<p><strong>ವಿಜಯಪುರ</strong>: ಶಿಕ್ಷಣ ಸಂಸ್ಥೆಗಳಲ್ಲಿಯೂ ಗಣೇಶನನ್ನು ಪ್ರತಿಷ್ಠಾಪಿಸಿ ಮಕ್ಕಳ ಮನಸ್ಸನ್ನು ಮುದಗೊಳಿಸಿ ಅವರನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ಸಂತಸ ತಂದಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.</p>.<p>ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪಾಲಕರು ಹಾಗೂ ಶಿಕ್ಷಕರು ಕೇವಲ ಮಗುವಿನ ಅಂಕಗಳನ್ನು ನೋಡದೆ ಆತನ ಸಾಮರ್ಥ್ಯವನ್ನು ಗುರುತಿಸಬೇಕಾಗಿದೆ ಎಂದರು.</p>.<p>ಯುವ ವಕೀಲ ಮಹಮ್ಮದ್ ಗೌಸ್ ಹವಾಲ್ದಾರ್ ಮಾತನಾಡಿ, ಈ ನಾಡಿನಲ್ಲಿ ಯಾರೂ ಕೇವಲ ಹಿಂದುಗಳಾಗಿ ಬದುಕಬೇಡಿ, ಮುಸ್ಲಿಮರಾಗಿ ಬದುಕಬೇಡಿ, ಜೈನರಾಗಿ ಬದುಕಬೇಡಿ, ಸಿಖ್ ರಾಗಿ ಬದುಕಬೇಡಿ, ಇಂದಿನ ಮಕ್ಕಳೇ ನಾಳಿನ ನಾಗರಿಕರಾದ ನೀವುಗಳು ಭಾರತದ ಪ್ರಬುದ್ಧ ಪ್ರಜೆಗಳಾಗಿ ಜೀವಿಸಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.</p>.<p>ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಶಾಲೆಯು ಪ್ರಾರಂಭವಾದ ದಿನದಿಂದಲೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದು, ಮಕ್ಕಳು ಸಂತಸದಿಂದ ತಮ್ಮನ್ನು ತಾವು ಕಲಿಕೆಯಲ್ಲಿ ತೊಡಗಿಸಿಕೊಂಡು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿ ಹೊರಹೊಮ್ಮಲಿ ಎನ್ನುವುದು ನಮ್ಮ ಆಶಯವಾಗಿದೆ ಎಂದರು.</p>.<p>ಅರಿಕೇರಿ ಅಮೋಘಸಿದ್ದೇಶ್ವರ ದೇವಸ್ಥಾನದ ಧರ್ಮದರ್ಶಿ ಅಪ್ಪು ಒಡೆಯರ, ಬಿಜೆಪಿ ಜತ್ತ ತಾಲ್ಲೂಕಿನ ಅಧ್ಯಕ್ಷ ರಮೇಶ ದೇವರ್ಷಿ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಪಾಟೀಲ, ಮಣಪ್ಪುರಂ ಗೋಲ್ಡ್ ಫೈನಾನ್ಸ್ ಶಾಖಾ ವ್ಯವಸ್ಥಾಪಕ ಭರತ ದಾಶಾಳ ಮಾತನಾಡಿದರು.</p>.<p>ಲಕ್ಷ್ಮಣ ಬಿರಾದಾರ, ಮಹೇಶ ಕೋಳಿ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನೀಲಾ ಜತ್ತಿ, ಆಡಳಿತಾಧಿಕಾರಿ ಮಧು ಬಿರಾದಾರ, ಮುಖ್ಯ ಶಿಕ್ಷಕಿ ರಾಜಶ್ರೀ ಮುಳಜಿ, ಸೌಮ್ಯ ಗಲಗಲಿ, ಪೃಥ್ವಿ, ರಾಘವೇಂದ್ರ ರಾಥೋಡ, ಮಂಜುನಾಥ ಕುಡಚಿ, ಬಸವರಾಜ ಬರಗಿ, ಶಿಕ್ಷಕ ಆನಂದ, ಪರಶುರಾಮ ಬಗಲಿ ಭಾಗವಹಿಸಿದ್ದರು.</p>.<p>ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರದ ಮಕ್ಕಳಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು. ಸಾರವಾಡದ ಗೊಂಬೆ ಕುಣಿತದೊಂದಿಗೆ ಬಡಾವಣೆಯಲ್ಲಿ ಗಣೇಶನ ಮೂರ್ತಿಯ ಮೆರವಣಿಗೆ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಶಿಕ್ಷಣ ಸಂಸ್ಥೆಗಳಲ್ಲಿಯೂ ಗಣೇಶನನ್ನು ಪ್ರತಿಷ್ಠಾಪಿಸಿ ಮಕ್ಕಳ ಮನಸ್ಸನ್ನು ಮುದಗೊಳಿಸಿ ಅವರನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ಸಂತಸ ತಂದಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.