1921ರ ಮೇ 28ರಂದು ಅಸಹಕಾರ ಚಳವಳಿಯ ಪ್ರಚಾರಕ್ಕೆಂದು ಎರಡನೇ ಬಾರಿಗೆ ಭೇಟಿ ನೀಡಿದ್ದರು. 1927ರಲ್ಲಿ ಖಾದಿ ಪ್ರಚಾರಕ್ಕಾಗಿ ಹಾಗೂ 1934 ರಂದು ಅಸ್ಪೃಶ್ಯತಾ ನಿವಾರಣಾ ಯಾತ್ರೆಯ ಅಂಗವಾಗಿ ಭೇಟಿ ನೀಡಿದ್ದ ಗಾಂಧೀಜಿ ಅವರು, ಜಿಲ್ಲೆಯ ಹೊನವಾಡ, ತಿಕೋಟಾ, ತೊರವಿಗೆ ಭೇಟಿ ನೀಡಿ, ಜಿಲ್ಲೆಯ ಜನತೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಹಾಗೂ ಸ್ವಾತಂತ್ರ್ಯ ಚಳವಳಿಯ ಬಗ್ಗೆ ಕಿಚ್ಚನ್ನು ಹಚ್ಚಿದ್ದರು.