<p><strong>ವಿಜಯಪುರ:</strong>ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ವೇದಿಕೆಗೆ ಆಗಮಿಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಘೇರಾವ್ ಹಾಕಿದರು.</p>.<p>‘ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವೆ ಧ್ವಜಾರೋಹಣ ನೆರವೇರಿಸುವುದು ಮಾಡುವುದು ಬೇಡ’, ‘ಸಚಿವೆ ಜೊಲ್ಲೆಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ, ಕಪ್ಪು ಬಟ್ಟೆ ಪ್ರದರ್ಶಿಸಿದರು.</p>.<p>ತಕ್ಷಣಪೊಲೀಸರು ಪ್ರತಿಭಟನಾಕಾರರನ್ನು ತಡೆದು, ವಶಕ್ಕೆ ಪಡೆದರು. ಕೆಲ ಸಮಯದ ಬಳಿಕ ಅವರನ್ನು ಬಿಡುಗಡೆಗೊಳಿಸಿದರು.</p>.<p class="Subhead"><strong>ಯಾವುದೇ ತಪ್ಪು ಮಾಡಿಲ್ಲ:</strong>‘ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಏಳಿಗೆಯನ್ನು ಸಹಿಸದ ಶತೃಗಳು ಮತ್ತು ಹಿತ ಶತೃಗಳು ದುರುದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ನಾನು ಈ ಷಡ್ಯಂತ್ರಕ್ಕೆ ಬಲಿಯಾಗಿಲ್ಲ. ಯಾವುದೇ ತನಿಖೆಗೂ ಸಿದ್ಧ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಅಕ್ಕಮಹಾದೇವಿ ಅವರ ‘ಬೆಟ್ಟದ ಮೇಲೊಂದು ಮನೆಯ ಮಾಡಿ’ ವಚನವನ್ನು ವಾಚಿಸಿ, ‘ಸಾರ್ವಜನಿಕ ಜೀವನದಲ್ಲಿ ಸ್ತುತಿ, ನಿಂದನೆ ಸಹಜ. ಶಾಂತವಾಗಿ, ಧೈರ್ಯದಿಂದ ಎದುರಿಸುತ್ತೇನೆ’ಎಂದರು.</p>.<p><a href="https://www.prajavani.net/district/haveri/bc-patila-asks-when-siddaramaiah-learnt-astrology-857996.html" itemprop="url">ಸಿದ್ದರಾಮಯ್ಯ ಯಾವಾಗ ಭವಿಷ್ಯ ಹೇಳೋದನ್ನು ಕಲಿತ್ರು?: ಬಿ.ಸಿ.ಪಾಟೀಲ </a></p>.<p>ರಾಜಕೀಯದಲ್ಲಿ ಮಹಿಳೆಯರನ್ನು ನೋಡುವ ದೃಷ್ಟಿಯೇ ಬೇರೆಯಾಗಿರುವ ಈ ಸಂದರ್ಭದಲ್ಲಿ ಸ್ವಸಾಮಾರ್ಥ್ಯದಿಂದ ಕಷ್ಟಪಟ್ಟು ಮೇಲೆ ಬಂದಿದ್ದೇನೆ. ತಪ್ಪೇ ಮಾಡದಿರುವಾಗ ಅಂಜುವುದಿಲ್ಲ</p>.<p>– ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ವೇದಿಕೆಗೆ ಆಗಮಿಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಘೇರಾವ್ ಹಾಕಿದರು.</p>.<p>‘ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವೆ ಧ್ವಜಾರೋಹಣ ನೆರವೇರಿಸುವುದು ಮಾಡುವುದು ಬೇಡ’, ‘ಸಚಿವೆ ಜೊಲ್ಲೆಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ, ಕಪ್ಪು ಬಟ್ಟೆ ಪ್ರದರ್ಶಿಸಿದರು.</p>.<p>ತಕ್ಷಣಪೊಲೀಸರು ಪ್ರತಿಭಟನಾಕಾರರನ್ನು ತಡೆದು, ವಶಕ್ಕೆ ಪಡೆದರು. ಕೆಲ ಸಮಯದ ಬಳಿಕ ಅವರನ್ನು ಬಿಡುಗಡೆಗೊಳಿಸಿದರು.</p>.<p class="Subhead"><strong>ಯಾವುದೇ ತಪ್ಪು ಮಾಡಿಲ್ಲ:</strong>‘ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಏಳಿಗೆಯನ್ನು ಸಹಿಸದ ಶತೃಗಳು ಮತ್ತು ಹಿತ ಶತೃಗಳು ದುರುದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ನಾನು ಈ ಷಡ್ಯಂತ್ರಕ್ಕೆ ಬಲಿಯಾಗಿಲ್ಲ. ಯಾವುದೇ ತನಿಖೆಗೂ ಸಿದ್ಧ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಅಕ್ಕಮಹಾದೇವಿ ಅವರ ‘ಬೆಟ್ಟದ ಮೇಲೊಂದು ಮನೆಯ ಮಾಡಿ’ ವಚನವನ್ನು ವಾಚಿಸಿ, ‘ಸಾರ್ವಜನಿಕ ಜೀವನದಲ್ಲಿ ಸ್ತುತಿ, ನಿಂದನೆ ಸಹಜ. ಶಾಂತವಾಗಿ, ಧೈರ್ಯದಿಂದ ಎದುರಿಸುತ್ತೇನೆ’ಎಂದರು.</p>.<p><a href="https://www.prajavani.net/district/haveri/bc-patila-asks-when-siddaramaiah-learnt-astrology-857996.html" itemprop="url">ಸಿದ್ದರಾಮಯ್ಯ ಯಾವಾಗ ಭವಿಷ್ಯ ಹೇಳೋದನ್ನು ಕಲಿತ್ರು?: ಬಿ.ಸಿ.ಪಾಟೀಲ </a></p>.<p>ರಾಜಕೀಯದಲ್ಲಿ ಮಹಿಳೆಯರನ್ನು ನೋಡುವ ದೃಷ್ಟಿಯೇ ಬೇರೆಯಾಗಿರುವ ಈ ಸಂದರ್ಭದಲ್ಲಿ ಸ್ವಸಾಮಾರ್ಥ್ಯದಿಂದ ಕಷ್ಟಪಟ್ಟು ಮೇಲೆ ಬಂದಿದ್ದೇನೆ. ತಪ್ಪೇ ಮಾಡದಿರುವಾಗ ಅಂಜುವುದಿಲ್ಲ</p>.<p>– ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>