ನವೆಂಬರ್ ಒಳಗೆ ದೇಶದ 80 ಕೋಟಿ ಜನರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿಯವರ ಈ ನಿರ್ಧಾರಗಳು ಸಂಕಷ್ಟದಲ್ಲಿರುವ ಜನರಿಗೆ ವರದಾನವೆನಿಸಲಿವೆ. ಜನಪರ ಪ್ರಧಾನಿ ಎಂಬುದನ್ನು ಮೋದಿ ಅವರು ಈ ಮೂಲಕ ಸಾಬೀತುಪಡಿಸಿದ್ದಾರೆ. ಇದರಿಂದ ಪ್ರಧಾನಿಯವರ ಮೇಲೆ ಜನರ ವಿಶ್ವಾಸ ಇನ್ನಷ್ಟು ಹೆಚ್ಚಲಿದೆ ಎಂದು ಅವರು ಹೇಳಿದ್ದಾರೆ.