ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಕಂಬಾಗಿಯಲ್ಲಿ ನೈಸರ್ಗಿಕ ಕಟ್ಟಿಗೆ ಗಾಣದಿಂದ ತಯಾರಿಸುವ ಘಟಕ ಮತ್ತು ಮಳಿಗೆಯನ್ನು ಮೇ 15ರಂದು ಸಂಜೆ 4ಕ್ಕೆ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.
ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಮಾಜಿ ಸಚಿವ ಎಸ್.ಆರ್.ಪಾಟೀಲ, ಮಾಜಿ ಶಾಸಕ ಆನಂದ ನ್ಯಾಮಗೌಡ, ನಂದಿ ಕಾರ್ಖಾನೆ ಅಧ್ಯಕ್ಷ ಆನಂದಕುಮಾರ ದೇಸಾಯಿ, ಡಾ.ಮಹಾಂತೇಶ ಬಿರಾದಾರ ಬರಲಿದ್ದಾರೆ.
ಮಧುರಾ ಆಯಿಲ್ ಇಂಡಸ್ಟ್ರೀಸ್ ಮೂಲಕ ಸಾಂಪ್ರದಾಯಿಕ ಮರದ ಗಾಣದಿಂದ ತಯಾರಿಸುವ ಶುದ್ಧ ಆರೋಗ್ಯಕರ ಕೊಬ್ಬರಿ, ಶೇಂಗಾ ಮತ್ತು ಕುಸುಬೆ ಅಡುಗೆ ಎಣ್ಣೆ ಉತ್ಪಾದಿಸುತ್ತಿದ್ದೇವೆ ಎಂದು ಉಮೇಶ ಮಲ್ಲಣ್ಣನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.