<p><strong>ವಿಜಯಪುರ: </strong>ಐನಾಪೂರ ತಾಂಡದಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟ ತಡೆಯಲು ಆಗ್ರಹಿಸಿ ತಾಂಡಾ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಜಯಶ್ರೀ ಜಾಧವ ಮಾತನಾಡಿ, ತಾಂಡಾದಲ್ಲಿ ಹಲವಾರು ಜನ ಜೂಜಾಟ ಆಡುತ್ತಾರೆ. ದಿನೆದಿನೇ ಕಳ್ಳಭಟ್ಟಿ ಸಾರಾಯಿ ಮಾಡುತ್ತಿರುವವರ ಸಂಖ್ಯೆ ಹೆಚ್ಚಿದೆ. ಪ್ರಾಥಮಿಕ ಶಾಲೆ ಆವರಣದಲ್ಲಿ ಕುಳಿತುಕೊಂಡು ಕುಡಿಯುವುದು ಮತ್ತಿತರ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.</p>.<p>ಈ ಕುರಿತಂತೆ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದರೂ ಈವರೆಗೆ ಕ್ರಮಕೈಗೊಂಡಿಲ್ಲ. ಕೂಡಲೇ ಜಿಲ್ಲಾಧಿಕಾರಿಗಳು ತಾಂಡಾ ಜನರ ನೆಮ್ಮದಿಗಾಗಿ ತಾಂಡಾದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ, ಜೂಜಾಟ ತಡೆಯಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ತಾರಾಸಿಂಗ್ ನಾಯಕ, ವೀರಚಂದ ಪೂರಿ, ಚಂದು ಜಾಧವ, ಚಂದ್ರಶೇಖರ ರಾಠೋಡ, ಕಾಶೀನಾಥ ಚವ್ಹಾಣ, ಮೋತಿಲಾಲ್ ನಾಯಕ, ಸುಶೀಲಾಬಾಯಿ ಚವ್ಹಾಣ, ಸುಮಿತ್ರಾ ರಾಠೋಡ, ಗುರುಬಾಯಿ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಐನಾಪೂರ ತಾಂಡದಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟ ತಡೆಯಲು ಆಗ್ರಹಿಸಿ ತಾಂಡಾ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಜಯಶ್ರೀ ಜಾಧವ ಮಾತನಾಡಿ, ತಾಂಡಾದಲ್ಲಿ ಹಲವಾರು ಜನ ಜೂಜಾಟ ಆಡುತ್ತಾರೆ. ದಿನೆದಿನೇ ಕಳ್ಳಭಟ್ಟಿ ಸಾರಾಯಿ ಮಾಡುತ್ತಿರುವವರ ಸಂಖ್ಯೆ ಹೆಚ್ಚಿದೆ. ಪ್ರಾಥಮಿಕ ಶಾಲೆ ಆವರಣದಲ್ಲಿ ಕುಳಿತುಕೊಂಡು ಕುಡಿಯುವುದು ಮತ್ತಿತರ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.</p>.<p>ಈ ಕುರಿತಂತೆ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದರೂ ಈವರೆಗೆ ಕ್ರಮಕೈಗೊಂಡಿಲ್ಲ. ಕೂಡಲೇ ಜಿಲ್ಲಾಧಿಕಾರಿಗಳು ತಾಂಡಾ ಜನರ ನೆಮ್ಮದಿಗಾಗಿ ತಾಂಡಾದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ, ಜೂಜಾಟ ತಡೆಯಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ತಾರಾಸಿಂಗ್ ನಾಯಕ, ವೀರಚಂದ ಪೂರಿ, ಚಂದು ಜಾಧವ, ಚಂದ್ರಶೇಖರ ರಾಠೋಡ, ಕಾಶೀನಾಥ ಚವ್ಹಾಣ, ಮೋತಿಲಾಲ್ ನಾಯಕ, ಸುಶೀಲಾಬಾಯಿ ಚವ್ಹಾಣ, ಸುಮಿತ್ರಾ ರಾಠೋಡ, ಗುರುಬಾಯಿ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>