</p>.<p>ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪಾಲಕರು ಹಾಗೂ ಶಿಕ್ಷಕರು ಕೇವಲ ಮಗುವಿನ ಅಂಕಗಳನ್ನು ನೋಡದೆ ಆತನ ಸಾಮರ್ಥ್ಯವನ್ನು ಗುರುತಿಸಬೇಕಾಗಿದೆ ಎಂದರು.</p>.<p>ಯುವ ವಕೀಲ ಮಹಮ್ಮದ್ ಗೌಸ್ ಹವಾಲ್ದಾರ್ ಮಾತನಾಡಿ, ಈ ನಾಡಿನಲ್ಲಿ ಯಾರೂ ಕೇವಲ ಹಿಂದುಗಳಾಗಿ ಬದುಕಬೇಡಿ, ಮುಸ್ಲಿಮರಾಗಿ ಬದುಕಬೇಡಿ, ಜೈನರಾಗಿ ಬದುಕಬೇಡಿ, ಸಿಖ್ ರಾಗಿ ಬದುಕಬೇಡಿ, ಇಂದಿನ ಮಕ್ಕಳೇ ನಾಳಿನ ನಾಗರಿಕರಾದ ನೀವುಗಳು ಭಾರತದ ಪ್ರಬುದ್ಧ ಪ್ರಜೆಗಳಾಗಿ ಜೀವಿಸಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.</p>.<p>ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಶಾಲೆಯು ಪ್ರಾರಂಭವಾದ ದಿನದಿಂದಲೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದು, ಮಕ್ಕಳು ಸಂತಸದಿಂದ ತಮ್ಮನ್ನು ತಾವು ಕಲಿಕೆಯಲ್ಲಿ ತೊಡಗಿಸಿಕೊಂಡು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿ ಹೊರಹೊಮ್ಮಲಿ ಎನ್ನುವುದು ನಮ್ಮ ಆಶಯವಾಗಿದೆ ಎಂದರು.</p>.<p>ಅರಿಕೇರಿ ಅಮೋಘಸಿದ್ದೇಶ್ವರ ದೇವಸ್ಥಾನದ ಧರ್ಮದರ್ಶಿ ಅಪ್ಪು ಒಡೆಯರ, ಬಿಜೆಪಿ ಜತ್ತ ತಾಲ್ಲೂಕಿನ ಅಧ್ಯಕ್ಷ ರಮೇಶ ದೇವರ್ಷಿ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಪಾಟೀಲ, ಮಣಪ್ಪುರಂ ಗೋಲ್ಡ್ ಫೈನಾನ್ಸ್ ಶಾಖಾ ವ್ಯವಸ್ಥಾಪಕ ಭರತ ದಾಶಾಳ ಮಾತನಾಡಿದರು.</p>.<p>ಲಕ್ಷ್ಮಣ ಬಿರಾದಾರ, ಮಹೇಶ ಕೋಳಿ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನೀಲಾ ಜತ್ತಿ, ಆಡಳಿತಾಧಿಕಾರಿ ಮಧು ಬಿರಾದಾರ, ಮುಖ್ಯ ಶಿಕ್ಷಕಿ ರಾಜಶ್ರೀ ಮುಳಜಿ, ಸೌಮ್ಯ ಗಲಗಲಿ, ಪೃಥ್ವಿ, ರಾಘವೇಂದ್ರ ರಾಥೋಡ, ಮಂಜುನಾಥ ಕುಡಚಿ, ಬಸವರಾಜ ಬರಗಿ, ಶಿಕ್ಷಕ ಆನಂದ, ಪರಶುರಾಮ ಬಗಲಿ ಭಾಗವಹಿಸಿದ್ದರು.</p>.<p>ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರದ ಮಕ್ಕಳಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು. ಸಾರವಾಡದ ಗೊಂಬೆ ಕುಣಿತದೊಂದಿಗೆ ಬಡಾವಣೆಯಲ್ಲಿ ಗಣೇಶನ ಮೂರ್ತಿಯ ಮೆರವಣಿಗೆ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>