಾಂಧಿಚೌಕ ಸಿಪಿಐ ರವಿಂದ್ರ ನಾಯಕೊಡಿ, ತಿಕೊಟಾ ಪೊಲೀಸ್‌ ಠಾಣೆಪಿ.ಎಸ್.ಐ ಬಿ.ಬಿ.ಬಿಸನಕೊಪ್ಪ ಮತ್ತುಎಸ್.ಕೆ.ಲಂಗೂಟಿ ಹಾಗೂ ಸಿಬ್ಬಂದಿಗಳಾದ ಎಂ.ಎನ್. ಮುಜಾವರ, ಆರ್.ಡಿ.ಅಂಜುಟಗಿ, ಎಲ್.ಎಸ್.ಹಿರೇಗೌಡರ, ಎಂ.ಬಿ.ಜನಗೊಂಡ, ಸಲೀಂ ಸೌದಿ, ಸಿದ್ದು ದಾನಪ್ಪಗೋಳ, ಎಂ.ಎನ್.ಇಚ್ಚುರ, ಹೊನಗೌಡ, ಅನೀಲ ಚೌಗಲೆ, ಎಸ್.ಎಸ್.ಹರಿಜನ, ಶಿವು ಕುಂಬಾರ ಅವರನ್ನು ಒಳಗೊಂಡ ತಂಡವು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT